ಭಾರತಕ್ಕೆ ವಿಜಯ ಮಲ್ಯ ಹಸ್ತಾಂತರದ ಕುರಿತು ಇಂದು ತೀರ್ಪು
Recommended Video
ಲಂಡನ್, ಡಿಸೆಂಬರ್ 10: ಮದ್ಯ ದೊರೆ, ಆರ್ಥಿಕ ಅಪರಾಧಿ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತಂತೆ ಲಂಡನ್ನಿನ ನ್ಯಾಯಾಲಯದಲ್ಲಿ ಸೋಮವಾರ ತೀರ್ಪು ಹೊರಬೀಳುವ ಸಾಧ್ಯತೆ ಇದೆ.
'ಆರ್ಥಿಕ ಅಪರಾಧಿ' ಘೋಷಣೆಗೆ ತಡೆ ಕೋರಿದ್ದ ಮಲ್ಯಗೆ ಹಿನ್ನಡೆ
"ನಾನು ಒಂದೇ ಒಂದು ರೂಪಾಯಿ ಹಣವನ್ನೂ ಸಾಲ ಪಡೆದಿಲ್ಲ. ಸಾಲ ಪಡೆದಿದ್ದು ಕಿಂಗ್ ಫಿಶರ್ ಏರ್ ಲೈನ್ಸ್. ಉದ್ಯಮದ ವೈಫಲ್ಯದಿಂದಾಗಿ ನಷ್ಟವಾಗಿದೆ. ನಾನೊಬ್ಬ ಗ್ಯಾರಂಟರ್ ಆಗಿರುವ ನನ್ನನ್ನು ಬಂಧಿಸಿದ್ದು ಸರಿಯಲ್ಲ" ಎಂದು ವಿಜಯ ಮಲ್ಯ ಟ್ವೀಟ್ ಮಾಡಿದ್ದರು.
ಆರ್ಥಿಕ ಅಪರಾಧಿ ಟ್ಯಾಗ್ : ಸುಪ್ರೀಂನಿಂದ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್
ಭಾರತದ ಹತ್ತಾರು ಬ್ಯಾಂಕುಗಳಿಂದ ಸಾವಿರಾರು ಕೋಟಿ ರು ಗಳನ್ನು ಸಾಲದ ರೂಪದಲ್ಲಿ ಪಡೆದು, ಉದ್ದೇಶಪೂರ್ವಕ ಸುಸ್ತಿದಾರ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಸಾಲದ ಅಸಲು ತೀರಿಸಲು ಸಿದ್ಧ ಎಂದು ಇತ್ತೀಚೆಗೆ ಹೇಳಿದ್ದರು.
ಮ್ಮನ್ನು ಆರ್ಥಿಕ ಅಪರಾಧಿ ಎಂದು ಹೊಸ ತಿದ್ದುಪಡಿ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯವು ಕರೆದು, ದೋಷರೋಪಣ ಸಲ್ಲಿಸಲು ಮುಂದಾಗಿರುವುದಕ್ಕೆ ತಡೆ ನೀಡುವಂತೆ ಕೋರಿ, ಕೋರ್ಟಿಗೆ ಅರ್ಜಿ ಹಾಕಿದ್ದರು. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಅರ್ಜಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಮಲ್ಯ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.