ಪಿಎನ್ಬಿ ಹಗರಣ: ನೀರವ್ ಮೋದಿ ಜಾಮೀನು ಅರ್ಜಿ ಸತತ 7ನೇ ಬಾರಿಗೆ ವಜಾ
ಲಂಡನ್, ಅ. 27: ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಉದ್ಯಮಿ ನೀರವ್ ಮೋದಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸತತ 7ನೇ ಬಾರಿಗೆ ವಜಾಗೊಂಡಿದೆ. ಲಂಡನ್ನಿನ ಕೋರ್ಟ್ ನೀರವ್ ಅರ್ಜಿಯನು ತಿರಸ್ಕರಿಸಿದೆ.
ಮುಂಬೈ ಶಾಖೆಯೊಂದರಲ್ಲಿ 13,000 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ನಿನಲ್ಲಿ ಬಂಧಿಯಾಗಿದ್ದಾರೆ. ಮಾರ್ಚ್ 19ರಂದು ಲಂಡನ್ನಿನ ಸ್ಕಾಟ್ಲೆಂಡ್ ಯಾರ್ಡ್ ಅಧಿಕಾರಿಗಳು, ನೀರವ್ ಅವರನ್ನು ಬಂಧಿಸಿದ್ದರು.
ಲಂಡನ್ ನ ವೆಸ್ಟ್ ಮಿನ್ ಸ್ಟರ್ ನ್ಯಾಯಾಲಯದಲ್ಲಿ ಮಾರ್ಚ್ 20, 29 , ಮೇ 8 ಹಾಗೂ ನವೆಂಬರ್ 8 ರಂದು ನಾಲ್ಕು ಬಾರಿ ನೀರವ್ ಮೋದಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಲ್ಲದೆ 2019ರ ಮಾರ್ಚ್ 5 ಹಾಗೂ ಜೂನ್ 12ರಂದು ಲಂಡನ್ ಹೈಕೋರ್ಟ್ ನಿಂದಲೂ ಜಾಮೀನು ಪಡೆಯಲು ಯತ್ನಿಸಿದ್ದರು. ಆದರೆ ಎರಡು ನ್ಯಾಯಾಲಯದಲ್ಲೂ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ನೀರವ್ ಮೋದಿ ಅವರಿಗೆ ಸಂಬಂಧಿಸಿದ ಆಸ್ತಿ, ವಸ್ತುಗಳನ್ನು ಜಪ್ತಿ, ಹರಾಜು ಹಾಕಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ನೀರವ್ ಪತ್ನಿ ಅಮಿ ಮೋದಿಗೆ ಇಂಟರ್ ಪೋಲ್ ಸಂಸ್ಥೆಯಿಂದ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದ ಅರೋಪಿಗಳಾದ ನೀರವ್ ಮೋದಿ, ಮೆಹುಲ್ ಚೊಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದು, ವಿವಿಧ ತನಿಖಾ ಸಂಸ್ಥೆಗಳು ಇವರಿಬ್ಬರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications