ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಅಡ್ಡಿಯಿಲ್ಲ: ಲಂಡನ್ ಕೋರ್ಟ್
ಲಂಡನ್, ಫೆಬ್ರವರಿ 25: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಹಗರಣದಲ್ಲಿ ಭಾರತಕ್ಕೆ ಬೇಕಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ, ಆಭರಣ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಬಹುದು ಎಂದು ಬ್ರಿಟನ್ ನ್ಯಾಯಾಲಯ ಗುರುವಾರ ಹೇಳಿದೆ. ಭಾರತದಲ್ಲಿನ ಜೈಲುಗಳ ಸ್ಥಿತಿ ಚೆನ್ನಾಗಿಲ್ಲ ಹಾಗೂ ಕೊರೊನಾ ವೈರಸ್ ಸಾಂಕ್ರಾಮಿಕದ ಸಂದರ್ಭದಲ್ಲಿ ತಮ್ಮ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದು ನೀರವ್ ಮೋದಿ ವಾದವನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.
ಸುಮಾರು 14,000 ಕೋಟಿ ರೂ ವಂಚನೆ ಪ್ರಕರಣದಲ್ಲಿ ಸಿಲುಕಿ ದೇಶದಿಂದ ಪರಾರಿಯಾಗಿದ್ದ ನೀರವ್ ಮೋದಿ, ಭಾರತಕ್ಕೆ ತಮ್ಮನ್ನು ಗಡಿಪಾರು ಮಾಡದಂತೆ ಎರಡು ವರ್ಷಗಳಿಂದ ನಡೆಸುತ್ತಿರುವ ಕಾನೂನು ಹೋರಾಟದಲ್ಲಿ ಸೋಲು ಅನುಭವಿಸಿದಂತಾಗಿದೆ.
ನೀರವ್ ಮೋದಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತಾದ ಮೇಲ್ನೋಟದ ಪುರಾವೆಗಳನ್ನು ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ಸ್ನ ಜಿಲ್ಲಾ ನ್ಯಾಯಾಧೀಶ ಸಾಮ್ಯುಯೆಲ್ ಗೂಜೀ ಒಪ್ಪಿಕೊಂಡರು. ಇವುಗಳಲ್ಲಿ ಅನೇಕ ವಿಚಾರಗಳು ಭಾರತದಲ್ಲಿ ವಿಚಾರಣೆ ನಡೆಸಲು ಅರ್ಹವಾಗಿವೆ. ಅವರನ್ನು ಶಿಕ್ಷೆಗೆ ಒಳಪಡಿಸಬಹುದಾದ ಪುರಾವೆಗಳಿವೆ ಎಂದು ಹೇಳಿದರು.

ಭಾರತದಲ್ಲಿನ ಕಾರಾಗೃಹ ಗುಣಮಟ್ಟ ತೃಪ್ತಿದಾಯಕವಾಗಿದೆ. ಬ್ಯಾರಕ್ 12 ಅನ್ನು ಬಂಧನಕ್ಕೆ ಯೋಗ್ಯ ಎಂದು ಪರಿಗಣಿಸಬಹುದಾಗಿದೆ. ವಾಸ್ತವವಾಗಿ ಅವರು ಈಗ ಲಂಡನ್ನ ಬಂಧನದಲ್ಲಿರುವ ಜೈಲಿಗಿಂತಲೂ ಬ್ಯಾರಕ್ 12ರ ಸ್ಥಿತಿ ಉತ್ತಮವಾಗಿದೆ ಎಂದು ಕೋರ್ಟ್ ಹೇಳಿತು. ಜತೆಗೆ ಭಾರತದಲ್ಲಿ ನೀರವ್ ಮೋದಿಗೆ ನೀಡಲು ಉದ್ದೇಶಿಸಿರುವ ವೈದ್ಯಕೀಯ ಸಿದ್ಧತೆಯೂ ಒಪ್ಪುವ ರೀತಿಯಲ್ಲಿದೆ ಎಂದು ತಿಳಿಸಿತು.
'ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡುವುದು ಮಾನವಹಕ್ಕುಗಳಿಗೆ ಪೂರಕವಾಗಿ ಇದೆ ಎನ್ನುವುದು ನನಗೆ ತೃಪ್ತಿ ನೀಡಿದೆ. ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವರಿಗೆ ಅಧಿಕಾರವಿದೆ. ನೀರವ್ ಮೋದಿಯನ್ನು ಗಡಿಪಾರು ಮಾಡಿದರೆ ನ್ಯಾಯ ಸಿಗುವುದಿಲ್ಲ ಎನ್ನುವುದಕ್ಕೆ ಯಾವ ಸಾಕ್ಷ್ಯವೂ ಇಲ್ಲ' ಎಂದ ನ್ಯಾಯಾಧೀಶರು, ಭಾರತ ಸರ್ಕಾರ ಸಲ್ಲಿಸಿದ್ದ ದಾಖಲೆಗಳನ್ನು ಅಂಗೀಕರಿಸಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications