ವಿಕಿಲೀಕ್ಸ್ ಸಂಸ್ಥಾಪಕ ಅಸ್ಸಾಂಜ್ ಗಡಿಪಾರಿಗೆ ಬ್ರಿಟನ್ ಒಪ್ಪಿಗೆ
ಲಂಡನ್, ಜೂನ್ 13: ಬೇಹುಗಾರಿಕೆ ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿರುವ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜ್ ಅವರನ್ನು ಅಮೆರಿಕಕ್ಕೆ ಗಡಿಪಾರು ಮಾಡುವ ಒಪ್ಪಂದಕ್ಕೆ ಇಂಗ್ಲೆಂಡ್ ಸಹಿಹಾಕಿದೆ.
ಇಂಗ್ಲೆಂಡ್ನ ಗೃಹ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಬುಧವಾರ ಗಡಿಪಾರು ಒಪ್ಪಂದ ಪತ್ರಗಳಿಗೆ ಸಹಿ ಹಾಕಿದರು. ಆಸ್ಟ್ರೇಲಿಯಾ ಮೂಲದ 47 ವರ್ಷದ ಅಸ್ಸಾಂಜ್ ಅವರನ್ನು ಗಡಿಪಾರು ಮಾಡುವಂತೆ ಮಂಗಳವಾರ ಅಮೆರಿಕದ ನ್ಯಾಯಾಂಗ ಇಲಾಖೆ ಕೋರಿತ್ತು.
ಅಸ್ಸಾಂಜ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದಕ್ಕೆ ಪೊಲೀಸರನ್ನು ಮೊದಲು ಅಭಿನಂದಿಸುತ್ತೇನೆ. ಇಂಗ್ಲೆಂಡ್ ಕಾನೂನುಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಅಸ್ಸಾಂಜ್ ಈಗ ಕಂಬಿಯ ಹಿಂದಿದ್ದಾರೆ. ಅವರನ್ನು ಗಡಿಪಾರು ಮಾಡುವಂತೆ ಅಮೆರಿಕದಿಂದ ಮನವಿ ಬಂದಿತ್ತು. ಅವರ ಗಡಿಪಾರಿಗೆ ನಿನ್ನೆ ನಾನು ಸಹಿ ಹಾಕಿ ಪ್ರಮಾಣೀಕರಿಸಿದ್ದೇನೆ. ನಾಳೆ ಇದು ನ್ಯಾಯಾಲಯದ ಮುಂದೆ ಹೋಗಲಿದೆ ಎಂದು ಜಾವಿದ್ ತಿಳಿಸಿದ್ದಾರೆ.

ಶುಕ್ರವಾರ ಲಂಡನ್ ನ್ಯಾಯಾಲಯದಲ್ಲಿ ಅಮೆರಿಕವು ಅಸ್ಸಾಂಜ್ನ ಗಡಿಪಾರಿನ ಅಗತ್ಯದ ಕುರಿತು ಹಾಗೂ ಅವರ ವಿರುದ್ಧದ ಆರೋಪಗಳ ಕುರಿತು ವಿವರ ನೀಡಲಿದೆ.
ಅತ್ಯಾಚಾರದ ಆರೋಪ ಎದುರಿಸುತ್ತಿದ್ದ ಅಸ್ಸಾಂಜ್, 2012ರಲ್ಲಿ ಸ್ವೀಡನ್ನಿಂದ ಗಡಿಪಾರಾಗುವುದನ್ನು ತಪ್ಪಿಸಿಕೊಳ್ಳಲು ಲಂಡನ್ನಲ್ಲಿರುವ ಈಕ್ವೆಡಾರ್ ರಾಯಭಾರ ಕಚೇರಿಯಲ್ಲಿ ಏಳು ವರ್ಷ ಆಶ್ರಯ ಪಡೆದಿದ್ದರು. ಆದರೆ, ಜಾಮೀನು ನಿಯಮ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಈಕ್ವೆಡಾರ್ನ ಅಧಿಕಾರಿಗಳು ಕಳೆದ ಏಪ್ರಿಲ್ನಲ್ಲಿ ಬ್ರಿಟನ್ ಪೊಲೀಸರಿಗೆ ಒಪ್ಪಿಸಿದ್ದರು. ಸದ್ಯ ಅವರು 50 ವಾರಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications