ಭಾರತಕ್ಕೆ ಗಡಿ ಪಾರು: ನ್ಯಾಯಾಲಯದ ಮೊರೆ ಹೋಗುತ್ತೇನೆಂದ ಮಲ್ಯ
ಲಂಡನ್, ಫೆಬ್ರವರಿ 05: ಸಾಲಮಾಡಿ ದೇಶ ಬಿಟ್ಟು ಹೋಗಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಸರ್ಕಾರ ಒಪ್ಪಿಗೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಜಯ್ ಮಲ್ಯ ತಾನು ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಾಕಿಕೊಂಡಿರುವ ವಿಜಯ್ ಮಲ್ಯ, ಡಿಸೆಂಬರ್ 10, 2018 ರಂದು ಗಡಿಪಾರಿನ ಆದೇಶವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಾಡಿದಾಗ ಮೇಲ್ಮನವಿ ಸಲ್ಲಿಸುವ ಉದ್ದೇಶ ಇತ್ತು. ಆದರೆ ಗೃಹ ಕಾರ್ಯದರ್ಶಿ ಅವರ ನಿರ್ಧಾರ ಪ್ರಕಟವಾಗಲು ಕಾಯುತ್ತಿದೆ ಎಂದು ಮಲ್ಯ ಬರೆದುಕೊಂಡಿದ್ದಾರೆ.
ಇಂದು ಗೃಹ ಕಾರ್ಯದರ್ಶಿ ಅವರು ಮಲ್ಯ ಗಡಿಪಾರಿಗೆ ಒಪ್ಪಿಗೆ ನೀಡಿದ್ದು, ಮೇಲ್ಮನವಿ ಸಲ್ಲಿಸಲು 14 ದಿನಗಳ ಕಾಲಾವಕಾಶವನ್ನು ಸಹ ನೀಡಲಾಗಿದೆ. ಹಾಗಾಗಿ ಮಲ್ಯ ಅವರು ಮೇಲ್ಮನವಿ ಸಲ್ಲಿಸುವುದಾಗಿ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.
After the decision was handed down on December 10,2018 by the Westminster Magistrates Court, I stated my intention to appeal. I could not initiate the appeal process before a decision by the Home Secretary. Now I will initiate the appeal process.
— Vijay Mallya (@TheVijayMallya) February 4, 2019
13,700 ಕೋಟಿ ಸಾಲ ಪಾವತಿಸದೆ ದೇಶಬಿಟ್ಟು ಪರಾರಿ ಆಗಿರುವ ವಿಜಯ್ ಮಲ್ಯ ಅವರು ದೇಶಬ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿದ್ದಾರೆ. ಅವರನ್ನು ಭಾರತಕ್ಕೆ ಕರೆತರುವ ಸಲುವಾಗಿ ಕೇಂದ್ರ ಸರ್ಕಾರವು ಇನ್ನಿಲದ ಯತ್ನಗಳನ್ನು ಮಾಡುತ್ತಿದೆ.
ಉದ್ಯಮಿ ವಿಜಯ ಮಲ್ಯ ಗಡಿಪಾರಿಗೆ ಬ್ರಿಟನ್ ಒಪ್ಪಿಗೆ
ಉದ್ಯಮಿ ವಿಜಯ ಮಲ್ಯ ಗಡಿಪಾರಿಗೆ ಬ್ರಿಟನ್ ಒಪ್ಪಿಗೆ