ಬ್ರಿಟನ್ನಲ್ಲಿಯೇ ಉಳಿಯಲು ವಿಜಯ್ ಮಲ್ಯ 'ಮತ್ತೊಂದು ಮಾರ್ಗ'ದ ತಂತ್ರ
ಲಂಡನ್, ಜನವರಿ 23: ಭಾರತದಿಂದ ಪರಾರಿಯಾಗಿ ಬ್ರಿಟನ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ, ಯುನೈಟೆಡ್ ಕಿಂಗ್ಡಮ್ನಲ್ಲಿಯೇ ಉಳಿದುಕೊಳ್ಳಲು ನೆರವಾಗುವ 'ಇನ್ನೊಂದು ಮಾರ್ಗ'ಕ್ಕಾಗಿ ಅಲ್ಲಿನ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭಾರತದಲ್ಲಿ ಬ್ಯಾಂಕುಗಳಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ವಂಚಿಸಿದ ಆರೋಪದಲ್ಲಿ ದೇಶಭ್ರಷ್ಟ ಆರ್ಥಿಕ ಅಪರಾಧಿ ಹಣೆಪಟ್ಟಿ ಅಂಟಿಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಬ್ರಿಟನ್ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದರ ವಿರುದ್ಧ ಬ್ರಿಟನ್ ಸುಪ್ರೀಂಕೋರ್ಟ್ನಲ್ಲಿ ವಿಜಯ್ ಮಲ್ಯ ಕಾನೂನು ಹೋರಾಟ ನಡೆಸಿದ್ದು, ಕಳೆದ ವರ್ಷ ಮಲ್ಯ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.
ಕಿಂಗ್ ಫಿಶರ್ ಏರ್ಲೈನ್ಸ್ ವಿಮಾನ ಸಂಸ್ಥೆಯ ಹೆಸರಿನಲ್ಲಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಭಾರತಕ್ಕೆ ಗಡಿಪಾರು ಮಾಡುವ ಆದೇಶಕ್ಕೆ ಪ್ರೀತಿ ಪಟೇಲ್ ಸಹಿ ಹಾಕುವವರೆಗೂ ಬ್ರಿಟನ್ನಲ್ಲಿ ಜಾಮೀನಿನ ಮೇಲೆ ಉಳಿದುಕೊಳ್ಳಲು ಅವಕಾಶವಿದೆ.

ಗಡಿಪಾರು ಆದೇಶ ಅಧಿಕೃತವಾಗಿ ಹೊರಬರುವವರೆಗೂ ಗೋಪ್ಯ ಕಾನೂನು ಪ್ರಕ್ರಿಯೆ ಹಿನ್ನೆಲೆಯಲ್ಲಿ ನಡೆಯುತ್ತಲೇ ಇರುತ್ತದೆ ಎಂದು ಬ್ರಿಟನ್ ಗೃಹ ಕಚೇರಿ ಖಚಿತಪಡಿಸಿದೆ. ಹೀಗಾಗಿ ಮಲ್ಯ ಅವರು ಬ್ರಿಟನ್ನಲ್ಲಿ ರಾಜಾಶ್ರಯ ಕೋರಿದ್ದಾರೆ ಎಂಬ ಅನುಮಾನ ಹೆಚ್ಚಿಸಿದೆ. ಇದನ್ನು ಗೃಹ ಕಚೇರಿ ಖಚಿತಪಡಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ.
ಮಲ್ಯರ ಗಡಿಪಾರು ಆದೇಶವನ್ನು ಎತ್ತಿಹಿಡಿಯಲಾಗಿದ್ದರೂ, ಅವರು ರಾಜಾಶ್ರಯ ಪಡೆಯಲು ಪ್ರೀತಿ ಪಟೇಲ್ ಅವರಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಮಾರ್ಗವಿದೆ ಎಂದು ಮಲ್ಯ ಪರ ವಕೀಲ ಫಿಲಿಪ್ ಮಾರ್ಷಲ್ ತಿಳಿಸಿದ್ದಾರೆ. ಗಡಿಪಾರು ಮನವಿಗೆ ಮುನ್ನ ಮಲ್ಯ ರಾಜಾಶ್ರಯ ಕೋರಿದ್ದರೋ ಅಥವಾ ಬಳಿಕವೋ ಎನ್ನುವುದರ ಮೇಲೆ ಆಶ್ರಯದ ಕುರಿತಾದ ನಿರ್ಧಾರ ಅವಲಂಬಿತವಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications