ವಿಜಯ್ ಮಲ್ಯಗೆ ಮತ್ತೆ ಹಿನ್ನಡೆ: ಗಡಿಪಾರು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ
ಲಂಡನ್, ಏಪ್ರಿಲ್ 8: ಭಾರತಕ್ಕೆ ಗಡಿಪಾರು ಮಾಡಿರುವ ಆದೇಶವನ್ನು ಪ್ರಶ್ನಿಸಲು ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಸಲ್ಲಿಸಿದ್ದ ಲಿಖಿತ ಅರ್ಜಿಯನ್ನು ಲಂಡನ್ ನ್ಯಾಯಾಲಯವೊಂದು ತಿರಸ್ಕರಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇದರಿಂದ ಮಲ್ಯ ಅವರ ಪ್ರಕರಣದಲ್ಲಿ ಭಾರತದ ಪ್ರಯತ್ನಕ್ಕೆ ದೊಡ್ಡ ಯಶಸ್ಸು ಲಭಿಸಿದಂತಾಗಿದೆ. ಬ್ರಿಟಿಷ್ ಗೃಹ ಕಾರ್ಯದರ್ಶಿ ಸಹಿ ಹಾಕಿದ್ದ ತಮ್ಮ ಗಡಿಪಾರಿನ ಆದೇಶವನ್ನು ಪ್ರಶ್ನಿಸಲು ಅನುಮತಿ ನೀಡುವಂತೆ ಮಲ್ಯ ಇಂಗ್ಲೆಂಡ್ನ ಹೈಕೋರ್ಟ್ಗೆ ಲಿಖಿತ ಮನವಿ ಸಲ್ಲಿಸಿದ್ದರು. ಈಗ ಕೋರ್ಟ್ ಅವರ ಲಿಖಿತ ಮನವಿಯನ್ನು ತಿರಸ್ಕರಿಸಿರುವುದರಿಂದ ಮಲ್ಯ ಅವರಿಗೆ ಹಿನ್ನಡೆಯುಂಟಾಗಿದೆ. ಮುಂದೆ ಅವರು ಮೌಖಿಕ ವಿಚಾರಣೆಯನ್ನು ಎದುರಿಸಲಿದ್ದಾರೆ.
ದಿವಾಳಿಯಾಗಿರುವ ಕಿಂಗ್ ಫಿಶರ್ ವಿಮಾನಯಾನ ಸಂಸ್ಥೆಯು ಬ್ಯಾಂಕುಗಳಿಂದ ಮಾಡಿದ ಸಾಲವನ್ನು ಮರಳಿ ತೀರಿಸಲು ತನ್ನ ವಾಸ ವೆಚ್ಚವನ್ನು ಕಡಿತಗೊಳಿಸುವುದಾಗಿ ಮಲ್ಯ ಕೆಲವು ದಿನಗಳ ಹಿಂದೆ ಹೇಳಿದ್ದರು. ಮಲ್ಯ ಅವರಿಗೆ ವಾರಕ್ಕೆ ಗರಿಷ್ಠ 18,325.31 ಪೌಂಡ್ ಜೀವನವೆಚ್ಚ ಭತ್ಯೆಯ ಬಳಕೆಗೆ ಲಂಡನ್ನಲ್ಲಿ ಅವಕಾಶ ನೀಡಲಾಗಿತ್ತು. ಅದರಲ್ಲಿ ತಿಂಗಳಿಗೆ 29 ಸಾವಿರ ಪೌಂಡ್ ಕಡಿತಗೊಳಿಸಿಕೊಳ್ಳಿ ಎಂದು ಮಲ್ಯ ಆಫರ್ ನೀಡಿದ್ದರು.

13,700 ಕೋಟಿ ರೂಪಾಯಿ ಸಾಲ ಪಡೆದು ಮರಳಿಸದೆಯೇ 2016ರಿಂದ ಲಂಡನ್ಗೆ ತೆರಳಿ ಆಶ್ರಯ ಪಡೆದಿರುವ ವಿಜಯ್ ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಲಂಡನ್ನ ವೆಸ್ಟ್ ಮಿನಿಸ್ಟರ್ ಕೋರ್ಟ್ ಆದೇಶಿಸಿತ್ತು. ಈ ಆದೇಶಕ್ಕೆ ಬ್ರಿಟನ್ ಕಾರ್ಯದರ್ಶಿ ಸಹಿ ಹಾಕಿದ್ದರು. ಇದನ್ನು ವಿಜಯ್ ಮಲ್ಯ ಮೇಲಿನ ಕೋರ್ಟ್ನಲ್ಲಿ ಪ್ರಶ್ನಿಸಲು ಉದ್ದೇಶಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications