ನಾನು ಹಣ ವಾಪಸ್ ನೀಡಲು ಸಿದ್ಧ, ಆದರೆ ಸರ್ಕಾರವೇ ಬಿಡ್ತಿಲ್ಲ: ವಿಜಯ್ ಮಲ್ಯ ಆರೋಪ
Recommended Video

ಲಂಡನ್, ಫೆಬ್ರವರಿ 14: ಬ್ಯಾಂಕುಗಳಿಗೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣ ವಂಚನೆ ಮಾಡಿ ಪರಾರಿಯಾಗುವ ಮೂಲಕ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಉಲ್ಲೇಖಿಸಿರುವುದಕ್ಕೆ ಮಲ್ಯ, ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಆರ್ಥಿಕ ಅಪರಾಧಗಳನ್ನು ಎಸಗಿದ ಆರೋಪ ಹೊತ್ತು ದೇಶದಿಂದ ಪರಾರಿಯಾದವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ನಲ್ಲಿ ಮಾಡಿದ ಉಲ್ಲೇಖದ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಸಂಸತ್ನಲ್ಲಿ ತಮ್ಮ ಕೊನೆಯ ಭಾಷಣ ಮಾಡಿದ್ದ ಪ್ರಧಾನಿ ಮೋದಿ, 'ಓಡಿ ಹೋದ ವ್ಯಕ್ತಿಯೊಬ್ಬ, ತಾನು 9000 ಕೋಟಿಯೊಂದಿಗೆ ಓಡಿ ಹೋಗಿದ್ದೇನೆ, ಆದರೆ ಮೋದಿ 13,000 ಕೋಟಿ ವಾಪಸ್ ಪಡೆದುಕೊಂಡಿದ್ದಾರೆ ಎಂದು ಅಳುತ್ತಿದ್ದಾರೆ' ಎಂಬುದಾಗಿ ಹೇಳಿದ್ದರು. ಇದು ಲಂಡನ್ನಲ್ಲಿರುವ ವಿಜಯ್ ಮಲ್ಯ ಅವರನ್ನು ಕೆರಳಿಸಿದೆ.
|
ಪ್ರಧಾನಿ ಉತ್ತಮ ವಾಗ್ಮಿ
'ಪ್ರಧಾನಿಯವರು ಸಂಸತ್ನಲ್ಲಿ ಮಾಡಿದ ಕೊನೆಯ ಭಾಷಣ ನನ್ನ ಗಮನ ಸೆಳೆಯಿತು. ಅವರು ನಿಜವಾಗಿಯೂ ಒಬ್ಬ ಉತ್ತಮ ವಾಗ್ಮಿ. ಅವರು 9000 ಕೋಟಿ ರೂಪಾಯಿಯೊಂದಿಗೆ ಓಡಿ ಹೋಗಿರುವ ಹೆಸರು ಉಲ್ಲೇಖಿಸದ ವ್ಯಕ್ತಿ ಬಗ್ಗೆ ಉಲ್ಲೇಖ ಮಾಡಿರುವುದು ನನಗೆ ಗೊತ್ತಾಯಿತು. ಮಾಧ್ಯಮದ ವರದಿಗಳ ಮೂಲಕವೇ ಅದು ಅವರು ನನ್ನನ್ನು ಉದ್ದೇಶಿಸಿ ಹೇಳಿರುವುದು ಎಂಬುದು ತಿಳಿದುಬಂದಿತು' ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
|
ತಾವೇ ಶ್ರೇಯಸ್ಸು ಪಡೆದುಕೊಳ್ಳಬಹುದಾಗಿತ್ತು
'ನನ್ನ ಹಿಂದಿನ ಟ್ವೀಟ್ ಮುಂದುವರಿಸುತ್ತಾ, ನಾನು ಟೇಬಲ್ ಮೇಲೆ ಇರಿಸಿದ್ದ ಹಣವನ್ನು ತೆಗೆದುಕೊಳ್ಳಲು ಏಕೆ ಬ್ಯಾಂಕುಗಳಿಗೆ ಪ್ರಧಾನಿ ಸೂಚನೆ ನೀಡುತ್ತಿಲ್ಲ ಎಂದು ಗೌರವಯುತವಾಗಿ ಕೇಳುತ್ತಿದ್ದೇನೆ. ಇದರಿಂದ ಅವರು ಕಡೇಪಕ್ಷ ಕಿಂಗ್ ಫಿಶರ್ಗೆ ನೀಡಿದ ಎಲ್ಲ ಸಾರ್ವಜನಿಕರ ಹಣವನ್ನು ಸಂಪೂರ್ಣವಾಗಿ ವಸೂಲಿ ಮಾಡಿದ ಶ್ರೇಯಸ್ಸನ್ನು ತಾವೇ ಪಡೆದುಕೊಳ್ಳಬಹುದಾಗಿತ್ತು' ಎಂದು ಮಲ್ಯ ಹೇಳಿದ್ದಾರೆ.
|
ಈಗ ಶೂಸ್ ಬೇರೆ ಕಾಲುಗಳಲ್ಲಿದೆ
ನಾನು ಕರ್ನಾಟಕ ಹೈಕೋರ್ಟ್ ಮುಂದೆ ಎಲ್ಲ ಹಣವನ್ನು ಮರಳಿಸುವ ಬಗ್ಗೆ ಹೇಳಿದ್ದೆ. ಇದನ್ನು ನಿಷ್ಪ್ರಯೋಜಕ ಎಂದು ತಿರಸ್ಕರಿಸಲು ಸಾಧ್ಯವಿಲ್ಲ. ಇದು ಸಂಪೂರ್ಣ ಸ್ಪಷ್ಟ, ಪ್ರಾಮಾಣಿಕ, ನ್ಯಾಯಪರ ಹಾಗೂ ಆ ಕ್ಷಣಕ್ಕೆ ಒಪ್ಪಿಕೊಳ್ಳುವಂತಹ ಆಹ್ವಾನವಾಗಿತ್ತು. ಈಗ ಶೂಸ್ ಬೇರೆ ಕಾಲುಗಳಲ್ಲಿದೆ. ಕೆಎಫ್ಎಗೆ (ಕಿಂಗ್ ಫಿಶರ್ ಏರ್ಲೈನ್ಸ್) ನೀಡಿದ ಹಣವನ್ನು ಬ್ಯಾಂಕುಗಳು ಏಕೆ ಪಡೆದುಕೊಳ್ಳಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
|
ಬಚ್ಚಿಟ್ಟ ಆಸ್ತಿ ಇದೆಯೇ?
ನಾನು ನನ್ನ ಸಂಪತ್ತನ್ನು ಅಡಗಿಸಿಟ್ಟಿದ್ದೇನೆ ಎಂದು ಜಾರಿ ನಿರ್ದೇಶನ ಹೇಳಿರುವುದನ್ನು ಮಾಧ್ಯಮಗಳಲ್ಲಿ ಕಂಡು ದಿಗಿಲಾಗಿದೆ. ನನ್ನ ಬಳಿ ಬಚ್ಚಿಟ್ಟ ಸಂಪತ್ತು ಇದ್ದಿದ್ದರೆ ನ್ಯಾಯಾಲಯದ ಮುಂದೆ ಬಹಿರಂಗವಾಗಿ ಅಂದಾಜು 14 ಸಾವಿರ ರೂಪಾಯಿ ಕೋಟಿ ಆಸ್ತಿ ಇದೆ ಎಂದು ಹೇಗೆ ಹೇಳಿಕೊಳ್ಳಲು ಸಾಧ್ಯವಿತ್ತು? ಸಾರ್ವಜನಿಕ ಅಭಿಪ್ರಾಯವನ್ನು ನಾಚಿಕೆಗೇಡಿನ ರೀತಿ ತಪ್ಪುದಾರಿಗೆ ಎಳೆಯಲಾಗುತ್ತಿದೆ ಮತ್ತು ಇದು ಅಚ್ಚರಿಯೇನಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications