ವಿಕಿಲೀಕ್ಸ್ ಸಂಸ್ಥಾಪಕ ಅಸ್ಸಾಂಜೆಗೆ ಜಾಮೀನು ನಿರಾಕರಣೆ
ಲಂಡನ್, ಜನವರಿ 06: ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆಗೆ ಜಾಮೀನು ನೀಡಲು ಬ್ರಿಟನ್ನ ನ್ಯಾಯಾಧೀಶೆ ನಿರಾಕರಿಸಿದ್ದಾರೆ. ಜಾಮೀನು ನೀಡಿದರೆ ಅಸ್ಸಾಂಜೆ ಪರಾರಿಯಾಗುವ ಸಾಧ್ಯತೆ ಇದೆ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈಕ್ವೆಡಾರ್ ಪೌರತ್ವ ಪಡೆದು ಆಶ್ರಯ ಪಡೆದುಕೊಂಡಿದ್ದ ಅಸ್ಸಾಂಜೆ ಅವರನ್ನು ರಾಯಭಾರ ಕಚೇರಿಯಲ್ಲಿ ಲಂಡನ್ ಪೊಲೀಸರು ಬಂಧಿಸಿ, ಬ್ರಿಟನ್ ಜೈಲಿಗೆ ಕಳಿಸಿದ್ದರು.
ಬೇಹುಗಾರಿಕೆ ಪ್ರಕರಣದ ವಿಚಾರಣೆಗಾಗಿ ಅಮೆರಿಕಕ್ಕೆ ಹಸ್ತಾಂತರ ಮಾಡಲು ಯುಎಸ್ ಅಧಿಕಾರಿಗಳು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ವನೀಸ್ಸಾ ಬರೈಟ್ಸರ್ ತಿರಸ್ಕರಿಸಿದ ಮೇಲೆ ಈ ಆದೇಶ ಹೊರ ಬಂದಿದೆ.
49 ವರ್ಷ ವಯಸ್ಸಿನ ಅಸ್ಸಾಂಜೆ ಅವರು ಮಾನಸಿಕ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ. ಅಮೆರಿಕಕ್ಕೆ ಅಸ್ಸಾಂಜೆಯನ್ನು ಕಳುಹಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಬರೈಟ್ಸರ್ ಅಭಿಪ್ರಾಯಪಟ್ಟಿದ್ದರು.

ಏನಿದು ಪ್ರಕರಣ?:
ಆಸ್ಟ್ರೇಲಿಯಾ ಮೂಲದ ಜೂಲಿಯನ್ ಅಸಾಂಜೆ 2012ರಲ್ಲಿ ಸ್ವೀಡನ್ ಗೆ ಹಸ್ತಾಂತರವಾಗುವ ಭಯದಿಂದ ಈಕ್ವೆಡಾರ್ ರಾಯಭಾರಿ ಕಚೇರಿ ಪ್ರವೇಶಿಸಿ ಆಶ್ರಯ ಪಡೆದಿದ್ದರು. ಅವರ ಮೇಲೆ ಸ್ವೀಡನ್ನಿನಲ್ಲಿ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಆದರೆ ಅಸಾಂಜೆಗೆ ಸ್ವೀಡನ್ ಗಿಂತ ಹೆಚ್ಚಾಗಿ ಅಮೆರಿಕಾದ ಭಯವಿತ್ತು. ಸೇನೆ ಮತ್ತು ರಾಜತಾಂತ್ರಿಕ ದಾಖಲೆಗಳನ್ನು ವಿಕಿಲೀಕ್ಸ್ ನಲ್ಲಿ ಪ್ರಕಟಿಸಿದ್ದಕ್ಕಾಗಿ ಅಲ್ಲಿ ವಿಚಾರಣೆ ಎದುರಿಸಬೇಕಾಗಿ ಬರಬಹುದು ಎಂಬ ಭಯದಿಂದ ಈಕ್ವೆಡಾರ್ ಆಶ್ರಯ ಪಡೆದುಕೊಂಡಿದ್ದರು.
2017 ವರ್ಷವಷ್ಟೇ ಸ್ವೀಡನ್ ಅಸಾಂಜೆ ಮೇಲಿದ್ದ ಅತ್ಯಾಚಾರ ಪ್ರಕರಣವನ್ನು ಕೈಬಿಟ್ಟಿತ್ತು. ಆದರೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸುವುದಾಗಿ ಬ್ರಿಟನ್ ಹೇಳಿದ್ದರಿಂದ ಅಸಾಂಜೆ ಇನ್ನೂ ರಾಯಭಾರ ಕಚೇರಿಯಲ್ಲೇ ಆಶ್ರಯ ಪಡೆದಿದ್ದರು.
ಈಕ್ವೆಡಾರ್ ರಾಯಭಾರ ಕಚೇರಿಯಿಂದ ಅಸಾಂಜೆಯನ್ನು ಹೊರತರಲು ಅವರಿಗೆ ರಾಜತಾಂತ್ರಿಕ ಹುದ್ದೆ ನೀಡುವಂತೆ ಬ್ರಿಟನ್ ಗೆ ಈಕ್ವೆಡಾರ್ ಮನವಿ ಮಾಡಿಕೊಂಡಿತ್ತು. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದರಿಂದ ಏಪ್ರಿಲ್ 11, 2019ರಂದು ಈಕ್ವೆಡಾರ್ ರಾಜತಾಂತ್ರಿಕ ಕಚೇರಿಯಲ್ಲಿ ಮೆಟ್ರೊಪಾಲಿಟನ್ ಪೊಲೀಸ್ ಸರ್ವಿಸ್ನ ಅಧಿಕಾರಿಗಳು ಬಂಧಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications