1996ರಲ್ಲಿ ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ: ಕೈ ನಾಯಕ ಬಬ್ಬರ್ಗೆ 2 ವರ್ಷ ಜೈಲು ಶಿಕ್ಷೆ
ಲಕ್ನೋ ಜುಲೈ 7: ಬಾಲಿವುಡ್ ನಟ ಮತ್ತು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ವಿರುದ್ಧ 1996 ರಲ್ಲಿ ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಂಸದ/ಶಾಸಕ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡದೊಂದಿಗೆ ಶಿಕ್ಷೆಯನ್ನು ವಿಧಿಸಿದೆ. ವರದಿಗಳ ಪ್ರಕಾರ, ಬಬ್ಬರ್ ಅವರನ್ನು ಜೈಲಿಗೆ ಕಳುಹಿಸಲಾಗಿದೆ.
ರಾಜಕಾರಣಿಯಾಗಿ ಪರಿವರ್ತನೆಗೊಂಡ ನಟ ಬಬ್ಬರ್ಗೆ ನ್ಯಾಯಾಲಯ 8,500 ರೂಪಾಯಿ ದಂಡವನ್ನೂ ವಿಧಿಸಿದೆ. ಸರ್ಕಾರಿ ಕರ್ತವ್ಯಗಳಲ್ಲಿ ಹಸ್ತಕ್ಷೇಪ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕನನ್ನು ತಪ್ಪಿತಸ್ಥರೆಂದು ಗುರುತಿಸಲಾಗಿದೆ. 1996 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಬ್ಬರ್ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಬಬ್ಬರ್ ಆಗ ಸಮಾಜವಾದಿ ಪಕ್ಷದಲ್ಲಿದ್ದರು ಮತ್ತು ಲಕ್ನೋದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ವೇಳೆ ಘಟನೆ ನಡೆದಿತ್ತು.

ರಾಜ್ ಬಬ್ಬರ್ ವಿರುದ್ಧ ದೂರು
1996ರ ಮೇ 2ರಂದು ಈ ಘಟನೆ ನಡೆದಿತ್ತು. ಉತ್ತರ ಪ್ರದೇಶದ ವಜೀರ್ಗಂಜ್ ಪೊಲೀಸ್ ಠಾಣೆಯಲ್ಲಿ ಎರಡು ದಶಕಗಳ ಹಿಂದೆ ಬಬ್ಬರ್ ವಿರುದ್ಧ ಚುನಾವಣಾಧಿಕಾರಿಯೊಬ್ಬರು ದೂರು ದಾಖಲಿಸಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರಾಜ್ ಬಬ್ಬರ್ ನಿಂದ ಹಲ್ಲೆಗೊಳಗಾದ ಚುನಾವಣಾ ಅಧಿಕಾರಿಯನ್ನು ಕೃಷ್ಣ ಸಿಂಗ್ ರಾಣಾ ಎಂದು ಹೆಸರಿಸಲಾಗಿದೆ.

ಬಬ್ಬರ್ ದೋಷಿ ಎಂದು ತೀರ್ಪು
ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟನನ್ನು ವಿಶೇಷ ನ್ಯಾಯಾಲಯ ಗುರುವಾರ ದೋಷಿ ಎಂದು ತೀರ್ಪು ನೀಡಿದೆ. ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಪಡಿಸಿದ ಆರೋಪ ಮತ್ತು ದೈಹಿಕ ಹಲ್ಲೆ ಆರೋಪ ಹೊರಿಸಲಾಗಿದ್ದು, ನಂತರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದೆ.

ಮತಕಟ್ಟೆಯಲ್ಲಿ ಅಧಿಕಾರಿಗೆ ದೈಹಿಕ ಹಲ್ಲೆ
ರಾಣಾ ಅವರು ನೀಡಿದ ದೂರಿನ ಪ್ರಕಾರ, ಬಬ್ಬರ್ ಮತ್ತು ಅವರ ಕೆಲವು ಬೆಂಬಲಿಗರು ಲೋಕಸಭಾ ಚುನಾವಣೆಯ ಸಮಯದಲ್ಲಿ ಮತಗಟ್ಟೆಗೆ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರು. ಪೋಲಿಂಗ್ ಏಜೆಂಟ್ ಗಂಟಲು ಮತ್ತು ಮೂಗು ಗಾಯಗಳಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ, ಜೊತೆಗೆ ತುಟಿಗಳಿಗೆ ಹಾನಿಯಾಗಿದೆ.

ಬಬ್ಬರ್ ಪ್ರಸಿದ್ಧ ಬಾಲಿವುಡ್ ನಟ
ರಾಜ್ ಬಬ್ಬರ್ ಅವರು ಪ್ರಸಿದ್ಧ ಬಾಲಿವುಡ್ ನಟರಾಗಿದ್ದು, ಅವರು ಭಾರತದಲ್ಲಿ ವಿಶಾಲವಾದ ಚಲನಚಿತ್ರ ಮತ್ತು ದೂರದರ್ಶನ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು ದಲಾಲ್, ದಿ ಗ್ಯಾಂಬ್ಲರ್, ಅಂದಾಜ್, ಆಂಖೇನ್, ಗುಂಡಗಾರ್ಡಿ ಮತ್ತು ಜಿದ್ದಿ ಚಲನಚಿತ್ರಗಳಲ್ಲಿನ ಪಾತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ಬಬ್ಬರ್ ಆರಂಭದಲ್ಲಿ 1989 ರಲ್ಲಿ ಜನತಾ ದಳಕ್ಕೆ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ನಂತರ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಸಂಸದರಾದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications