ಯುವಕನ ಕುತ್ತಿಗೆಗೆ ಹಗ್ಗ ಹಾಕಿ, ಬೈಕ್ ನಲ್ಲಿ 15 ಕಿ.ಮೀ. ಎಳೆದೊಯ್ದು ಬಿಸಾಡಿದರು
ಲಖನೌ, ಸೆಪ್ಟೆಂಬರ್ 25: ಇಪ್ಪತ್ತೊಂದು ವರ್ಷದ ಯುವಕನ ಕುತ್ತಿಗೆಗೆ ಹಗ್ಗ ಹಾಕಿ, ಅದನ್ನು ಮೋಟಾರ್ ಸೈಕಲ್ ಗೆ ಕಟ್ಟಿ ಹದಿನೈದು ಕಿಲೋಮೀಟರ್ ಗೂ ಹೆಚ್ಚು ದೂರದ ತನಕ ಎಳೆದೊಯ್ದ ಘಟನೆ ಮೀರತ್ ನಲ್ಲಿ ಮಂಗಳವಾರ ನಡೆದಿದೆ. ಯುವಕನ ದೇಹದಲ್ಲಿ ಗುಂಡಿನ ಗಾಯ ಆಗಿದೆ. ಇನ್ನು ಎಡ ಪಾದವೇ ಇಲ್ಲ.
ಯುವಕ ಮುಕುಲ್ ಕುಮಾರ್ ನನ್ನು ಹಗ್ಗ ಹಾಕಿ ಎಳೆದೊಯ್ಯುವ ಮುನ್ನ ಗುಂಡಿಟ್ಟು ಕೊಲ್ಲಲಾಗಿತ್ತೇ ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಖಾತ್ರಿ ಇಲ್ಲ. ಆದರೆ ದೇಹದಲ್ಲಿ ಹಲವೆಡೆ ಗಾಯಗಳಾಗಿವೆ. ಅದರಲ್ಲೂ ಮುಖ ಹಾಗೂ ತಲೆಯ ಹಲವೆಡೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಎಡ ಪಾದವೇ ಇಲ್ಲ. ಮುಕುಲ್ ವಾಸವಿದ್ದ ಹಾಪುರ ಜಿಲ್ಲೆಯ ಮಂಡಿ ಪ್ರದೇಶದ ಬಳಿಯಿಂದ ಹದಿನೈದು ಕಿಲೋಮೀಟರ್ ಉದ್ದಕ್ಕೂ ರಕ್ತದ ಗುರುತುಗಳು ಕಂಡುಬಂದಿವೆ.
ದೇಹವನ್ನು ಅಷ್ಟು ದೂರಕ್ಕೆ ಬೈಕ್ ನಲ್ಲಿ ಎಳೆದೊಯ್ದು, ಮೀರತ್ ನ ಖರ್ ಖೋಡ ಪ್ರದೇಶದಲ್ಲಿ ಹಾಕಲಾಗಿದೆ. ಶವದ ಬಳಿಯೇ ಮೋಟಾರ್ ಸೈಕಲ್ ದೊರೆತಿದೆ. ವಿರೂಪಗೊಂಡಿದ್ದ ಶವವನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತುಂಬಾ ಸಂಕೋಚ ಸ್ವಭಾವದ ಮುಕುಲ್ ಗೆ ಯಾರ ಜತೆಗೂ ಶತ್ರುತ್ವ ಇರಲಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಸ್ನೇಹಿತರ ಮಧ್ಯದ ಭಿನ್ನಾಭಿಪ್ರಾಯದಲ್ಲಿ ಈ ಘಟನೆ ನಡೆದಿರಬಹುದು. ಫೋನ್ ಕರೆಗಳ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications