60ರ ವೃದ್ಧೆ ಜೊತೆ 22ರ ಯುವಕನ ಲವ್ವಿ-ಡವ್ವಿ, ಕೇಸ್ ಹಾಕಿದ ಮಕ್ಕಳು!
ಲಕ್ನೋ, ಜನವರಿ.25: ಪ್ರೀತಿಗೆ ಕಣ್ಣಿಲ್ಲ ನಿಜ. ಆದರೆ ಇದು ಪ್ರೀತಿಯ ಕಥೆಯಲ್ಲ, ಬದಲಿಗೆ 60 ವರ್ಷದ ವೃದ್ಧೆಯ ಜೊತೆಗೆ 22 ವರ್ಷದ ಯುವಕ ಹೊಂದಿದ್ದ ಅಕ್ರಮ ಸಂಬಂಧದ ಕಥೆ. ಅಷ್ಟಕ್ಕೂ ಇಂಥದೊಂದು ಘಟನೆ ಪ್ರೇಮಸೌಧವಿರುವ ಉತ್ತರ ಪ್ರದೇಶ ಆಗ್ರಾದಲ್ಲಿ ನಡೆದಿದೆ.
7 ಮಕ್ಕಳು ಹಾಗೂ 7 ಮಂದಿ ಮೊಮ್ಮಕ್ಕಳನ್ನು ಹೊಂದಿರುವ ವೃದ್ಧೆಯೊಂದಿಗೆ 22ರ ಯುವಕನು ಅಕ್ರಮ ಸಂಬಂಧ ಹೊಂದಿದ್ದನು ಎಂದು ಆರೋಪಿಸಲಾಗಿದೆ. ಯುವಕ ವಿರುದ್ಧ ಆಗ್ರಾದ ಎತ್ಮಾದುದ್ದಲ್ಲಾ ಪೊಲೀಸ್ ಠಾಣೆಯಲ್ಲಿ ವೃದ್ಧೆಯ ಮಕ್ಕಳು ಹಾಗೂ ಮೊಮ್ಮಕ್ಕಳು ದೂರು ನೀಡಲು ತೆರಳಿದ್ದಾರೆ.
ಪೊಲೀಸ್ ಠಾಣೆಗೆ ಇದೇ ವೇಳೆ ಯುವಕನೂ ಸಹ ತನ್ನ ಸಂಬಂಧಿಕರ ಜೊತೆಗೆ ತೆರಳಿದ್ದು, ವೃದ್ಧೆಯ ಜೊತೆಗೆ ಮದುವೆಯಾಗುವುದಾಗಿ ಘೋಷಣೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಎರಡೂ ಕುಟುಂಬಗಳ ನಡುವೆ ಪೊಲೀಸ್ ಠಾಣೆಯ ಎದುರಿನಲ್ಲೇ ಜಗಳವಾಗಿದೆ.

ಮನವೊಲಿಕೆಗೆ ಮಣಿಯದಿದ್ದಾಗ ಪೊಲೀಸರಿಗೆ ದೂರು:
ಆಗ್ರಾದ ಪ್ರಕಾಶ್ ನಗರದಲ್ಲಿ ವಾಸಿಸುತ್ತಿರುವ 60 ವರ್ಷದ ವೃದ್ಧೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನಿಗೆ ಮೊದಲು ಎಚ್ಚರಿಕೆ ನೀಡಲಾಗಿತ್ತು. ವೃದ್ಧೆಯ ಜೊತೆ ಸಂಬಂಧ ಮುಂದುವರಿಸದಂತೆ ಮನವೊಲಿಕೆ ಮಾಡಲಾಗಿತ್ತು. ಆದರೆ, ಯುವಕನು ಇದಕ್ಕೆ ಮಣಿಯದಿದ್ದಾಗ ಕೆರಳಿದ ವೃದ್ಧೆಯ ಸಂಬಂಧಿಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಯುವಕನ ವಿರುದ್ಧ ಕುಟುಂಬ ಶಾಂತಿ ಕದಡಿದ್ದಾನೆ ಎಂದು ಆರೋಪಿಸಿ ಎತ್ಮಾದುದ್ದಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications