ಯುಪಿಯಲ್ಲಿ ವ್ಯಕ್ತಿಗೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು
ಲಕ್ನೋ, ಆ. 13: ಉತ್ತರ ಪ್ರದೇಶದ ಕಾನ್ಪುರದಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯೋರ್ವರನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ಜೈ ಶ್ರೀ ರಾಮ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳು, ಬಂಧನಕ್ಕೆ ಒಳಗಾದ 24 ಗಂಟೆಗಳ ಒಳಗೆ ಜಾಮೀನು ಮೂಲಕ ಬಿಡುಗಡೆಯಾಗಿದ್ದಾರೆ.
"ಸಂಬಂಧಿಸಿದ ಪೊಲೀಸ್ ಠಾಣೆಯಿಂದ ಜಾಮೀನು ನೀಡಲಾಗಿದೆ. ಆರೋಪಿಗಳ ವಿರುದ್ಧ ಅನ್ವಯವಾಗುವ ಕಾನೂನಿನ ಸೆಕ್ಷನ್ಗಳು ಏಳು ವರ್ಷಗಳಿಗಿಂತ ಕಡಿಮೆ ಶಿಕ್ಷೆಯನ್ನು ಹೊಂದಿರುವುದು ಆಗಿದೆ. ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಲಾಗಿದೆ ಮತ್ತು ಇತರ ಆರೋಪಿಗಳನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ," ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರ್ ಪಟ್ಟಣದಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಬೀದಿಯಲ್ಲಿ ಮೆರವಣಿಗೆ ಮಾಡಿ, ಹಲ್ಲೆ ನಡೆಸಿ "ಜೈ ಶ್ರೀ ರಾಮ್" ಘೋಷಣೆಗಳನ್ನು ಕೂಗಲಾಗಿದೆ. ಕೊನೆಗೆ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿ ತಿಳಿಸಿದೆ. ಸ್ಥಳೀಯರು ಚಿತ್ರೀಕರಿಸಿದ ಘಟನೆಯ ದುಃಖಕರ ದೃಶ್ಯದ ವಿಡಿಯೋ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ವ್ಯಕ್ತಿಯ ಪುಟ್ಟ ಮಗಳು ಆತನಿಗೆ ಅಂಟಿಕೊಂಡಿರುವುದನ್ನು ಮತ್ತು ದಾಳಿಕೋರರನ್ನು ಆತನನ್ನು ಉಳಿಸುವಂತೆ ಬೇಡಿಕೊಳ್ಳುವುದನ್ನು ತೋರಿಸುತ್ತದೆ. ಪೊಲೀಸರ ವಶದಲ್ಲಿದ್ದಾಗ ಆ ವ್ಯಕ್ತಿಗೆ ಹೊಡೆದಿರುವ ದೃಶ್ಯಗಳು ಕೂಡ ಈ ವಿಡಿಯೋದಲ್ಲಿದೆ

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೆಯೇ ಈ ವ್ಯಕ್ತಿಯು ದೂರು ನೀಡಿದ್ದಾರೆ. "ನಾನು ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಇ-ರಿಕ್ಷಾವನ್ನು ಓಡಿಸುತ್ತಿದ್ದೆ, ಆಗ ಆರೋಪಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬವನ್ನು ಕೊಲ್ಲುವ ಬೆದರಿಕೆಯೊಡ್ಡಲು ಮತ್ತು ನಿಂದಿಸಲು ಆರಂಭಿಸಿದರು. ಪೋಲಿಸರು ಸ್ಥಳಕ್ಕೆ ಬಂದ ಕಾರಣದಿಮದಾಗಿ ನಾನು ರಕ್ಷಿಸಲ್ಪಟ್ಟಿದ್ದೇನೆ," ಎಂದು ಇ-ರಿಕ್ಷಾ ಚಾಲಕನಾದ ಹಲ್ಲೆಗೊಳಗಾದ ವ್ಯಕ್ತಿ ದೂರಿನಲ್ಲಿ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಾನ್ಪುರ ಪೊಲೀಸ್ ಆಯುಕ್ತರು ಅರುಣ್, "ನಾವು ಮೂವರನ್ನು ಬಂಧಿಸಿದ್ದೇವೆ, ಅವರು ಪ್ರಕರಣದ ಪ್ರಮುಖ ಆರೋಪಿಗಳು. ನಾವು ಪ್ರಕರಣದಲ್ಲಿ ಹೆಚ್ಚಿನ ಬಂಧನಗಳನ್ನು ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ಪ್ರದೇಶದಲ್ಲಿ ಸಾಕಷ್ಟು ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಈ ಜನರನ್ನು ಶಿಕ್ಷಿಸಲು ನಾವು ಎಲ್ಲಾ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ," ಎಂದು ತಿಳಿಸಿದ್ದರು.
ಬಂಧನದ ನಂತರ, ಬಜರಂಗದಳದ ಕಾರ್ಯಕರ್ತರ ಗುಂಪು ಕಾನ್ಪುರದ ಸಂಬಂಧಿತ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿತು ಮತ್ತು ನ್ಯಾಯಯುತ ತನಿಖೆಯ ಬಗ್ಗೆ ಪೊಲೀಸರಿಂದ 'ಭರವಸೆ' ನೀಡಿದ ನಂತರವೇ ಸ್ಥಳದಿಂದ ಹಿಂದಕ್ಕೆ ತೆರಳಿದ್ದಾರೆ. ಹಾಗೆಯೇ ಬಂಧಿತರನ್ನು ಶೀಘ್ರ ಬಿಡುಗಡೆ ಮಾಡದಿದ್ದರೆ ಮತ್ತೆ ಇಲ್ಲಿಗೆ ಬಂದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದರು.
"ಬಜರಂಗದಳದ ಕಾರ್ಯಕರ್ತರು ಒಟ್ಟುಗೂಡಿದರು ಮತ್ತು ನಾವು ಎಸ್ಪಿಗೆ ಘೇರಾವ್ ಮಾಡಿದ್ದೇವೆ ಮತ್ತು ನಮ್ಮ ಕೆಲಸಗಾರನನ್ನು ಬಿಡುಗಡೆ ಮಾಡುವವರೆಗೂ ನಾವು ಬಿಡುವುದಿಲ್ಲ ಎಂದು ಹೇಳಿದ್ದೇವೆ. ನಾವು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ, ಅವರು ಕಾರ್ಯಕರ್ತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಮತ್ತು ಶೀಘ್ರ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ," ಎಂದು ಭಜರಂಗದಳದ ನಾಯಕ ಕೃಷ್ಣ ಕಳೆದ ರಾತ್ರಿ ಮಾಧ್ಯಮಗಳಿಗೆ ಹೇಳಿದ್ದರು.
ಬಲಪಂಥೀಯ ಗುಂಪು ಬಜರಂಗದಳವು ಸಭೆ ನಡೆಸಿದ ಛೇದಕದಿಂದ 500 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಮುಸ್ಲಿಮರು ತಮ್ಮ ಪ್ರದೇಶದಲ್ಲಿ ಹಿಂದೂ ಹುಡುಗಿಯನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿ ನಡೆಸಿದ ಸಭೆಯ ನಂತರ ಈ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ.
ಹೇಳಿಕೆಯೊಂದರಲ್ಲಿ, ಕಾನ್ಪುರ ಪೊಲೀಸರು, "ಹಲ್ಲೆಗೊಳಗಾದ ವ್ಯಕ್ತಿಯ ದೂರು ಆಧರಿಸಿ ಮದುವೆ ಬ್ಯಾಂಡ್ ನಡೆಸುತ್ತಿರುವ ಸ್ಥಳೀಯರು, ಆತನ ಮಗ ಮತ್ತು ಸುಮಾರು 10 ಅಪರಿಚಿತ ಜನರ ವಿರುದ್ಧ ಗಲಭೆ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಿದರು. ಪ್ರಕರಣದಲ್ಲಿ ಹೆಸರಿಸಲಾದ ವ್ಯಕ್ತಿಗಳು ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂದು ಪೊಲೀಸರು ಹೇಳಿಲ್ಲ.
ಈ ವ್ಯಕ್ತಿಯು ಹಿಂದೂ ನೆರೆಹೊರೆಯವರೊಂದಿಗೆ ಕಾನೂನು ವಿವಾದವನ್ನು ಹೊಂದಿರುವ ಮುಸ್ಲಿಂ ಕುಟುಂಬದ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ. ಕಾನ್ಪುರ್ ಪೊಲೀಸ್ ಹೇಳಿಕೆಯ ಪ್ರಕಾರ ಜುಲೈನಲ್ಲಿ, ಎರಡು ಕುಟುಂಬಗಳು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪರಸ್ಪರರ ವಿರುದ್ಧ ಪ್ರಕರಣಗಳನ್ನು ದಾಖಲಿಸಿವೆ. ಮುಸ್ಲಿಂ ಕಡೆಯವರು ಮೊದಲು ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆಯ ಎಫ್ಐಆರ್ ದಾಖಲಿಸಿದ್ದರು. ನಂತರ ಹಿಂದೂ ಕಡೆಯವರು "ಮಹಿಳೆಯ ವಿನಯವನ್ನು ಕೆರಳಿಸುವ ಉದ್ದೇಶದಿಂದ ಹಲ್ಲೆ" ಎಂದು ಆರೋಪಿಸಿದ್ದಾರೆ. ಮೂಲಗಳು ಹೇಳುವಂತೆ ಬಜರಂಗದಳವು ಇತ್ತೀಚೆಗೆ ಈ ವಿಷಯದಲ್ಲಿ ಭಾಗಿಯಾಗಿತ್ತು ಮತ್ತು ಮುಸ್ಲಿಂ ಕುಟುಂಬದ ವಿರುದ್ಧ ಬಲವಂತದ ಮತಾಂತರದ ಆರೋಪಗಳನ್ನು ಮಾಡಿದೆ.
(ಒನ್ಇಂಡಿಯಾ ಸುದ್ದಿ)












Click it and Unblock the Notifications