ಉತ್ತರ ಪ್ರದೇಶದಲ್ಲಿ ಭಾರಿ ಮಳೆಗೆ 35 ಮಂದಿ ಬಲಿ
Recommended Video
ಲಕ್ನೋ, ಸೆಪ್ಟೆಂಬರ್ 29: ಉತ್ತರ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಇದುವರೆಗೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಶುಕ್ರವಾರ 10 ಮಂದಿ ಮೃತಪಟ್ಟಿದ್ದಾರೆ. ಮಳೆಯ ಅವಾಂತರಕ್ಕೆ 5 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕರ್ನಾಟಕದ ಮಲೆನಾಡು ಭಾಗಗಳಲ್ಲೂ ಕೂಡ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಇನ್ನು 48 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ವಿವಿಧೆಡೆ ಅಧಿಕ ಮಳೆಯಾಗುತ್ತಿರುವ ಕಾರಣ ಅಪಾರ ಪ್ರಾಣಹಾನಿಯಾಗಿದೆ. ಮಹಾಮಳೆಗೆ ಶನಿವಾರ 25 ಮಂದಿ ಬಲಿಯಾಗಿದ್ದಾರೆ.
ಇನ್ನು, ಸುಲ್ತಾನ್ಪುರ, ಗೋರಕ್ಪುರ, ದೋರಿಯಾ,ಫಿರೋಜಾಬಾದ್, ಪ್ರಯಾಗ್ರಾಜ್, ಲಕ್ಕಿಂಪುರ ಮತ್ತು ಅಮೇಥಿಯಲ್ಲಿ ಮಳೆಯ ಆರ್ಭಟಕ್ಕೆ ಹಲವು ಮಂದಿ ಮೃತಪಟ್ಟಿದ್ದಾರೆ.
ಇಂದು ಸಹ ಉತ್ತರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಶನಿವಾರ ಮಿರ್ಜಾಪುರದಲ್ಲಿ ಮಳೆಯ ಆರ್ಭಟಕ್ಕೆ ಮನೆ ಕುಸಿದು 4 ಮಂದಿ ಅಸುನೀಗಿದ್ದಾರೆ. ಅಜ್ಮಾಗರ್ನಲ್ಲಿ ಗೋಡೆ ಕುಸಿದು ಅಲ್ಲಿಯೂ ನಾಲ್ಕು ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಂಬೇಡ್ಕರ್ನಗರ ಮತ್ತು ಘಾಜಿಪುರದಲ್ಲಿ ಮನೆ ಕುಸಿದು ಮೂರು ಮಂದಿ ಬಲಿಯಾಗಿದ್ದಾರೆ. ಬಲ್ಲಿಯಾ ಮತ್ತು ಸೀತಾಪುರನಲ್ಲಿ ಗೋಡೆ ಕುಸಿದು ಇಬ್ಬರು ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ಘಟನೆಯಲ್ಲಿ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ಧಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಿತ್ರಕೂಟ ಮತ್ತು ಉನ್ನಾವೋದಲ್ಲಿ ಗೋಡೆ ಕುಸಿದು ಇಬ್ಬರು ಮೃತಪಟ್ಟರೆ, ಬುಲಂದ್ಶಹರ್ನಲ್ಲಿ ಮನೆ ಕುಸಿದು ಓರ್ವ ಸಾವನ್ನಪ್ಪಿದ್ದಾನೆ. ಉನ್ನಾವೋದಲ್ಲಿ ಭಾರೀ ಮಳೆಗೆ ಹಾವು ಕಚ್ಚಿ ಮತ್ತೊಬ್ಬ ವ್ಯಕ್ತಿ ಅಸುನೀಗಿದ್ಧಾನೆ. ಸಹರನ್ಪುರದಲ್ಲಿ ಮಳೆಗೆ ಕೊಚ್ಚಿ ಹೋದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications