ಉ.ಪ್ರದೇಶ ಬಿಸಿಲಿನ ಝಳಕ್ಕೆ ನಾಲ್ವರು ರೈಲು ಪ್ರಯಾಣಿಕರು ಸಾವು
ಲಖನೌ, ಜೂನ್ 11: ಕೇರಳ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರು ಉತ್ತರ ಪ್ರದೇಶದ ಬಿಸಿಲಿನ ಝಳಕ್ಕೆ ಸಾವನ್ನಪ್ಪಿರುವ ವಿಚಿತ್ರ ಘಟನೆ ನಡೆದಿದೆ.
ಕೇರಳ ಎಕ್ಸ್ಪ್ರೆಸ್ ನಲ್ಲಿ ಆಗ್ರಾದಿಂದ ಕೊಯಮತ್ತೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹೀಗೆ ಬಿಸಿಲಿನ ಝಳಕ್ಕೆ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ನಾಲ್ಕೂ ಜನ ಹಿರಿಯ ನಾಗರೀಕರಾಗಿದ್ದಾರೆ.
ವಾರಣಾಸಿ, ಆಗ್ರಾ ಪ್ರವಾಸ ಮುಗಿಸಿ ಕೊಯಮತ್ತೂರಿಗೆ ವಾಪಸ್ಸಾಗುತ್ತಿದ್ದ ವೇಳೆ ಘಟನೆ ನಡೆದಿದೆ. ಸೋಮವಾರ ಸಂಜೆಯೇ ಕೆಲವರು ಉಸಿರಾಟದ ತೊಂದರೆ ಉಂಟಾಗುತ್ತಿರುವ ಬಗ್ಗೆ ದೂರು ನೀಡಿದ್ದರು. ಆದರೆ ಜಾನ್ಸಿಗೆ ಬರುವ ವೇಳೆಗೆ ಮೂವರು ರೈಲಿನ ಬೋಗಿಯಲ್ಲಿಯೇ ತೀರಿಕೊಂಡಿದ್ದಾರೆ, ಒಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ.

ಸಾವನ್ನಪ್ಪಿರುವ ಪ್ರಯಾಣಿಕರು ಇತರ ಪ್ರಯಾಣಿಕರ ಜೊತೆ ಕೇರಳ ಎಕ್ಸ್ಪ್ರೆಸ್ನ ಎಸ್-8 ಮತ್ತು ಎಸ್-9 ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದರು, ಇದು ನಾನ್-ಎಸಿ ಬೋಗಿಯಾಗಿತ್ತು. ಒಟ್ಟು 68 ಮಂದಿ ಕೇರಳದ ವಿವಿಧ ಭಾಗದಿಂದ ಉತ್ತರ ಭಾರತದ ಪ್ರವಾಸಕ್ಕೆ ಆಗಮಿಸಿದ್ದರು.
ಜಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ನಾಲ್ವರು ಮೃತರ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕೊಯಮತ್ತೂರಿಗೆ ಕಳುಹಿಸಿಕೊಡಲಾಗಿದೆ ಎಂದು ರೈಲ್ವೆ ಅಧಿಕಾರಿ ಹೇಳಿದ್ದಾರೆ. ಮೃತರನ್ನು ಬುಂಧೂರು ಪಳನಿಸ್ವಾಮಿ (80), ಬಾಲಕೃಷ್ಣ ರಾಮಸ್ವಾಮಿ (69), ಚಿನ್ನಾರೆ (71), ದಿವಾ ನೈ (71) ಎಂದು ಹೇಳಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications