ಗಂಗಾ ನದಿ ಬಳಿ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: 5 ಮಂದಿ ಪೊಲೀಸರ ಅಮಾನತು
ಲಕ್ನೋ, ಮೇ 18: ಕಳೆದ ಒಂದು ವಾರದಿಂದ ರಾಶಿಗಟ್ಟಲೆ ಕೊರೊನಾ ಸೋಂಕಿತರ ಶವಗಳು ಗಂಗಾನದಿಯಲ್ಲಿ ತೇಲುತ್ತಿವೆ.
ಬಿಹಾರದಲ್ಲಿ ಮೊದಲು 150ಕ್ಕೂ ಹೆಚ್ಚು ಶವಗಳು ಕಾಣಿಸಿಕೊಂಡಿದ್ದು, ಉತ್ತರ ಪ್ರದೇಶದಿಂದ ಬಂದ ಶವಗಳಿವು ಎಂದು ಆರೋಪಿಸಲಾಗಿತ್ತು. ಬಳಿಕ ಉತ್ತರ ಪ್ರದೇಶದ ಗಂಗಾನದಿ ತೀರದಲ್ಲೂ ಕೂಡ ಹಲವು ಶವಗಳು ಪತ್ತೆಯಾಗಿದ್ದವು.
ಆ ಎಲ್ಲಾ ಶವಗಳನ್ನು ಹೊರಕ್ಕೆ ತೆಗೆದು ಅಂತ್ಯ ಸಂಸ್ಕಾರ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿತ್ತು, ಆದರೆ ಶವಸಂಸ್ಕಾರಕ್ಕೆ ಪೆಟ್ರೋಲ್ ಹಾಗೂ ಟೈರ್ ಬಳಸಿ ಅಂತ್ಯಸಂಸ್ಕಾರ ಬಡೆಸಿದ್ದಕ್ಕಾಗಿ ಐವರು ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಈ ಘಟನೆಯ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.ನಿನ್ನೆ ದಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋವೊಂದರಲ್ಲಿ ಮೃತ ವ್ಯಕ್ತಿಯೊಬ್ಬರ ಶವದ ಅಂತಸಂಸ್ಕಾರ ಮಾಡುವಾಗ ಪೊಲೀಸರು ಕಂಡುಬಂದಿದ್ದಾರೆ ಎಂದು ಎಸ್ ಪಿ ವಿಪಿನ್ ಟಾಡಾ ಹೇಳಿದ್ದಾರೆ.
ಗಂಗಾ ನದಿಯ ತಟದಲ್ಲಿ ತೇಲಿಬರುವ ಶವಗಳಿಗೆ ಮೇ 15 ರಂದು ಅಂತ್ಯ ಸಂಸ್ಕಾರ ನಡೆಸಲಾಗಿದೆ. ಮೃತದೇಹದ ಮೇಲೆ ಟೈರ್ ಇಟ್ಟು, ಪೆಟ್ರೋಲ್ ಸುರಿದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಪೊಲೀಸ್ ಠಾಣೆ ಎಸ್ ಹೆಚ್ ಒ ಸಂಜಯ್ ತ್ರಿಪಾಠಿ ಹೇಳಿದ್ದಾರೆ.
ಅಂತಿಮ ಸಂಸ್ಕಾರದ ವೇಳೆಯಲ್ಲಿ ಪೊಲೀಸರು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದಾರೆ. ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications