Get Updates
Get notified of breaking news, exclusive insights, and must-see stories!

ಯುಪಿಯಲ್ಲಿ ಬಸ್ ಅಪಘಾತ: 5 ಜನ ಸಾವು, ಹಲವರಿಗೆ ಗಾಯ

ಕಾನ್ಪುರ, ಜನವರಿ 31: ಕಾನ್ಪುರದ ಟಾಟ್ ಮಿಲ್ ಕ್ರಾಸ್‌ರೋಡ್ ಬಳಿ ಎಲೆಕ್ಟ್ರಿಕ್ ಬಸ್‌ ನಿಯಂತ್ರಣ ಕಳೆದುಕೊಂಡಿದೆ.ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮೂರು ಕಾರುಗಳು ಹಾಗೂ ಹಲವು ಬೈಕ್‌ಗಳು ಬಸ್‌ನಿಂದ ಹಾನಿಗೊಳಗಾಗಿವೆ. ಬಸ್ಸಿನ ಚಾಲಕ ಪರಾರಿಯಾಗಿದ್ದು ನಾವು ಅವನನ್ನು ಹುಡುಕುತ್ತಿದ್ದೇವೆ ಎಂದು ಪೂರ್ವ ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ಭಾನುವಾರ ತಡರಾತ್ರಿ ತಿಳಿಸಿದ್ದಾರೆ.


ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದಾರೆ. "ಕಾನ್ಪುರದಲ್ಲಿ ರಸ್ತೆ ಅಪಘಾತದ ದುರದೃಷ್ಟಕರ ಸುದ್ದಿಯಾಗಿದೆ. ಮೃತರಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

5 Dead, Several Injured After Bus Mows Down Bystanders In UP

Recommended Video

      Rohit Sharma ತಂಡಕ್ಕೆ ಫ್ಲೈಟ್ ವ್ಯವಸ್ಥೆ ಮಾಡದ BCCI | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+