ರಸ್ತೆಯಲ್ಲಿ ಸಾಗುತ್ತಿದ್ದ ಕಾರ್ಮಿಕರಿಗೆ ಬಸ್ ಡಿಕ್ಕಿ, 6 ಮಂದಿ ಸಾವು
ಲಕ್ನೌ, ಮೇ 14: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ವಲಸೆ ಕಾರ್ಮಿಕರ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೆದ್ದಾರಿಗಳಲ್ಲಿ ನಡೆದುಕೊಂಡು ಹೋಗುತ್ತಿರುವ ಅಮಾಯಕ ಜನರು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ.
ಕಳೆದ ರಾತ್ರಿ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದ ಸಹರಾನ್ಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು 6 ಜನ ಕಾರ್ಮಿಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
6 migrant workers who were walking along the Muzaffarnagar-Saharanpur highway killed after a speeding bus ran over them late last night, near Ghalauli check-post. Case registered against unknown bus driver. pic.twitter.com/s81e7gpYkH
— ANI UP (@ANINewsUP) May 14, 2020
ಉತ್ತರ ಪ್ರದೇಶದ ಮುಜಫರ್ನಗರ-ಸಹರಾನ್ಪುರ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 6 ವಲಸೆ ಕಾರ್ಮಿಕರಿಗೆ ತಡರಾತ್ರಿ ಘಲೌಲಿ ಚೆಕ್ಪೋಸ್ಟ್ ಬಳಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಈ ಅಪಘಾತದಲ್ಲಿ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ಕು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮೀರತ್ ವಲಯದ ಎಡಿಜಿ ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ. ಇವರೆಲ್ಲರೂ ಪಂಜಾಬ್ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಹರ್ಯಾಣದಲ್ಲಿ ವಲಸೆ ಕಾರ್ಮಿಕರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಕಳೆದ ವಾರ ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿತ್ತು. 16 ವಲಸೆ ಕಾರ್ಮಿಕರನ್ನು ಸರಕು ಸಾಗಣಿಕೆ ರೈಲು ಡಿಕ್ಕಿ ಹೊಡೆದ ಘಟನೆ ವರದಿಯಾಗಿತ್ತು. ಅವರೂ ಸಹ ಮಧ್ಯಪ್ರದೇಶದ ತಮ್ಮ ಮನೆಗಳಿಗೆ ವಾಕಿಂಗ್ ಹೋಗುತ್ತಿದ್ದರು.