ಕನಿಕಾ ಸಂಪರ್ಕಿಸಿದ್ದ 266 ಮಂದಿ ಪರೀಕ್ಷೆ, 60 ಜನರಿಗೆ ನೆಗಿಟಿವ್
ಲಕ್ನೌ, ಮಾರ್ಚ್ 23: ಬಾಲಿವುಡ್ ಗಾಯಕಿ ಕನಿಕಾ ಕಪೂರ್ಗೆ ಕೊರೊನಾ ಸೋಂಕು ದೃಢವಾಗುತ್ತಿದ್ದಂತೆ, ಆಕೆಯ ಜೊತೆ ಸಂಪರ್ಕದಲ್ಲಿದ್ದವರಿಗೆಲ್ಲಾ ಆತಂಕ ಹೆಚ್ಚಾಗಿತ್ತು. ಲಂಡನ್ನಿಂದ ಲಕ್ನೌಗೆ ಬಂದಿದ್ದ ಕನಿಕಾ ಮೂರು ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿತ್ತು.
ಇದೀಗ, ಕನಿಕಾ ಕಪೂರ್ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಹುಡುಕಿ ಅವರ ರಕ್ತದ ಮಾದರಿ ಸಂಗ್ರಹಿಸುವ ಕಾರ್ಯ ಮುಗಿದಿದೆ ಎಂದು ತಿಳಿದು ಬಂದಿದೆ. ಇದುವರೆಗೂ ಕನಿಕಾ ಕಪೂರ್ ಜತೆ ಸಂಪರ್ಕದಲ್ಲಿದ್ದ 266 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 60ಕ್ಕೂ ಹೆಚ್ಚು ಜನರಿಗೆ ನೆಗಿಟಿವ್ ಬಂದಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಈ ಬಗ್ಗೆ ಉತ್ತರ ಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ಸ್ಪಷ್ಟನೆ ನೀಡಿದ್ದು, 'ಉಳಿದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಮತ್ತು ರೋಗ ಲಕ್ಷಣ ಕಂಡುಬಂದವರನ್ನು ಪರೀಕ್ಷಿಸಿದ್ದು, ಅವರ ಮೇಲೂ ನಿಗಾವಹಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

ಕನಿಕಾ ಕಪೂರ್ ಜೊತೆ ಪಾರ್ಟಿಯಲ್ಲಿದ್ದವರ ಪೈಕಿ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಅವರ ಮಗ ಸಂಸದ ದುಶ್ಯಂತ್, ಉತ್ತರ ಪ್ರದೇಶ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್, ಮಾಜಿ ಕೇಂದ್ರ ಸಚಿವ ಜತೀನ್ ಪ್ರಸಾದ್ ಸೇರಿದಂತೆ ಇನ್ನು ಹಲವರಿದ್ದರು. ಇವರೆಲ್ಲರಿಗೂ ಕೊರೊನಾ ನೆಗಿಟಿವ್ ಬಂದಿದೆ.
ಈ ಕುರಿತು ಉತ್ತರ ಪ್ರದೇಶದ ಆರೋಗ್ಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, ''ಕೊರೊನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವುದು ಬಹಳ ಕಷ್ಟದ ಕೆಲಸ. ಆದರೆ, ಕನಿಕಾ ಕಪೂರ್ ಜೊತೆ ಪಾರ್ಟಿಯಲ್ಲಿದ್ದವರ ಖಚಿತ ಮಾಹಿತಿ ಮತ್ತು ಅವರು ಉತ್ತಮವಾಗಿ ಸಹಕರಿಸಿದ ಹಿನ್ನೆಲೆ ಸುಲಭವಾಯಿತು' ಎಂದು ತಿಳಿಸಿದ್ದಾರೆ.
ಮಾರ್ಚ್ 9 ರಂದು ಲಂಡನ್ನಿಂದ ಮುಂಬೈಗೆ ಬಂದು, ಅಲ್ಲಿಂದ ಲಕ್ನೌಗೆ ಬಂದಿದ್ದ ಕನಿಕಾ ಕಪೂರ್ ಮಾರ್ಚ್ 15 ರಂದು ಬರ್ತಡೇ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಮಾರ್ಚ್ 20 ರಂದು ಆಕೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications