ಕೊರೊನಾ ಭಯದ ನಡುವೆ ಮೀರತ್ ನಲ್ಲಿ 81 ಮಂದಿಗೆ ಹಂದಿ ಜ್ವರ!
ಮಾರಣಾಂತಿಕ ಕೊರೊನಾ ವೈರಸ್ ನಿಂದ ಇಡೀ ವಿಶ್ವಕ್ಕೆ ವಿಶ್ವವೇ ಬೆಚ್ಚಿಬಿದ್ದಿದೆ. ಚೀನಾದಿಂದ ವಿಶ್ವದ ಹಲವು ದೇಶಗಳಿಗೆ ಕೊರೊನಾ ಸೋಂಕು ಹರಡಿದೆ. ಭಾರತಕ್ಕೂ ಡೆಡ್ಲಿ ಕೊರೊನಾ ಕಾಲಿಟ್ಟಿದೆ. ಇಟಲಿಯಿಂದ ಭಾರತಕ್ಕೆ ಬಂದ ಪ್ರವಾಸಿಗರಿಗೆ ಮತ್ತು ಭಾರತೀಯ ಟೂರ್ ಆಪರೇಟರ್ ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೊರೊನಾ ಭಯದ ನಡುವೆಯೇ ಉತ್ತರ ಪ್ರದೇಶದ ಮೀರತ್ ನಲ್ಲಿ ಹಂದಿ ಜ್ವರ ವ್ಯಾಪಿಸಿದೆ. ಸ್ವೈನ್ ಫ್ಲೂ (ಹಂದಿ ಜ್ವರ) ದಿಂದಾಗಿ ಮೀರತ್ ನಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. 20 ಪಿ.ಎ.ಸಿ ಜವಾನ್ ಗಳು ಸೇರಿದಂತೆ ಒಟ್ಟು 81 ಮಂದಿಗೆ ಹಂದಿ ಜ್ವರ ಇರುವುದು ಖಚಿತವಾಗಿದೆ.

81 ಮಂದಿಗೆ ಹಂದಿ ಜ್ವರ
''ಪರೀಕ್ಷೆಗೆ ಒಳಪಡಿಸಿದಾಗ 20 ಜವಾನ್ ಗಳು ಒಳಗೊಂಡಂತೆ 81 ಮಂದಿಯ ರಕ್ತ ಮಾದರಿಯಲ್ಲಿ ಸ್ವೈನ್ ಫ್ಲೂ ಪಾಸಿಟಿವ್ ತೋರಿಸಿದೆ. ಇಲ್ಲಿಯವರೆಗೂ ಹಂದಿ ಜ್ವರದಿಂದಾಗಿ 387 ಮಂದಿಯನ್ನು ಪರೀಕ್ಷಿಸಲಾಗಿದೆ. ಅದರಲ್ಲಿ ಚಿಕಿತ್ಸೆಯಿಂದ ಚೇತರಿಸಿಕೊಂಡ 11 ಪಿ.ಎ.ಸಿ ಜವಾನ್ ಗಳನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ'' ಎಂದು ಮೀರತ್ ನ ಚೀಫ್ ಮೆಡಿಕಲ್ ಆಫೀಸರ್ ಡಾ.ರಾಜ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಾಗುತ್ತಿದೆ ಹಂದಿ ಜ್ವರ
ಕಳೆದ ಜನವರಿಯಿಂದ ಉತ್ತರ ಪ್ರದೇಶದ ಮೀರತ್ ನಲ್ಲಿ ಹಂದಿ ಜ್ವರದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಸ್ವೈನ್ ಫ್ಲೂ ನಿಂದಾಗಿ ಎಂಟು ಮಂದಿ ಮೃತಪಟ್ಟಿರುವುದರಿಂದ, ಪರಿಶೀಲನೆ ನಡೆಸಲು ಉತ್ತರ ಪ್ರದೇಶದ ಆರೋಗ್ಯ ಸೇವೆಗಳ ನಿರ್ದೇಶನಾಲಯದ ತಂಡ ಮೀರತ್ ಗೆ ಭೇಟಿ ನೀಡಿದೆ.

ಹಂದಿ ಜ್ವರದ ಲಕ್ಷಣಗಳೇನು.?
ಸ್ವೈನ್ ಇನ್ಫ್ಲುಯೆನ್ಝಾ ವೈರಸ್ ನಿಂದ ಹಂದಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಮಾರಕ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜ್ವರ, ನೆಗಡಿ, ಕೆಮ್ಮು ಮತ್ತು ವಾಂತಿ.. ಹಂದಿ ಜ್ವರದ ಲಕ್ಷಣಗಳು. ಈ ಪೈಕಿ ಯಾವುದೇ ಲಕ್ಷಣ ಕಂಡುಬಂದರೂ, ಕೊಡಲೆ ವೈದ್ಯರಿಂದ ಚಿಕಿತ್ಸೆ ಪಡೆಯುವುದು ಉತ್ತಮ.

ಶುಚಿತ್ವ ಕಾಪಾಡಿ
ಹಂದಿ ಜ್ವರದ ವೈರಸ್ ನ ತಡೆಗಟ್ಟಲು ಶುಚಿತ್ವ ಕಾಪಾಡಿಕೊಳ್ಳಬೇಕು. ಕೈಕಾಲುಗಳನ್ನು ಆಗಾಗ ತೊಳೆದುಕೊಳ್ಳುತ್ತಿರಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು. ಈಗಾಗಲೇ ರೋಗದ ಲಕ್ಷಣ ಕಂಡುಬಂದಿರುವವರಿಂದ ದೂರವಿರಬೇಕು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications