ಕೊರೊನಾ ಭಯದ ನಡುವೆ ಮೀರತ್ ನಲ್ಲಿ 81 ಮಂದಿಗೆ ಹಂದಿ ಜ್ವರ!
ಮಾರಣಾಂತಿಕ ಕೊರೊನಾ ವೈರಸ್ ನಿಂದ ಇಡೀ ವಿಶ್ವಕ್ಕೆ ವಿಶ್ವವೇ ಬೆಚ್ಚಿಬಿದ್ದಿದೆ. ಚೀನಾದಿಂದ ವಿಶ್ವದ ಹಲವು ದೇಶಗಳಿಗೆ ಕೊರೊನಾ ಸೋಂಕು ಹರಡಿದೆ. ಭಾರತಕ್ಕೂ ಡೆಡ್ಲಿ ಕೊರೊನಾ ಕಾಲಿಟ್ಟಿದೆ. ಇಟಲಿಯಿಂದ ಭಾರತಕ್ಕೆ ಬಂದ ಪ್ರವಾಸಿಗರಿಗೆ ಮತ್ತು ಭಾರತೀಯ ಟೂರ್ ಆಪರೇಟರ್ ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೊರೊನಾ ಭಯದ ನಡುವೆಯೇ ಉತ್ತರ ಪ್ರದೇಶದ ಮೀರತ್ ನಲ್ಲಿ ಹಂದಿ ಜ್ವರ ವ್ಯಾಪಿಸಿದೆ. ಸ್ವೈನ್ ಫ್ಲೂ (ಹಂದಿ ಜ್ವರ) ದಿಂದಾಗಿ ಮೀರತ್ ನಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. 20 ಪಿ.ಎ.ಸಿ ಜವಾನ್ ಗಳು ಸೇರಿದಂತೆ ಒಟ್ಟು 81 ಮಂದಿಗೆ ಹಂದಿ ಜ್ವರ ಇರುವುದು ಖಚಿತವಾಗಿದೆ.

81 ಮಂದಿಗೆ ಹಂದಿ ಜ್ವರ
''ಪರೀಕ್ಷೆಗೆ ಒಳಪಡಿಸಿದಾಗ 20 ಜವಾನ್ ಗಳು ಒಳಗೊಂಡಂತೆ 81 ಮಂದಿಯ ರಕ್ತ ಮಾದರಿಯಲ್ಲಿ ಸ್ವೈನ್ ಫ್ಲೂ ಪಾಸಿಟಿವ್ ತೋರಿಸಿದೆ. ಇಲ್ಲಿಯವರೆಗೂ ಹಂದಿ ಜ್ವರದಿಂದಾಗಿ 387 ಮಂದಿಯನ್ನು ಪರೀಕ್ಷಿಸಲಾಗಿದೆ. ಅದರಲ್ಲಿ ಚಿಕಿತ್ಸೆಯಿಂದ ಚೇತರಿಸಿಕೊಂಡ 11 ಪಿ.ಎ.ಸಿ ಜವಾನ್ ಗಳನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ'' ಎಂದು ಮೀರತ್ ನ ಚೀಫ್ ಮೆಡಿಕಲ್ ಆಫೀಸರ್ ಡಾ.ರಾಜ್ ಕುಮಾರ್ ತಿಳಿಸಿದ್ದಾರೆ.

ಹೆಚ್ಚಾಗುತ್ತಿದೆ ಹಂದಿ ಜ್ವರ
ಕಳೆದ ಜನವರಿಯಿಂದ ಉತ್ತರ ಪ್ರದೇಶದ ಮೀರತ್ ನಲ್ಲಿ ಹಂದಿ ಜ್ವರದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಸ್ವೈನ್ ಫ್ಲೂ ನಿಂದಾಗಿ ಎಂಟು ಮಂದಿ ಮೃತಪಟ್ಟಿರುವುದರಿಂದ, ಪರಿಶೀಲನೆ ನಡೆಸಲು ಉತ್ತರ ಪ್ರದೇಶದ ಆರೋಗ್ಯ ಸೇವೆಗಳ ನಿರ್ದೇಶನಾಲಯದ ತಂಡ ಮೀರತ್ ಗೆ ಭೇಟಿ ನೀಡಿದೆ.

ಹಂದಿ ಜ್ವರದ ಲಕ್ಷಣಗಳೇನು.?
ಸ್ವೈನ್ ಇನ್ಫ್ಲುಯೆನ್ಝಾ ವೈರಸ್ ನಿಂದ ಹಂದಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಮಾರಕ ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಜ್ವರ, ನೆಗಡಿ, ಕೆಮ್ಮು ಮತ್ತು ವಾಂತಿ.. ಹಂದಿ ಜ್ವರದ ಲಕ್ಷಣಗಳು. ಈ ಪೈಕಿ ಯಾವುದೇ ಲಕ್ಷಣ ಕಂಡುಬಂದರೂ, ಕೊಡಲೆ ವೈದ್ಯರಿಂದ ಚಿಕಿತ್ಸೆ ಪಡೆಯುವುದು ಉತ್ತಮ.

ಶುಚಿತ್ವ ಕಾಪಾಡಿ
ಹಂದಿ ಜ್ವರದ ವೈರಸ್ ನ ತಡೆಗಟ್ಟಲು ಶುಚಿತ್ವ ಕಾಪಾಡಿಕೊಳ್ಳಬೇಕು. ಕೈಕಾಲುಗಳನ್ನು ಆಗಾಗ ತೊಳೆದುಕೊಳ್ಳುತ್ತಿರಬೇಕು. ಮುಖಕ್ಕೆ ಮಾಸ್ಕ್ ಧರಿಸಬೇಕು. ಈಗಾಗಲೇ ರೋಗದ ಲಕ್ಷಣ ಕಂಡುಬಂದಿರುವವರಿಂದ ದೂರವಿರಬೇಕು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications