ಡೆಲಿವರಿ ಬಾಯ್ಗೆ ಜಾತಿ ನಿಂದನೆ ಮಾಡಿ, ಥಳಿಸಿದ ಗ್ರಾಹಕ
ಲಕ್ನೋ, ಜೂನ್ 20: ಝೊಮಾಟೊ ಆಹಾರ ಡೆಲಿವರಿ ಉದ್ಯೋಗಿ ಮೇಲೆ ಗ್ರಾಹಕನೊಬ್ಬ ಜಾತಿ ನಿಂದನೆ ಮಾಡಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ, ಮುಖದ ಮೇಲೆ ಉಗುಳಿದ್ದಾನೆ, ಮಾತ್ರವಲ್ಲದೇ ಗ್ರಾಹಕನ ಜೊತೆ ಹಲವರು ಸೇರಿಕೊಂಡು ಥಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಡೆಲಿವರಿ ಮ್ಯಾನ್ ಗ್ರಾಹಕನಿಗೆ ಆಹಾರ ಡೆಲಿವರಿ ಮಾಡಲು ಹೋದಾಗ ಗ್ರಾಹಕ ಆತನ ಹೆಸರು ಕೇಳಿದ್ದಾನೆ. ಝೊಮಾಟೊ ಉದ್ಯೋಗಿ ಹೆಸರು ಹೇಳುತ್ತಿದ್ದಂತೆ ಈ ಘಟನೆ ನಡೆದಿದೆ. ಅಲ್ಲದೇ ಗ್ರಾಹಕನು 'ಅಸ್ಪೃಶ್ಯ' ಎಂದು ನಿಂದಿಸಿ ಆಹಾರ ಸ್ವೀಕರಿಸಲು ನಿರಾಕರಿಸಿದ್ದಾನೆ.
ದೌರ್ಜನ್ಯಕ್ಕೊಳಗಾದ ವಿನೀತ್ ಕುಮಾರ್ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ. ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇತರ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಖಾಸಿಮ್ ಅಬಿದಿ ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿನ ಸಿಸಿಟಿವಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಅಬಿದಿ ತಿಳಿಸಿದ್ದಾರೆ. "ಸೋಮವಾರ ಸಂತ್ರಸ್ತ ಮತ್ತು ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿರುವ ಎಸಿಪಿ ಕಂಟೋನ್ಮೆಂಟ್ಗೆ ತನಿಖೆಯನ್ನು ನೀಡಲಾಗಿದೆ" ಎಂದು ಅವರು ಹೇಳಿದರು.
ಶನಿವಾರ ಸಂಜೆ ಆರ್ಡರ್ ಸ್ವೀಕರಿಸಿದ್ದಾರೆ. ಮನೆಗೆ ಆಹಾರ ಡೆಲಿವರಿ ಕೊಡಲು ಹೋದ ಸಮಯದಲ್ಲಿ ಗ್ರಾಹಕ ಮನೆಯಿಂದ ಹೊರಬಂದು ಹೆಸರು ಮತ್ತು ಜಾತಿ ಕೇಳಿದ್ದಾನೆ ಎಂದು ಹಲ್ಲೆಗೊಳಗಾದ ಕುಮಾರ್ ಹೇಳಿದರು.
"ನಾನು ಪರಿಶಿಷ್ಟ ಜಾತಿಗೆ ಸೇರಿದವನು ಎಂದು ತಿಳಿದ ನಂತರ, ಗ್ರಾಹಕ ಜಾತಿ ಹೆಸರಿನಲ್ಲಿ ನಿಂದನೆ ಮಾಡಿದರು. ಅಸ್ಪೃಶ್ಯರ ಕೈಯಿಂದ ಆಹಾರವನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು. ಆಹಾರ ಸ್ವೀಕರಿಸಲು ಸಿದ್ಧವಿಲ್ಲದಿದ್ದರೆ ಆರ್ಡರ್ ರದ್ದುಗೊಳಿಸುವಂತೆ ನಾನು ಅವರಿಗೆ ಹೇಳಿದೆ." ಕುಮಾರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಬೈಕ್ ಕಸಿದು ದೌರ್ಜನ್ಯ; ಆರೋಪಿಗಳು ತಮ್ಮ ಮುಖಕ್ಕೆ ಉಗುಳಿದರು ಮತ್ತು ಮನೆಯಿಂದ ಹೊರಬಂದ 10-12 ಜನರೊಂದಿಗೆ ಥಳಿಸಿದ್ದಾರೆ ಎಂದು ಝೊಮಾಟೋ ಉದ್ಯೋಗಿ ಕುಮಾರ್ ಆರೋಪಿಸಿದ್ದಾರೆ.
"ಆರೋಪಿಗಳು ನನ್ನ ಮೋಟಾರ್ಸೈಕಲ್ ಸಹ ತೆಗೆದುಕೊಂಡರು. ನಾನು ಪೊಲೀಸ್ ನಿಯಂತ್ರಣ ಕೊಠಡಿಗೆ ಡಯಲ್ ಮಾಡಿದೆ, ಪೊಲೀಸರು ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದರು. ನನ್ನ ಮೋಟಾರ್ ಸೈಕಲ್ ಪೊಲೀಸರು ನನಗೆ ವಾಪಸ್ ಕೊಡಿಸಿದರು" ಎಂದು ಕುಮಾರ್ ಎಫ್ಐಆರ್ನಲ್ಲಿ ಆರೋಪಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಆಹಾರ ವಿತರಣಾ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದು, ಈ ಹಿಂದೆ ಇಂತಹ ಸನ್ನಿವೇಶ ಎದುರಾಗಿರಲಿಲ್ಲ ಎಂದು ಕುಮಾರ್ ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications