ಯೋಗಿ, ಭಾಗ್ವತ್ ನಿಂದನೆ: ಗಾಯಕಿ ಹರ್ದ್ ಕೌರ್ ವಿರುದ್ಧ ದೇಶದ್ರೋಹ ಪ್ರಕರಣ
ನವದೆಹಲಿ, ಜೂನ್ 20: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಿಂದನಾತ್ಮಕ ಫೇಸ್ಬುಕ್ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ರಾಪ್ಪರ್ ತರಣ್ ಕೌರ್ ದಿಲ್ಲೋನ್ ಅಲಿಯಾಸ್ ಹರ್ದ್ ಕೌರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ವಾರಣಾಸಿಯ ವಕೀಲ ಶಶಾಂಕ್ ಶೇಖರ್ ಅವರು ನೀಡಿದ ದೂರಿನ ಅನ್ವಯ ಇಂಗ್ಲೆಂಡ್ ಮೂಲದ ಗಾಯಕಿ ಹರ್ದ್ ಕೌರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153ಎ (ಧಾರ್ಮಿಕ ನೆಲೆಯ ಆಧಾರದಲ್ಲಿ ವಿಭಿನ್ನ ಗುಂಪುಗಳ ನಡುವೆ ವೈಷಮ್ಯ ಮೂಡಿಸುವುದು) 500 (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು 'ರೇಪ್ ಮ್ಯಾನ್' ಎಂದು ನಿಂದಿಸಿದ್ದ ಹರ್ದ್ ಕೌರ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರ ಸಾವಿಗೆ ಕಾರಣ ಎಂದು ಆರೋಪಿಸಿದ್ದರು.

ಮುಂಬೈ ಮೇಲೆ ನಡೆದ 26/11ರ ದಾಳಿ ಹಾಗೂ ಪುಲ್ವಾಮಾ ಉಗ್ರರ ದಾಳಿಗಳು ಸೇರಿದಂತೆ ಭಾರತದಲ್ಲಿ ನಡೆದ ಅನೇಕ ದಾಳಿಗಳಿಗೆ ಮೋಹನ್ ಭಾಗವತ್ ಕಾರಣ ಎಂದೂ ದೂರಿದ್ದರು.
ಕೌರ್ ಅವರ ಹೇಳಿಕೆಗಳಿಂದ ತೀವ್ರ ನೋವಾಗಿದ್ದು, ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿರುವುದಾಗಿ ಶೇಖರ್ ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಅಪರಾಧ ದಳದ ವಿಚಕ್ಷಣಾ ಘಟಕಕ್ಕೆ ವಹಿಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಮರ್ ಉಜಾಲ ತಿಳಿಸಿದ್ದಾರೆ.
ರಾಪ್ ಸಾಂಗ್ಗಳನ್ನು ಹಾಡುವ ಮೂಲಕ ಖ್ಯಾತರಾಗಿರುವ ಹರ್ದ್ ಕೌರ್, ಬಾಲಿವುಡ್ನ ಸಿನಿಮಾಗಳಲ್ಲಿಯೂ ಹಾಡಿದ್ದಾರೆ. 39 ವರ್ಷದ ಕೌರ್, ಭಾರತದಲ್ಲಿ ಜನಿಸಿ ಬಳಿಕ ಇಂಗ್ಲೆಂಡ್ಗೆ ತೆರಳಿ ಅಲ್ಲಿ ನೆಲೆಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications