ಯೋಗಿ, ಭಾಗ್ವತ್ ನಿಂದನೆ: ಗಾಯಕಿ ಹರ್ದ್ ಕೌರ್ ವಿರುದ್ಧ ದೇಶದ್ರೋಹ ಪ್ರಕರಣ
ನವದೆಹಲಿ, ಜೂನ್ 20: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಿಂದನಾತ್ಮಕ ಫೇಸ್ಬುಕ್ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ರಾಪ್ಪರ್ ತರಣ್ ಕೌರ್ ದಿಲ್ಲೋನ್ ಅಲಿಯಾಸ್ ಹರ್ದ್ ಕೌರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.
ವಾರಣಾಸಿಯ ವಕೀಲ ಶಶಾಂಕ್ ಶೇಖರ್ ಅವರು ನೀಡಿದ ದೂರಿನ ಅನ್ವಯ ಇಂಗ್ಲೆಂಡ್ ಮೂಲದ ಗಾಯಕಿ ಹರ್ದ್ ಕೌರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 124ಎ (ದೇಶದ್ರೋಹ), 153ಎ (ಧಾರ್ಮಿಕ ನೆಲೆಯ ಆಧಾರದಲ್ಲಿ ವಿಭಿನ್ನ ಗುಂಪುಗಳ ನಡುವೆ ವೈಷಮ್ಯ ಮೂಡಿಸುವುದು) 500 (ಮಾನನಷ್ಟ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು 'ರೇಪ್ ಮ್ಯಾನ್' ಎಂದು ನಿಂದಿಸಿದ್ದ ಹರ್ದ್ ಕೌರ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರ ಸಾವಿಗೆ ಕಾರಣ ಎಂದು ಆರೋಪಿಸಿದ್ದರು.

ಮುಂಬೈ ಮೇಲೆ ನಡೆದ 26/11ರ ದಾಳಿ ಹಾಗೂ ಪುಲ್ವಾಮಾ ಉಗ್ರರ ದಾಳಿಗಳು ಸೇರಿದಂತೆ ಭಾರತದಲ್ಲಿ ನಡೆದ ಅನೇಕ ದಾಳಿಗಳಿಗೆ ಮೋಹನ್ ಭಾಗವತ್ ಕಾರಣ ಎಂದೂ ದೂರಿದ್ದರು.
ಕೌರ್ ಅವರ ಹೇಳಿಕೆಗಳಿಂದ ತೀವ್ರ ನೋವಾಗಿದ್ದು, ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿರುವುದಾಗಿ ಶೇಖರ್ ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಅಪರಾಧ ದಳದ ವಿಚಕ್ಷಣಾ ಘಟಕಕ್ಕೆ ವಹಿಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಅಮರ್ ಉಜಾಲ ತಿಳಿಸಿದ್ದಾರೆ.
ರಾಪ್ ಸಾಂಗ್ಗಳನ್ನು ಹಾಡುವ ಮೂಲಕ ಖ್ಯಾತರಾಗಿರುವ ಹರ್ದ್ ಕೌರ್, ಬಾಲಿವುಡ್ನ ಸಿನಿಮಾಗಳಲ್ಲಿಯೂ ಹಾಡಿದ್ದಾರೆ. 39 ವರ್ಷದ ಕೌರ್, ಭಾರತದಲ್ಲಿ ಜನಿಸಿ ಬಳಿಕ ಇಂಗ್ಲೆಂಡ್ಗೆ ತೆರಳಿ ಅಲ್ಲಿ ನೆಲೆಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications