ಸಂಸ್ಕೃತ ವಿವಿ ವಿದ್ಯಾರ್ಥಿ ಚುನಾವಣೆ: ಎಲ್ಲ ನಾಲ್ಕೂ ಸ್ಥಾನಗಳಲ್ಲಿ ಎಬಿವಿಪಿಗೆ ಸೋಲು
ವಾರಣಾಸಿ, ಜನವರಿ 9: ವಾರಣಾಸಿಯ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಲ್ಲ ನಾಲ್ಕೂ ಸೀಟುಗಳಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಜಯಭೇರಿ ಭಾರಿಸಿದೆ. ಎನ್ಎಸ್ಯುಐ ಎದುರು ಆರೆಸ್ಸೆಸ್ನ ವಿದ್ಯಾರ್ಥಿ ಘಟಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸೋಲಿನ ಮುಖಭಂಗ ಅನುಭವಿಸಿದೆ.
Recommended Video
ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್ಎಸ್ಯುಐನ ಶಿವಮ್ ಶುಕ್ಲಾ, ಎಬಿವಿಪಿಯ ಹರ್ಷಿತ್ ಪಾಂಡೆ ವಿರುದ್ಧ ಭಾರಿ ಅಂತರದ ಜಯಗಳಿಸಿದರು. ಚಂದನ್ ಕುಮಾರ್ ಮಿಶ್ರಾ ಉಪಾಧ್ಯಕ್ಷರಾಗಿ, ಅವಿನಾಶ್ ಪಾಂಡೆ ಪ್ರಧಾನ ಕಾರ್ಯದರ್ಶಿ ಮತ್ತು ರಜನಿಕಾಂತ್ ದುಬೆ ಗ್ರಂಥಪಾಲಕ ಹುದ್ದೆಗಳಿಗೆ ಆಯ್ಕೆಯಾದರು.
ಚುನಾವಣೆಯಲ್ಲಿ ಶಿವಮ್ ಶುಕ್ಲಾ 709 ಮತಗಳನ್ನು ಪಡೆದರೆ, ಅವರ ಎದುರಾಳಿಯಾಗಿದ್ದ ಹರ್ಷಿತ್ ಪಾಂಡೆ ಕೇವಲ 224 ಮತಗಳನ್ನು ಪಡೆದರು. ಉಪಾಧ್ಯಕ್ಷ ಚಂದನ್ ಕುಮಾರ್ ಮಿಶ್ರಾ 553 ಮತಗಳನ್ನು ಗಳಿಸಿದರು. ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎನ್ಎಸ್ಯುಐನ ಅವಿನಾಶ್ ಪಾಂಡೆ 487 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಎಬಿವಿಪಿಯ ಗೌರವ್ ದುಬೆ 424 ಮತಗಳನ್ನು ಗಳಿಸಿದರು. ಗ್ರಂಥಪಾಲಕ ಹುದ್ದೆಗಾಗಿ ರಜನಿಕಾಂತ್ ದುಬೆ 567 ಮತ ಗಳಿಸಿದರೆ, ಅಜಯ್ ಕುಮಾರ್ ಮಿಶ್ರಾ 482 ಮತಗಳನ್ನು ಗಳಿಸಿದರು. ಅಶುತೋಷ್ ಉಪಾಧ್ಯಾಯ 227, ಶಿವ ಓಂ ಮಿಶ್ರಾ 106 ಮತ್ತು ಅರ್ಪಣ್ ತಿವಾರಿ 21 ಮತಗಳನ್ನು ಪಡೆದರು.

ವಿವಿ ಆವರಣದಲ್ಲಿ ಯಾವುದೇ ವಿವಾದ ಮತ್ತು ಗಲಾಟೆಗಳಿಗೆ ಅವಕಾಶ ನೀಡದಂತೆ ಗೆದ್ದ ಅಭ್ಯರ್ಥಿಗಳು ಸಂಭ್ರಮಾಚರಣೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾಧಿಕಾರಿಯಾಗಿದ್ದ ಪ್ರೊ. ಶೈಲೇಶ್ ಕುಮಾರ್ ಮಿಶ್ರಾ ಸೂಚಿಸಿದರು. ಗೆದ್ದ ಅಭ್ಯರ್ಥಿಗಳನ್ನು ಪೊಲೀಸ್ ಭದ್ರತೆಯಲ್ಲಿ ಮನೆಗೆ ಕಳುಹಿಸಿಕೊಡಲಾಯಿತು.
ವಿಶ್ವವಿದ್ಯಾಲಯದ 1950 ವಿದ್ಯಾರ್ಥಿಗಳ ಪೈಕಿ ಶೇ 50.82ರಷ್ಟು ಅಂದರೆ ಕೇವ 991 ವಿದ್ಯಾರ್ಥಿಗಳು ಮತ ಚಲಾಯಿಸಿದ್ದರು. ಇದರಲ್ಲಿ 931 ವಿದ್ಯಾರ್ಥಿಗಳು ಹಾಗೂ 60 ವಿದ್ಯಾರ್ಥಿನಿಯರು ಇದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications