ಅಧಿಕೃತವಾಗಿ ಬಿಜೆಪಿ ಸೇರಿದ ನಟಿ ಜಯಪ್ರದ, ಮಾಜಿ ದೋಸ್ತಿ ವಿರುದ್ಧ ಕಣಕ್ಕೆ?
ಲಕ್ನೋ, ಮಾರ್ಚ್ 26: ಹೆಸರಾಂತ ನಟಿ ಜಯಪ್ರದ ಅವರು ಅಧಿಕೃತವಾಗಿ ಮಂಗಳವಾರ ಬಿಜೆಪಿ ಸೇರಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಒಂದು ಕಾಲದಲ್ಲಿ ತಮ್ಮ ಆಪ್ತರಾಗಿದ್ದ ಸಮಾಜವಾದಿ ಪಕ್ಷದ ಆಝಂ ಖಾನ್ ಅವರ ವಿರುದ್ಧವೇ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದೇ ಹೌದಾದರೆ ಮಾಜಿ ದೋಸ್ತಿಗಳಲು ಮುಖಾಮುಖಿಯಾಗಲಿದ್ದಾರೆ.

ಲೋಕಸಭಾ ಚುನಾವಣೆ ಏಪ್ರಿಲ್ 11 ರಂದು ಆರಂಭವಾಗಲಿದ್ದು, ಏಳು ಹಂತಗಳಲ್ಲಿ ನಡೆಯಲಿದೆ. ಮೇ 19 ರ ವರೆಗೆ ನಡೆಯಲಿರುವ ಚುನಾವಣೆಯ ಫಲಿತಾಂಶ ಮೇ.23 ರಂದು ಹೊರಬೀಳಲಿದೆ.
55 ವರ್ಷ ವಯಸ್ಸಿನ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಟಿಕೆಟ್ ನಿಂದಲೇ ಎರಡು ಬಾರಿ (2004,2009) ರಾಂಪುರದ ಸಂಸದೆಯಾಗಿ ಲೋಕಸಭೆ ಪ್ರವೇಶಿಸಿದ್ದರು. ಆದರೆ, 2010ರಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಜತೆಗಿನ ಕಿತ್ತಾಟದಿಂದಾಗಿ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಜತೆಯಲ್ಲಿಯೇ ಜಯಪ್ರದಾ ಅವರನ್ನು ಎಸ್ ಪಿ ಉಚ್ಛಾಟಿಸಿತ್ತು.
ತೆಲಗುದೇಶಂ ಪಕ್ಷದ ಮೂಲಕ ರಾಜಕೀಯ ಬದುಕು ಆರಂಭಿಸಿದ್ದ ಜಯಪ್ರದ, ಎಸ್ಪಿ ಯಿಂದ ಉಚ್ಛಾಟನೆಗೊಂಡ ನಂತರ ಎನ್ ಡಿಎ ಯತ್ತ ಒಲವು ತೋರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನವನ್ನು ಸದಾ ಶ್ಲಾಘಿಸುತ್ತ, ಬಿಜೆಪಿ ಸೇರುವ ಸೂಚನೆ ನೀಡಿದ್ದ ಜಯಪ್ರದಾ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದು, ರಾಂಪುರದಿಂದ ಸ್ಪರ್ಧೆಗಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡ, ತೆಲುಗು, ಹಿಂದಿ ಸೇರಿದಂತೆ 70 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಜಯಪ್ರದಾ, ಅವರು 2014ರಲ್ಲಿ ರಾಷ್ಟ್ರೀಯ ಲೋಕದಳ ಟಿಕೆಟ್ ಪಡೆದು ಬಿಜ್ನೋರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications