ನನ್ನ ಮೇಲೆ Acid ಎರಚಲು ಸಂಚು ನಡೆದಿತ್ತು: ನಟಿ ಜಯಪ್ರದಾ
ರಾಂಪುರ(ಉತ್ತರ ಪ್ರದೇಶ), ಏಪ್ರಿಲ್ 04: ಬಿಜೆಪಿ ಅಭ್ಯರ್ಥಿಯಾಗಿ ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಕಣಕ್ಕಳಿದಿರುವ ನಟಿ ಜಯಪ್ರದ ಅವರು ಬುಧವಾರ ಸಮಾವೇಶವೊಂದರಲ್ಲಿ ಕಣ್ಣೀರಿಟ್ಟು ತಮ್ಮ ದುಃಖ ತೋಡಿಕೊಂಡರು.
"ನನ್ನ ಮೇಲೆ acid ಎರಚಲು ಸಂಚು ನಡೆದಿತ್ತು. ನಾನು ರಾಂಪುರವನ್ನು ಬಿಟ್ಟು ಹೋಗುವಂತೆ ಸಾಕಷ್ಟು ಪ್ರಯತ್ನ ನಡೆಸಲಾಗಿತ್ತು. ಆದರೆ ಬಿಜೆಪಿ ನನ್ನೊಂದಿಗೆ ನಿಂತಿದೆ. ನೀವು ನನ್ನೊಂದಿಗಿದ್ದೀರಿ. ಆದ್ದರಿಂದ ನಾನು ಮತ್ತೆ ಈ ಕ್ಷೇತ್ರದಿಂದಲೇ ಚುನಾವಣೆಗೆ ನಿಂತಿದ್ದೇನೆ" ಎಂದು ರಾಮಪುರ ಜನತೆ ಬಳಿ ಜಯಪ್ರದ ನೋವು ಹಂಚಿಕೊಂಡರು.
ಒಂದು ಕಾಲದಲ್ಲಿ ಜಯಪ್ರದಾ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಸಮಾಜವಾದಿ ಪಕ್ಷದ ಆಝಂ ಖಾನ್ ಅವರ ವಿರುದ್ಧ ಜಯಪ್ರದ ಸ್ಪರ್ಧಿಸುತ್ತಿದ್ದು, ಅವರು ಪ್ರಚಾರ ಮಾಡಲಾಗದಂತೆ ಸಮಾಜವಾದಿ ಪಕ್ಷದ ಮುಖಂಡರು ಅಡ್ಡಿಯಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

57 ವರ್ಷ ವಯಸ್ಸಿನ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಟಿಕೆಟ್ ನಿಂದಲೇ ಎರಡು ಬಾರಿ (2004,2009) ರಾಂಪುರದ ಸಂಸದೆಯಾಗಿ ಲೋಕಸಭೆ ಪ್ರವೇಶಿಸಿದ್ದರು. ಆದರೆ, 2010ರಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಜತೆಗಿನ ಕಿತ್ತಾಟದಿಂದಾಗಿ ರಾಜ್ಯ ಸಭಾ ಸದಸ್ಯ ಅಮರ್ ಸಿಂಗ್ ಜತೆಯಲ್ಲಿಯೇ ಜಯಪ್ರದಾ ಅವರನ್ನು ಎಸ್ ಪಿ ಉಚ್ಛಾಟಿಸಿತ್ತು.
ತೆಲಗುದೇಶಂ ಪಕ್ಷದ ಮೂಲಕ ರಾಜಕೀಯ ಬದುಕು ಆರಂಭಿಸಿದ್ದ ಜಯಪ್ರದ, ಎಸ್ಪಿ ಯಿಂದ ಉಚ್ಛಾಟನೆಗೊಂಡ ನಂತರ ಎನ್ ಡಿಎ ಯತ್ತ ಒಲವು ತೋರಿದ್ದರು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 70 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿರುವ ಜಯಪ್ರದಾ, ಅವರು 2014ರಲ್ಲಿ ರಾಷ್ಟ್ರೀಯ ಲೋಕದಳ ಟಿಕೆಟ್ ಪಡೆದು ಬಿಜ್ನೋರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸೋತಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications