ಅಯೋಧ್ಯೆ ಪೂಜೆ: 'ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ'- ಓವೈಸಿ
ಲಕ್ನೌ, ಆಗಸ್ಟ್ 5: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರುತ್ತಿದೆ. ಪ್ರಧಾನಿ ಮೋದಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ.
Recommended Video
ಆದರೆ ಮತ್ತೊಂದೆಡೆ 'ಬಾಬರಿ ಮಸೀದಿ ಘಟನೆಯನ್ನು ಅಯೋಧ್ಯೆಯ ಪರಂಪರೆಯಿಂದ ಅಳಿಸಲಾಗುವುದಿಲ್ಲ' ಎಂದು ಎಐಎಂಐಎಂ ನಾಯಕ ಹಾಗೂ ಹೈದರಾಬಾದ್ನ ಲೋಕಸಭಾ ಸಂಸದ ಅಸಾದುದ್ದೀನ್ ಒವೈಸಿ ಬುಧವಾರ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಒವೈಸಿ ಬಾಬ್ರಿ ಜಿಂದಾ ಹೈ (ಬಾಬ್ರಿ ಈಸ್ ಅಲೈವ್) ಎಂಬ ಹ್ಯಾಶ್ಟ್ಯಾಗ್ನೊಂದಿಗೆ, 'ಬಾಬ್ರಿ ಮಸೀದಿ ಇತ್ತು, ಮತ್ತು ಇರುತ್ತದೆ.' ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುಂಚೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಭಾಗವಹಿಸುವುದನ್ನು ಒವೈಸಿ ಖಂಡಿಸಿದ್ದರು. 'ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಈ ಕಾರ್ಯಕ್ರಮಕ್ಕೆ ಹಾಜರಾದರೆ ಅದು ದೇಶಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ' ಎಂದು ಒವೈಸಿ ಹೇಳಿದ್ದರು.

ನಾನು ಬದುಕುವವರೆಗೂ ಈ ಘಟನೆಯನ್ನು ಮುಚ್ಚಿಡಲಾಗುವುದಿಲ್ಲ ಎಂದು ಹೇಳಿರುವ ಒವೈಸಿ 'ನನ್ನ ಕುಟುಂಬ, ನನ್ನ ಜನರು ಮತ್ತು ಭಾರತದ ಜನರಿಗೆ ಬಾಬ್ರಿ ಮಸೀದಿ ಕೆಡವಿ ರಾಮ ಮಂದಿರ ಕಟ್ಟಲಾಗಿದೆ ಎಂದು ಹೇಳುತ್ತೇನೆ. 1992 ರ ಡಿಸೆಂಬರ್ 6 ರಂದು ಮಸೀದಿ ಅಲ್ಲಿತ್ತು... ಅದನ್ನು ಕೆಡವಲಾಯಿತು ... ಒಂದು ವೇಳೆ ಮಸೀದಿ ನೆಲಸಮ ಆಗಿರಲಿಲ್ಲ ಅಂದಿದ್ದರೆ ಈ ಸ್ಥಳದಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಸಲಾಗುತ್ತಿರಲಿಲ್ಲ' ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications