Get Updates
Get notified of breaking news, exclusive insights, and must-see stories!

ಅಯೋಧ್ಯೆ ಪೂಜೆ: 'ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ'- ಓವೈಸಿ

ಲಕ್ನೌ, ಆಗಸ್ಟ್ 5: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರುತ್ತಿದೆ. ಪ್ರಧಾನಿ ಮೋದಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ.

Recommended Video

      Ayodhya ರಾಮನ ದೇವಸ್ಥಾನ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟ ಮೋದಿ. | Oneindia Kannada

      ಆದರೆ ಮತ್ತೊಂದೆಡೆ 'ಬಾಬರಿ ಮಸೀದಿ ಘಟನೆಯನ್ನು ಅಯೋಧ್ಯೆಯ ಪರಂಪರೆಯಿಂದ ಅಳಿಸಲಾಗುವುದಿಲ್ಲ' ಎಂದು ಎಐಎಂಐಎಂ ನಾಯಕ ಹಾಗೂ ಹೈದರಾಬಾದ್‌ನ ಲೋಕಸಭಾ ಸಂಸದ ಅಸಾದುದ್ದೀನ್ ಒವೈಸಿ ಬುಧವಾರ ಹೇಳಿದ್ದಾರೆ.

      ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಒವೈಸಿ ಬಾಬ್ರಿ ಜಿಂದಾ ಹೈ (ಬಾಬ್ರಿ ಈಸ್ ಅಲೈವ್) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ, 'ಬಾಬ್ರಿ ಮಸೀದಿ ಇತ್ತು, ಮತ್ತು ಇರುತ್ತದೆ.' ಎಂದು ಟ್ವೀಟ್ ಮಾಡಿದ್ದಾರೆ.

      Aimim Leader Asaduddin Owaisi Said That Babri Masjid Thi, Hai Aur Rahegi

      ಇದಕ್ಕೂ ಮುಂಚೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಭಾಗವಹಿಸುವುದನ್ನು ಒವೈಸಿ ಖಂಡಿಸಿದ್ದರು. 'ಪ್ರಧಾನಿ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಈ ಕಾರ್ಯಕ್ರಮಕ್ಕೆ ಹಾಜರಾದರೆ ಅದು ದೇಶಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ' ಎಂದು ಒವೈಸಿ ಹೇಳಿದ್ದರು.

      Aimim Leader Asaduddin Owaisi Said That Babri Masjid Thi, Hai Aur Rahegi

      ನಾನು ಬದುಕುವವರೆಗೂ ಈ ಘಟನೆಯನ್ನು ಮುಚ್ಚಿಡಲಾಗುವುದಿಲ್ಲ ಎಂದು ಹೇಳಿರುವ ಒವೈಸಿ 'ನನ್ನ ಕುಟುಂಬ, ನನ್ನ ಜನರು ಮತ್ತು ಭಾರತದ ಜನರಿಗೆ ಬಾಬ್ರಿ ಮಸೀದಿ ಕೆಡವಿ ರಾಮ ಮಂದಿರ ಕಟ್ಟಲಾಗಿದೆ ಎಂದು ಹೇಳುತ್ತೇನೆ. 1992 ರ ಡಿಸೆಂಬರ್ 6 ರಂದು ಮಸೀದಿ ಅಲ್ಲಿತ್ತು... ಅದನ್ನು ಕೆಡವಲಾಯಿತು ... ಒಂದು ವೇಳೆ ಮಸೀದಿ ನೆಲಸಮ ಆಗಿರಲಿಲ್ಲ ಅಂದಿದ್ದರೆ ಈ ಸ್ಥಳದಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಸಲಾಗುತ್ತಿರಲಿಲ್ಲ' ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+