ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಖಿಲೇಶ್ ಯಾದವ್!
ಲಕ್ನೋ, ಜನವರಿ 19: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳು ಬಾಕಿ ಇವೆ. ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ, ಬದಲಿಗೆ ಪಕ್ಷ ಗೆಲುವಿನತ್ತ ಶ್ರಮಿಸುತ್ತೇನೆ ಎಂದು ಅಖಿಲೇಶ್ ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಜೊತೆಗೆ ಪಕ್ಷ ಬಯಸಿದರೆ ತಾವು ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದರು. ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.
ಮುಂದಿನ ತಿಂಗಳು ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯುಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ಪುರದಿಂದ ಸ್ಪರ್ಧಿಸಲಿದ್ದಾರೆ. ಗೋರಖ್ ಪುರದಿಂದ ಈಗಾಗಲೇ ಐದು ಬಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿರುವ ಯೋಗಿ ಆದಿತ್ಯನಾಥ್ ಕ್ಷೇತ್ರದಲ್ಲಿ ಮೊದಲ ಬಾರಿ ವಿಧಾನಸಭಾ ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಸದಸ್ಯರಾಗಿರುವ ಆದಿತ್ಯನಾಥ್ ಅವರು ಪಕ್ಷದ ನಾಯಕತ್ವ ನಿರ್ಧರಿಸುವ ಎಲ್ಲಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಇತ್ತೀಚೆಗೆ ಹೇಳಿದ್ದರು.
ಇದರ ಬೆನ್ನಲ್ಲೇ ಅಖಿಲೇಶ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಮೂಲಗಳು ತಿಳಿಸಿವೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆನ್ನುವ ಮಾಹಿತಿ ಇನ್ನಷ್ಟ ತಿಳಿದುಬರಬೇಕಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 58 ಸ್ಥಾನಗಳಿಗೆ ಮತದಾನ ನಡೆದರೆ, 55 ಸ್ಥಾನಗಳು ಮತ್ತು 59 ಸ್ಥಾನಗಳು ಕ್ರಮವಾಗಿ ಎರಡನೇ ಹಂತ ಮತ್ತು ಮೂರನೇ ಹಂತದಲ್ಲಿ ಆಗಲಿವೆ. ಮಾರ್ಚ್ 10 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.
ಅಖಿಲೇಶ್ ಯಾದವ್ ಹಲವು ಗೊಂದಲಗಳ ಬಳಿಕ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದ ಪ್ರತಿಯೊಂದು ಸ್ಥಾನದ ಮೇಲೆ ಕೇಂದ್ರೀಕರಿಸಲು ಆದ್ಯತೆ ನೀಡುವುದಾಗಿ ಅವರು ಈ ಹಿಂದೆಯೇ ಹೇಳಿದ್ದರು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಲೋಕಸಭೆಯ ಸಂಸದರಾಗಿದ್ದು, ಇದುವರೆಗೆ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಅವರ ಸ್ಥಾನವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಉತ್ತರ ಪ್ರದೇಶದ ಹಾಲಿ ಮುಖ್ಯಮಂತ್ರಿ ಬಿಜೆಪಿಯ ಯೋಗಿ ಆದಿತ್ಯನಾಥ್ ಅವರು ಮೊದಲ ಬಾರಿಗೆ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಮೇಲೆ ಒತ್ತಡವಿದೆ ಎಂದು ಮೂಲಗಳು ತಿಳಿಸಿವೆ. ಯೋಗಿ ಆದಿತ್ಯನಾಥ್ ಅವರು ಪೂರ್ವ ಯುಪಿಯ ಗೋರಖ್ಪುರ ಸದಾರ್ನಿಂದ ಸ್ಪರ್ಧಿಸಲಿದ್ದಾರೆ. ಪ್ರಭಾವಿ ಗೋರಖ್ಪುರ ಮಠದ ಮುಖ್ಯಸ್ಥರಾಗಿರುವ ಅರ್ಚಕ-ರಾಜಕಾರಣಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಈ ಪ್ರದೇಶದಲ್ಲಿ ದೊಡ್ಡ ಲಾಭವನ್ನು ನಿರ್ಣಯಿಸುತ್ತಿದೆ. ಮೂಲಗಳ ಪ್ರಕಾರ, ಅಖಿಲೇಶ್ ಯಾದವ್ ಅವರು ಪೂರ್ವ ಯುಪಿ ಅಥವಾ ಲಕ್ನೋದಂತಹ ಕೇಂದ್ರ ಕ್ಷೇತ್ರದಿಂದ ಒಂದು ಸ್ಥಾನವನ್ನು ಆಯ್ಕೆ ಮಾಡಬಹುದು. ಒಂದಕ್ಕಿಂತ ಹೆಚ್ಚು ಸ್ಥಾನಗಳಿಂದ ಸ್ಪರ್ಧಿಸುವುದು ಕೂಡ ಯೋಚನೆಯಲ್ಲಿದೆ ಎನ್ನಲಾಗುತ್ತಿದೆ.
ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಸುಳಿವಿನ ಬಳಿಕ ದೆಹಲಿಯಲ್ಲಿ ಅವರ ಸೊಸೆ ಅಪರ್ಣಾ ಯಾದವ್ ಅವರು ದೆಹಲಿಯಲ್ಲಿ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿಯಿಂದ ಹಲವಾರು ಪ್ರಮುಖ ಹಿಂದುಳಿದ ಜಾತಿ ನಾಯಕರು ಇತ್ತೀಚೆಗೆ ಸಮಾಜವಾದಿ ಪಕ್ಷಕ್ಕೆ ಬದಲಾದ ನಂತರ ಈ ಬೆಳವಣಿಗೆ ಕಂಡುಬಂದಿದೆ. ಸದ್ಯ ಎಸ್ಪಿಯಿಂದ ಬಿಜೆಪಿಗೆ ಜನನಾಯಕರು ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದಾರೆ.
ನವೆಂಬರ್ನಲ್ಲಿ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಅಂತಹ ನಿರ್ಧಾರವನ್ನು ಪಕ್ಷವು ಇನ್ನೂ ತೆಗೆದುಕೊಂಡಿಲ್ಲ. "ನಾನೇ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ" ಎಂದು ಸಮಾಜವಾದಿ ಸಂಸದರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Recommended Video
2012 ರಲ್ಲಿ, ಅವರು ಯುಪಿಯಲ್ಲಿ ಸಮಾಜವಾದಿ ಪಕ್ಷವನ್ನು ದೊಡ್ಡ ಗೆಲುವಿನತ್ತ ಮುನ್ನಡೆಸಿದಾಗ, ಅಖಿಲೇಶ್ ಯಾದವ್ 38 ನೇ ವಯಸ್ಸಿನಲ್ಲಿ ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆ ಸಮಯದಲ್ಲಿ ಅವರು ಕನೌಜ್ನಿಂದ ಲೋಕಸಭೆಯ ಸಂಸದರಾಗಿದ್ದರು. ಬಳಿಕ ರಾಜ್ಯ ವಿಧಾನ ಪರಿಷತ್ತಿನ ಹಾದಿ ಹಿಡಿದರು. ಅವರ ಪತ್ನಿ ಡಿಂಪಲ್ ಯಾದವ್ ಅವರು ತೆರವಾದ ಕನ್ನೌಜ್ ಸ್ಥಾನದಿಂದ ಅವಿರೋಧವಾಗಿ ಆಯ್ಕೆಯಾದರು.