ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಅಲಹಾಬಾದ್ ಕೋರ್ಟ್
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು, ಹಸುವಿನ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕಾಗಿರಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಹಾಗೆಯೇ ಗೋಹತ್ಯೆ ಮಾಡಿದ ಆರೋಪ ಹೊತ್ತಿರುವ ಜಾವೇದ್ ಎಂಬಾತನಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಮೂರ್ತಿ ಶೇಖರ್ ಯಾದವ್ ಅವರ ಪೀಠವು ಅರ್ಜಿದಾರರು ಹಸುವನ್ನು ಕಳ್ಳತನ ಮಾಡಿದ ನಂತರ ಅದನ್ನು ಕೊಂದು ಅದರ ತಲೆ ಕತ್ತರಿಸಿದ್ದುಮತ್ತು ಅದರ ಮಾಂಸವನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದರು ಎಂದು ಹೇಳಿದರು.

ಒಂದು ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯುಂಟಾದಾಗ, ದೇಶ ಸುರ್ಬಲವಾಗುತ್ತದೆ ಎಂದು ನಮಗೆ ತಿಳಿದಿದೆ ಎಂದು ಕೋರ್ಟ್ ಹೇಳಿದೆ.
ಇದು ಅರ್ಜಿದಾರರ ಮೊದಲ ಅಪರಾಧವಲ್ಲ, ಈ ಅಪರಾಧದ ಮುಂಚೆಯೇ ಅವರು ಗೋಹತ್ಯೆಯನ್ನು ಮಾಡಿದ್ದರು. ಇದು ಸಮಾಜದ ಸಾಮರಸ್ಯವನ್ನು ಕದಡಿದೆ ಅರ್ಜಿದಾರರು ಜಾಮೀನಿನ ಮೇಲೆ ಬಿಡುಗಡೆಯಾದರೆ, ಅವರು ಮತ್ತೊಮ್ಮೆ ಈ ಕೃತ್ಯವನ್ನು ಮಾಡುತ್ತಾರೆ ಅದು ಸಮಾಜಸ ಸ್ವಾಸ್ತ್ಯವನ್ನು ಹಾಳು ಮಾಡುತ್ತದೆ ಎಂದರು.
ಮೂಲಭೂತ ಹಕ್ಕು ಕೇವಲ ಗೋಮಾಂಸ ಭಕ್ಷಕರ ಪ್ರಮಾಧಿಕಾರವಲ್ಲ, ಬದಲಿಗೆ ಹಸುವನ್ನು ಪೂಜಿಸುವವರು ಮತ್ತು ಆರ್ಥಿಕವಾಗಿ ಗೋವುಗಳ ಮೇಲೆ ಅವಲಂಬಿತವಾಗಿರುವವರು ಅರ್ಥಪೂರ್ಣ ಜೀವನವನ್ನು ನಡೆಸುವ ಹಕ್ಕನ್ನು ಹೊಂದಿದ್ದಾರೆ.
ಹಸು ವಯಸ್ಸಾದಾಗ ಮತ್ತು ಅನಾರೋಗ್ಯದಿಂದ ಇರುವಾಗಲೂ ಕೂಡ ಉಪಯುಕ್ತವಾಗಿದೆ. ಮತ್ತು ಅದರ ಸಗಣಿ ಮತ್ತು ಮೂತ್ರವು ಕೃಷಿಗೆ ಔಷಧಿಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ.
ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ, ವಯಸ್ಸಾದಾಗ ಅಥವಾ ಅನಾರೋಗ್ಯಕ್ಕೆ ಒಳಗಾದಾಗಲೂ ಹಸುವನ್ನು ತಾಯಿಯಂತೆ ಪೂಜಿಸಲಾಗುವುದು.
ಗೋವುಗಳ ಮಹತ್ವವನ್ನು ಕೇವಲ ಹಿಂದೂಗಳು ಮಾತ್ರ ಅರ್ಥಮಾಡಿಕೊಂಡಿರುವುದಲ್ಲ ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಗೋವನ್ನು ಭಾರತದ ಸಂಸ್ಕೃತಿಯ ಪ್ರಮುಖ ಭಾಗವೆಂದು ಪರಿಗಣಿಸಿದ್ದಾರೆ.
5 ಮುಸ್ಲಿಂ ಆಡಳಿತಗಾರರು ಗೋಹತ್ಯೆಯನ್ನು ನಿಷೇಧಿಸಿದ್ದರು. ಭಾಬರ್, ಹುಮಾಯೂನ್ ಮತ್ತು ಆಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿ ನೀಡುವುದನ್ನು ನಿಷೇಧಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications