ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡು, ವಿವಾಹವಾದ ಮಹಿಳೆಯ ರಕ್ಷಣೆಗೆ ಕೋರ್ಟ್ ಆದೇಶ
ಲಕ್ನೋ, ಮೇ 27: ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮತ್ತು ಹಿಂದೂ ವಿಧಿಗಳ ಪ್ರಕಾರ ಮದುವೆಯಾದ ಮಹಿಳೆಗೆ ರಕ್ಷಣೆ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಪೊಲೀಸರಿಗೆ ಆದೇಶಿಸಿದೆ
ಮತಾಂತರ ಮತ್ತು ಮದುವೆಗೆ ಆಕ್ಷೇಪಿಸಿ ತನ್ನ ತಂದೆ ನೀಡಿದ ಬೆದರಿಕೆಗಳ ಬಗ್ಗೆ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಮುಸ್ಲಿಂನಿಂದ ಹಿಂದೂಗೆ ಮತಾಂತರಗೊಂಡ ಕಾರಣ ಮತ್ತು ಹಿಂದೂ ವಿಧಿಗಳ ಪ್ರಕಾರ ವಿವಾಹವಾದ ಕಾರಣಕ್ಕೆ ಕುಟುಂಬಸ್ಥರು ಜೀವ ಬೆದರಿಕೆ ಹಾಕುತ್ತಿರುವುದಾಗಿ 19 ವರ್ಷದ ಮಹಿಳೆ ಹಾಗೂ ಆಕೆಯ ಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ನ್ಯಾಯಮೂರ್ತಿ ಜೆ.ಜೆ.ಮುನೀರ್, ಮೀರತ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ, ಅರ್ಜಿದಾರರ ಜೀವನಕ್ಕೆ ಮತ್ತು ಜೀವಕ್ಕೆ ಅಗತ್ಯವಾದ ರಕ್ಷಣೆ ಒದಗಿಸಬೇಕು. ಮಹಿಳೆ ಮತ್ತು ಆಕೆಯ ಪತಿಗೆ ಕುಟುಂಬ, ಸ್ಥಳೀಯ ಸಮುದಾಯ ಅಥವಾ ಸ್ಥಳೀಯ ಪೊಲೀಸರಿಂದ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವಂತೆ ನಿರ್ದೇಶಿಸಿದೆ

ಅರ್ಜಿದಾರರ ಶಾಂತಿಯುತ ದಾಂಪತ್ಯ ಜೀವನದಲ್ಲಿ ಸ್ಥಳೀಯ ಪೊಲೀಸರು ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು. ಅರ್ಜಿದಾರರಿಗೆ ಯಾವುದೇ ದೈಹಿಕ ಹಾನಿಯಾಗದಂತೆಯೂ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಆದೇಶದಲ್ಲಿ ನ್ಯಾಯಮೂರ್ತಿ ಜೆ.ಜೆ.ಮುನೀರ್ ಹೇಳಿದ್ದಾರೆ.
ಈ ಅರ್ಜಿಯಲ್ಲಿ ಆಕೆ ಹುಟ್ಟಿನಿಂದಲೇ ಮುಸ್ಲಿಂ ಆದರೂ ಹಿಂದೂ ಧರ್ಮದ ಬಗ್ಗೆ ಅಪಾರ ನಂಬಿಕೆ ಹೊಂದಿದ್ದಳು. ಹಿಂದೂ ಧರ್ಮ ಸ್ವೀಕರಿಸಿ, ಹಿಂದೂ ಹೆಸರನ್ನು ಇಟ್ಟುಕೊಂಡಿದ್ದಳು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.
ಏಪ್ರಿಲ್ 15 ರಂದು, ಮೀರತ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಅರ್ಜಿ ಸಲ್ಲಿಸಿ ಆಕೆಯು ತನ್ನ ಹೆಸರನ್ನು ಹಾಗೂ ಧರ್ಮದ ಬದಲಾವಣೆ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಪತ್ರಿಕೆಯಲ್ಲಿ ಪ್ರಕಟವಾಗಿದ್ದವು. ಮಹಿಳೆ ಹಿಂದೂ ವಿಧಿಗಳ ಪ್ರಕಾರ ಏಪ್ರಿಲ್ 16 ರಂದು ಮೀರತ್ನ ಮಾಲಿಯಾನ ಆರ್ಯ ಸಮಾಜ ಮಂದಿರದಲ್ಲಿ ವಿವಾಹವಾಗಿದ್ದು, ಈ ನವ ದಂಪತಿ ಅದೇ ದಿನ ಮೀರತ್ನಲ್ಲಿ ಮದುವೆ ನೋಂದಾವಣಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ವಿವಾಹವನ್ನು ಇನ್ನೂ ಕೂಡಾ ನೋಂದಾವಣೆ ಮಾಡಿಲ್ಲ. ಈ ನಡುವೆ ಆಕೆಯ ತಂದೆ ಸೇರಿದಂತೆ, ಕುಟುಂಬಸ್ಥರು, ಸ್ಥಳೀಯರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೂಡಾ ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಈ ಹಿನ್ನೆಲೆ ಅರ್ಜಿದಾರರ ಮನೆಗೆ ಸ್ನೇಹಿತರು, ಸಹವರ್ತಿಗಳು, ಮಧ್ಯವರ್ತಿಗಳು ತೆರಳಬಾರದು, ಯಾವುದೇ ಮೊಬೈಲ್ ಕರೆಯ ಮೂಲಕ ಅರ್ಜಿದಾರರನ್ನು ಸಂಪರ್ಕಿಸಬಾರದು, ಅರ್ಜಿದಾರರಿಗೆ ಯಾವುದೇ ದೈಹಿಕ ಹಾನಿ ಉಂಟು ಮಾಡಬಾರದು ಎಂದು ನ್ಯಾಯಾಲಯವು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿದೆ.
ಈ ವಿಷಯದಲ್ಲಿ ಅಫಿಡವಿಟ್ ಸಲ್ಲಿಸಲು ರಾಜ್ಯ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿರುವ ನ್ಯಾಯಾಲಯ ವಿಚಾರಣೆಯನ್ನು ಜೂನ್ 23 ಕ್ಕೆ ಮುಂದೂಡಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications