ಗೋಹತ್ಯೆ ನಿಷೇಧ ಕಾಯ್ದೆಯ ದುರ್ಬಳಕೆ, ಅಮಾಯಕರ ಬಂಧನ: ಹೈಕೋರ್ಟ್ ಕಳವಳ
ಲಕ್ನೋ, ಅಕ್ಟೋಬರ್ 27: ಉತ್ತರ ಪ್ರದೇಶದ ಗೋಹತ್ಯೆ ತಡೆ ಕಾಯ್ದೆಯ ದುರ್ಬಳಕೆಯ ಬಗ್ಗೆ ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ಕಾಯ್ದೆಯನ್ನು ಅಮಾಯಕ ವ್ಯಕ್ತಿಗಳ ಮೇಲೆ ಬಳಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಕೋರ್ಟ್, ಅಂತಹ ಪ್ರಕರಣಗಳಲ್ಲಿ ಪೊಲೀಸರು ಸಲ್ಲಿಸಿರುವ ಸಾಕ್ಷ್ಯಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದೆ.
ಕಾಯ್ದೆಯಡಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ್, 'ಕಾಯ್ದೆಯನ್ನು ಅಮಾಯಕ ಜನರ ಮೇಲೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಮಾಂಸ ಪತ್ತೆಯಾದಾಗ ಅದನ್ನು ಪರಿಶೀಲಿಸದೆಯೇ ಅಥವಾ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ವಿಶ್ಲೇಷಿಸದೆಯೇ ಗೋಮಾಂಸ ಎಂದು ತೋರಿಸಲಾಗುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಹೆಚ್ಚಿನ ಪ್ರಕರಣಗಳಲ್ಲಿ ಮಾಂಸವನ್ನು ವಿಶ್ಲೇಷಣೆಗೆ ಕಳುಹಿಸಲಾಗುತ್ತಿಲ್ಲ. ತಾವು ಮಾಡದೆ ಇರುವ ಅಪರಾಧಗಳಿಗಾಗಿ ಆರೋಪಿಗಳು ಜೈಲಿನಲ್ಲಿ ಇರುವುದು ಮುಂದುವರಿದಿದೆ. ಈ ಪ್ರಕರಣಗಳು ಮ್ಯಾಜಿಸ್ಟ್ರೇಟ್ 1 ವರ್ಗದ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಒಳಪಟ್ಟು ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆಗೆ ಒಳಗಾಗಬಹುದು. ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತೋರಿಸಿರುವ ಕಡೆಗಳಲ್ಲೆಲ್ಲ ವಶಪಡಿಸಿಕೊಳ್ಳಲಾದ ಬಗ್ಗೆ ಸೂಕ್ತ ಮಾಹಿತಿಗಳನ್ನು ಸಿದ್ಧಪಡಿಸುತ್ತಿಲ್ಲ ಮತ್ತು ಹಾಗೆ ವಶಪಡಿಸಿಕೊಂಡ ಹಸುಗಳು ಎಲ್ಲಿಗೆ ಹೋಗುತ್ತವೆ ಎನ್ನುವುದು ಯಾರಿಗೂ ತಿಳಿದಿಲ್ಲ ' ಎಂದು ಹೇಳಿದ್ದಾರೆ.

ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ ಆಗಸ್ಟ್ 5ರಂದು ಜೈಲುಪಾಲಾಗಿದ್ದ ರಹಮುದ್ದೀನ್ ಸಲ್ಲಿಸಿದ್ದ ಅರ್ಜಿ ಆಧಾರದಲ್ಲಿ ಈ ಆದೇಶ ನೀಡಲಾಗಿದೆ. ರಮಹಮುದ್ದೀನ್ ಅವರನ್ನು ಸ್ಥಳದಲ್ಲಿಯೇ ಬಂಧಿಸಿರಲಿಲ್ಲ ಎಂದು ವಕೀಲರು ಆರೋಪಿಸಿದ್ದರು.
ಉತ್ತರ ಪ್ರದೇಶ ಸರ್ಕಾರದ ದಾಖಲೆಗಳ ಪ್ರಕಾರ ಆಗಸ್ಟ್ 19ರವರೆಗೆ ಗೋಹತ್ಯೆ ಪ್ರಕರಣಗಳಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಈ ವರ್ಷ 139 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ, ಉತ್ತರ ಪ್ರದೇಶ ಗೋಹತ್ಯೆ ತಡೆ ಕಾಯ್ದೆಯಡಿ 4,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪೊಲೀಸರು ಪುರಾವೆ ಒದಗಿಸಲು ಸಾಧ್ಯವಾಗದೆ 32 ಪ್ರಕರಣಗಳನ್ನು ಅಂತ್ಯಗೊಳಿಸಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications