ಡಾ. ಕಫೀಲ್ ಖಾನ್ ವಿರುದ್ಧದ ಅಮಾನತು ಆದೇಶಕ್ಕೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್
ಅಲಹಾಬಾದ್, ಸೆಪ್ಟೆಂಬರ್ 15: ಉತ್ತರ ಪ್ರದೇಶದ ಬಹರಾಯಿಚ್ನಲ್ಲಿ ರೋಗಿಗಳಿಗೆ ಬಲವಂತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ಆರೋಪದಡಿ ಡಾ. ಕಫೀಲ್ ಖಾನ್ ಅವರನ್ನು ಅಮಾನತ್ತುಗೊಳಿಸಿದ್ದ ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ತಡೆ ಹಿಡಿದಿದೆ. ಆದೇಶಕ್ಕೆ ತಡೆ ನೀಡಿದ ಏಕಸದಸ್ಯ ಪೀಠದ ನ್ಯಾ. ಸರಳ್ ಶ್ರೀವಾಸ್ತವ ಅವರು ಡಾ. ಖಾನ್ ಅವರ ವಿರುದ್ಧದ ವಿಚಾರಣೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ.
ಉತ್ತರ ಪ್ರದೇಶ ಪೊಲೀಸರು 2018ರಲ್ಲಿ ಖಾನ್ ಅವರನ್ನು ಬಹರಾಯಿಚ್ ಜಿಲ್ಲಾ ಆಸ್ಪತ್ರೆ ಆಡಳಿತ/ ಉಸ್ತುವಾರಿ ಅನುಮತಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕ ಉಪಟಳಕ್ಕೆ ಕಾರಣವಾದ ಆರೋಪದಡಿ ಬಂಧಿಸಿದ್ದರು. ಇದೇ ವೇಳೆ ಅವರ ಸಹಾಯಕರಾದ ಸೂರಜ್ ಪಾಂಡೆ ಮತ್ತು ಮಹಿಪಾಲ್ ಸಿಂಗ್ ಅವರನ್ನೂ ಸಹ ವಶಕ್ಕೆ ಪಡೆಯಲಾಗಿತ್ತು. ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿತ್ತು. ತಮ್ಮ ವಿರುದ್ಧ ಇಲಾಖಾ ವಿಚಾರಣೆಯನ್ನು ಆರಂಭಿಸಿ ಎರಡು ವರ್ಷಗಳೇ ಕಳೆದರೂ ಅದನ್ನು ಇನ್ನೂ ಪೂರ್ಣಗೊಳಿಸಲಾಗಿಲ್ಲ ಎಂದು ಆಕ್ಷೇಪಿಸಿ ಖಾನ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಈ ಹಿಂದೆ ನೀಡಿರುವ ತೀರ್ಪಿನ ಅನ್ವಯ ಸುದೀರ್ಘ ವಿಳಂಬಿತ ಅವಧಿಯವರೆಗೆ ಅಮಾನತು ಆದೇಶ ಉಳಿಯುವುದಿಲ್ಲ ಎಂದು ವಾದಿಸಲಾಗಿತ್ತು.
ಮತ್ತೊಂದೆಡೆ, ಸರ್ಕಾರಿ ವಕೀಲ, ಎಕೆ ಗೋಯೆಲ್ ಅವರು, ಖಾನ್ ವಿರುದ್ಧದ ತನಿಖಾ ವರದಿಯನ್ನು ಆಗಸ್ಟ್ 27, 2021 ರಂದು ಸಲ್ಲಿಸಿದ್ದು ಮತ್ತು ಅದರ ಪ್ರತಿಯನ್ನು ಅರ್ಜಿದಾರರಿಗೆ ಆಗಸ್ಟ್ 28, 2021 ರಂದು ಕಳುಹಿಸಲಾಗಿದೆ ಎಂದು ಅರ್ಜಿದಾರರು ವಿಚಾರಣಾ ವರದಿಯ ವಿರುದ್ಧ ಆಕ್ಷೇಪಣೆ ಸಲ್ಲಿಸುವಂತೆ ಕೇಳಿದರು. ಎಲ್ಲಾ ಪ್ರತಿವಾದಿಗಳಿಗೆ ಪ್ರತಿ ಅಫಿಡವಿಟ್ ಸಲ್ಲಿಸಲು ನಾಲ್ಕು ವಾರಗಳ ಸಮಯವನ್ನು ನ್ಯಾಯಾಲಯವು ನೀಡಿದೆ.

ಎರಡನೇ ಅಮಾನತು ಆದೇಶವನ್ನು ರವಾನಿಸಲು ಶಿಸ್ತಿನ ಪ್ರಾಧಿಕಾರಕ್ಕೆ ಅಂತರ್ಗತ ಅಧಿಕಾರವಿದೆ ಎಂದು ಗೋಯೆಲ್ ಸಲ್ಲಿಸಿದರು. ಈ ಪ್ರಕರಣವನ್ನು ನವೆಂಬರ್ 11, 2021 ರಂದು ಹೆಚ್ಚಿನ ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಮತ್ತು ಈ ದಿನಾಂಕದಂದು, ತನಿಖೆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಸರ್ಕಾರವನ್ನು ತಿಳಿಸಲಾಗಿದೆ.
2017ರ ಆಗಸ್ಟ್ನಲ್ಲಿ ಗೋರಖ್ಪುರದ ಬಾಬಾ ರಾಘವ್ ದಾಸ್ (ಬಿಆರ್ಡಿ) ವೈದ್ಯಕೀಯ ಕಾಲೇಜಿನಲ್ಲಿ ಆಮ್ಲಜನಕದ ಪೂರೈಕೆ ಕೊರತೆಯಿಂದಾಗಿ 60 ಮಕ್ಕಳು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಕಫೀಲ್ ಖಾನ್ ಕಾರಣ ಎಂದು ಆರೋಪಿಸಿ ಅವರನ್ನು ಕೆಲಸದಿಂದ ಅಮಾತುಗೊಳಿಸಿ, ಬಂಧಿಸಲಾಗಿತ್ತು. ಆದರೆ ಈ ಬಗ್ಗೆ ತನಿಖೆ ನಡೆಸಿದ್ದ ಉತ್ತರ ಪ್ರದೇಶ ಸರ್ಕಾರ ಅವರು ನಿರ್ದೋಷಿ ಎಂದು ವರದಿ ನೀಡಿತ್ತು.

ಇನ್ನೊಂದು ಪ್ರಕರಣದಲ್ಲಿ ಅಲಿಗಢದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಕಫೀಲ್ ಖಾನ್ ವಿರುದ್ಧದ ದೋಷಾರೋಪಗಳು ದೂರಾಗಿವೆ. ಕಫೀಲ್ ಖಾನ್ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ.
ಸಿಎಎ ವಿರೋಧಿ ಭಾಷಣದ ಹಿನ್ನೆಲೆಯಲ್ಲಿ ಖಾನ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿ ಬಂಧಿಸಲಾಗಿತ್ತು. ಇದನ್ನು ಕಳೆದ ವರ್ಷದ ಸೆಪ್ಟೆಂಬರ್ 1ರಂದು ಅಲಹಾಬಾದ್ ಹೈಕೋರ್ಟ್ ವಜಾ ಮಾಡಿತ್ತು. ಈ ಆದೇಶವನ್ನು ಡಿಸೆಂಬರ್ 17ರಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಎನ್ಎಸ್ಎ ಕಾಯಿದೆ ಅಡಿ ಬಂಧನವನ್ನು ಪ್ರಶ್ನಿಸಿ ಖಾನ್ ತಾಯಿ ನುಜಾತ್ ಪರ್ವೀನ್ ಅವರು ಹೇಬಿಯಸ್ ಕಾರ್ಪಸ್ ಮನವಿ ಸಲ್ಲಿಸಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications