ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿ
ಅಮೇಥಿ, ಮೇ 08: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ವಿರುದ್ಧ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವ್ಯಕ್ತಿಯೊಬ್ಬ ಚುನಾವಣಾ ಆಯೋಗಕ್ಕೆ ತಮ್ಮ ರಕ್ತದಲ್ಲೇ ಪತ್ರ ಬರೆದಿದ್ದಾರೆ.
ಅಮೇಥಿಯ ಶಹ್ಘರ್ ಎಂಬ ಊರಿನ ಮನೋಜ್ ಕಶ್ಯಪ್ ಎಂಬಾತ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, "ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶ ಕಂಡ ಮಹಾನ್ ಪ್ರಧಾನಿ. ಪಂಚಾಯತ್ ರಾಜ್ ಪದ್ಧತಿಯನ್ನು ಪರಿಚಯಿಸಿದ್ದು ಅವರು, ಕಂಪ್ಯೂಟರ್ ಕ್ರಾಂತಿಯಾಗುವಂತೆ ಮಾಡಿದ್ದು ಅವರು. ಆದರೆ ಅವರ ಬಗ್ಗೆ ಹಾಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ಕೇಳಲಿ ನನಗೆ ಆಘಾತವಾಗಿದೆ" ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
स्वर्गीय राजीव गाँधी जी के मोदी के अपमान जनक टिप्पणी पर अमेठी के इस नवजवान ने निर्वाचन आयोग को चुनाव सम्पन्न होने के बाद खून से लिखा पत्र। pic.twitter.com/tEHTLZ1oRN
— Deepak Singh (@DeepakSinghINC) May 7, 2019
ಮೋದಿ ಅವರು ಇಂಥ ಹೇಳಿಕೆಗಳನ್ನು ನೀಡದಂತೆ ಅವರಿಗೆ ಎಚ್ಚರಿಕೆ ನೀಡಬೇಕು, ಇಂಥ ಹೇಳಿಕೆಗಳಿಂದ ರಾಜೀವ್ ಗಾಂಧಿ ಅವರ ಅಭಿಮಾನಿಗಳ ಭಾವನೆಗಳಿಗೆ ನೋವಾಗುತ್ತದೆ ಎಮದು ಮನೋಜ್ ಪತ್ರದಲ್ಲಿ ಬರೆದಿದ್ದಾನೆ.

ಈ ಪತ್ರವನ್ನು ಕಾಂಗ್ರೆಸ್ ಎಂಎಲ್ ಸಿ ದೀಪಕ್ ಸಿಂಗ್ ಎಂಬುವವರು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ನರೇಂದ್ರ ಮೋದಿ, 'ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1' ಎಂದು ಅಣಕಿಸಿದ್ದರು. ಈ ಹೇಳಿಕೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications