ಚಿತ್ರಗಳು: ಆಯೋಧ್ಯೆಯ ರಾಮ ಜನ್ಮಭೂಮಿ ತಾಣದಲ್ಲಿ ಶಿವಲಿಂಗ
ಅಯೋಧ್ಯೆ, ಮೇ 21: ಸುಪ್ರೀಂಕೋರ್ಟ್ ಆದೇಶದಂತೆ ಆಯೋಧ್ಯೆಯ ರಾಮ ಜನ್ಮಭೂಮಿ ತಾಣದಲ್ಲಿ ಮಂದಿರ ನಿರ್ಮಾಣ, ದೇಗುಲ ಪುನರ್ ಸ್ಥಾಪನೆ ಕಾರ್ಯ ಭರದಿಂದ ಸಾಗಿದೆ. ಈ ನಡುವೆ ಹಳೆ ಕಟ್ಟಡಗಳ ಅವಶೇಷಗಳ ನಡುವೆ ಪುರಾತನ ಶಿವಲಿಂಗ, ಮರಳುಶಿಲೆ ಕೆತ್ತನೆಗಳು ಪತ್ತೆಯಾಗಿವೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಕಳೆದ ಹತ್ತು ದಿನಗಳಿಂದ ಇಲ್ಲಿನ ಕಟ್ಟಡ ನೆಲಸಮ ಕೆಲಸ ನಡೆಯುತ್ತಿದೆ. ಮಣ್ಣು-ಕಲ್ಲುಗಳಡಿಯಲ್ಲಿ ಸಿಕ್ಕ ಅವಶೇಷಗಳಲ್ಲಿ 7 ಕಲ್ಲಿನ ಸ್ತಂಭಗಳು , 5 ಅಡಿ ಎತ್ತರದ ಶಿವಲಿಂಗ, ಕೆತ್ತನೆಗಳು ಸಿಕ್ಕಿವೆ ಎಂದಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಮೂಲ ರಾಮ ದೇವರ ವಿಗ್ರಹವನ್ನು ಇದೇ ಆವರಣದಲ್ಲಿರುವ ಮಾನಸ ಭವನದಲ್ಲಿರಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಹೊಸದಾಗಿ ಮಂದಿರ ನಿರ್ಮಾಣವಾದ ಬಳಿಕ ಪುನರ್ ಪ್ರತಿಷ್ಠಾಪನೆ ಮಾಡಲಾಗುತ್ತದೆ.
ಉತ್ತರಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಶನಿವಾರ(ನವೆಂಬರ್ 09) ಬೆಳಗ್ಗೆ ಅಂತಿಮ ತೀರ್ಪು ಪ್ರಕಟಿಸಿತ್ತು. ಐತಿಹಾಸಿಕ ತೀರ್ಪು ನೀಡಿದ ಬಳಿಕ ಸರ್ಕಾರ ರಾಮಮಂದಿರ ನಿರ್ಮಾಣದತ್ತ ಮೊದಲ ಹೆಜ್ಜೆ ಇಡಲಾಗಿದೆ.

ನವೆಂಬರ್ 09 ರಂದು ಅಯೋಧ್ಯೆ ವಿವಾದದ ಕುರಿತು ತೀರ್ಪು ನೀಡಿದ ಸುಪ್ರೀಂ ಕೋರ್ಟ್, 2.77 ಎಕರೆ ವಿವಾದಿತ ಭೂಮಿ ರಾಮಲಲ್ಲಾಗೆ ಸೇರಿದೆ ಎಂದಿತ್ತು. ಜೊತೆಗೆ ಮುಸ್ಲಿಮರಿಗೆ ಬೇರೆ ಎಲ್ಲಾದರೂ 5 ಎಕರೆ ಪರ್ಯಾಯ ಜಮೀನನ್ನು ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು.
श्रीराम जन्मभूमि पर श्रीराम जन्मभूमि तीर्थ क्षेत्र द्वारा भूमि समतलीकरण का कार्य 11 मई से प्रारम्भ हुआ है। जिसमें अनेक प्रकार की देवी देवताओं की खंडित मूर्तियां पुरावशेष, पुष्प कलश आमलक व दोरजाम्ब के पत्थर इत्यादि मिले हैं।#जय_श्रीराम pic.twitter.com/rfiMEpkPrQ
— विनोद बंसल (@vinod_bansal) May 20, 2020

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಶರದ್ ಬೊಬ್ಡೆ, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು ನೀಡಿದ ಒಮ್ಮತದ ತೀರ್ಪಿನಂತೆ, ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಸಿಗಲಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರವು ಟ್ರಸ್ಟ್ ಸ್ಥಾಪನೆ ಮಾಡಿದ್ದು, 2024ರೊಳಗೆ ಮಂದಿರ ನಿರ್ಮಾಣವಾಗಲಿದ್ದು, ಶ್ರೀರಾಮಚಂದ್ರ ಮೂರ್ತಿಯ ದರ್ಶನ ಪ್ರಾಪ್ತಿಯಾಗಲಿದೆ" ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೊಕ್ಜೆ ಪ್ರತಿಕ್ರಿಯಿಸಿದ್ದಾರೆ.

ಈ ಟ್ರಸ್ಟ್ನಲ್ಲಿ ಹಿರಿಯ ನ್ಯಾಯವಾದಿ ಕೆ.ಪರಾಸರನ್, ಅಲಹಾಬಾದ್ನ ಜಗದ್ಗುರು ಶಂಕರಾಚಾರ್ಯ ಜ್ಯೋತಿಷ್ಪೀಠಾಧೀಶ್ವರ ಸ್ವಾಮಿ ವಾಸುದೇವಾನಂದ ಸರಸ್ವತೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಹರಿದ್ವಾರದ ಯುಗಪುರುಷ ಪರಮಾನಂದ ಜೀ ಮಹಾರಾಜ್, ಪುಣೆಯ ಸ್ವಾಮಿ ಗೋವಿಂದದೇವ್ ಗಿರಿಜೀ ಮಹಾರಾಜ್, ಅಯೋಧ್ಯೆಯ ವಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ, ಅಯೋಧ್ಯೆಯ ಹೋಮಿಯೋಪತಿ ಡಾಕ್ಟರ್ ಅನಿಲ್ ಮಿಶ್ರಾ, ಪಾಟ್ನದ ಕಾಮೇಶ್ವರ ಚೌಪಾಲ್(ಎಸ್ಸಿ) , ಮಹಾಂತ ದಿನೇಂದ್ರ ದಾಸ್, ಅಯೋಧ್ಯೆಯ ನಿರ್ಮೋಹಿ ಅಖಾಡದ ಪ್ರತಿನಿಧಿಗಳು ಸದಸ್ಯರಾಗಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications