ಯುಪಿಯಲ್ಲಿ ಇಂದಿನಿಂದ ಆ್ಯಂಟಿ ರೋಮಿಯೋ ಸ್ಕ್ವಾಡ್ ಮತ್ತೆ ಸಕ್ರಿಯ
ಲಕ್ನೋ ಏಪ್ರಿಲ್ 02: ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾರ್ಯಪ್ರವೃತ್ತರಾಗಿದ್ದಾರೆ. ನವರಾತ್ರಿಯ ಮೊದಲ ದಿನದಿಂದಲೇ ಮಹಿಳೆಯರ ಸುರಕ್ಷತೆಗಾಗಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಅನ್ನು ಸಕ್ರಿಯಗೊಳಿಸುವಂತೆ ಸಿಎಂ ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೂಚನೆಗಳ ಪ್ರಕಾರ ಇಂದಿನಿಂದ ಆ್ಯಂಟಿ ರೋಮಿಯೋ ಸ್ಕ್ವಾಡ್ ರಾಜ್ಯದ ಎಲ್ಲಾ ಶಾಲಾ-ಕಾಲೇಜು ಹಾಗೂ ರಸ್ತೆಗಳಲ್ಲಿ ಸಕ್ರಿಯವಾಗಿರುತ್ತದೆ. ಇದಲ್ಲದೆ ಮಿಷನ್ ಶಕ್ತಿಯ ನಾಲ್ಕನೇ ಹಂತಕ್ಕೆ ಏಪ್ರಿಲ್ 10 ರಿಂದ ರಾಜ್ಯಾದ್ಯಂತ ಚಾಲನೆ ಸಿಗಲಿದೆ.
ಶುಕ್ರವಾರ ತಂಡದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಈವ್ ಟೀಸಿಂಗ್ ತಡೆಯಲು ಪ್ರತಿ ಶಾಲಾ-ಕಾಲೇಜುಗಳಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಕಾರ್ಯಾರಂಭ ಮಾಡಬೇಕು. ಮಾರುಕಟ್ಟೆ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಬೇಕು ಮತ್ತು ಮಹಿಳೆಯರ ಸುರಕ್ಷತೆಗಾಗಿ ಎಲ್ಲಾ 75 ಜಿಲ್ಲೆಗಳಲ್ಲಿ 3,000 ಕ್ಕೂ ಹೆಚ್ಚು ಪಿಂಕ್ ಬೂತ್ಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ತಂಡ 9ರೊಂದಿಗಿನ ಸಭೆಯಲ್ಲಿ ಆದಿತ್ಯನಾಥ್ ಅವರು ಗ್ರಾಮೀಣ ಪ್ರದೇಶದ ಮಹಿಳೆಯರೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಮತ್ತು ಅವರಿಗೆ ಸರ್ಕಾರದಿಂದ ನಡೆಸುತ್ತಿರುವ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ತಿಳಿಸುವಂತೆ ಮಹಿಳಾ ಕಾನ್ಸ್ಟೆಬಲ್ಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಅವರು ಮಿಷನ್ ಶಕ್ತಿಯ ನಾಲ್ಕನೇ ಹಂತವನ್ನು ಏಪ್ರಿಲ್ 10 ರಂದು ಪ್ರಾರಂಭಿಸಲಾಗುವುದು ಎಂದು ಹೇಳಿದರು. ಈ ಮಿಷನ್ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಯ ಮೇಲೆ ಕೇಂದ್ರೀಕರಿಸುತ್ತದೆ, ಮಹಿಳಾ ಪೊಲೀಸರಿಗೆ ಇದರ ಕೆಲಸಕ್ಕೆ ನಿಯೋಜಿಸಲಾಗಿದೆ.

ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವ್ನಿಶ್ ಅವಸ್ತಿ ಅವರು ಆಜ್ ತಕ್ ಜೊತೆಗಿನ ಸಂವಾದದಲ್ಲಿ ಯೋಗಿ ಸರ್ಕಾರ 100 ದಿನಗಳ ಕಾರ್ಯಕ್ರಮವನ್ನು ಮಾಡಿದೆ. ಇದರಲ್ಲಿ ಉತ್ತರ ಪ್ರದೇಶದ ಗೃಹ ಇಲಾಖೆ ಕಾನೂನು ಸುವ್ಯವಸ್ಥೆ ಬಲಪಡಿಸಲು ಮೊದಲ ಸಿದ್ಧತೆ ನಡೆಸಿದೆ. ಇದರಲ್ಲಿ ನವರಾತ್ರಿಯ ಮೊದಲ ದಿನದಿಂದಲೇ ಪೊಲೀಸ್ ಆಡಳಿತದ ಆದ್ಯತೆಯಲ್ಲಿ ಈ ಕೆಲಸಗಳು ನಡೆಯಲಿವೆ. ನವರಾತ್ರಿಯಲ್ಲಿ ಎಲ್ಲಾ ಪೊಲೀಸರು ಈ ಬಗ್ಗೆ ಕಾರ್ಯ ನಿರ್ಮಹಿಸಬೇಕು ಎಂದು ಸೂಚಿಸಲಾಗಿದೆ. ಈ ಫುಟ್ ಪೆಟ್ರೋಲಿಂಗ್ ನಲ್ಲಿ ಸ್ವತಃ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿರುತ್ತಾರೆ. ಒಂದು ವೇಳೆ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಪ್ರತಿ ಪೊಲೀಸ್ ಠಾಣೆ ಮತ್ತು ಜಿಲ್ಲಾ ಮಟ್ಟದಲ್ಲಿ ಟಾಪ್-10 ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಇದೀಗ 'ಆ್ಯಂಟಿ ರೋಮಿಯೋ ದಳ'ದ ಮೂಲಕ ತಾವು ನೀಡಿದ ಭರವಸೆಯನ್ನು ಬಿಜೆಪಿ ಸರಕಾರ ಉಳಿಸಿಕೊಂಡಿದೆ.
ಉತ್ತರ ಪ್ರದೇಶದ ಜಿಲ್ಲೆಗಳ ಪೈಕಿ ಮೀರತ್ನಲ್ಲಿ ಬೀದಿ ಕಾಮಣ್ಣರ ನಿಗ್ರಹ ಪಡೆ ಮೊದಲು ಕಾರ್ಯರೂಪಕ್ಕೆ ಬಂದಿದೆ. ಶಾಲಾ- ಕಾಲೇಜುಗಳ ಆವರಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ರಕ್ಷಣೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೀರತ್ನ ಪ್ರತಿಯೊಂದು ಪೊಲೀಸ್ ಠಾಣೆಯಿಂದ ಮೂರರಿಂದ ನಾಲ್ಕು ಜನ ಪೊಲೀಸರು ಆ್ಯಂಟಿ ರೋಮಿಯೋ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆದರೆ ಈ ಆ್ಯಂಟಿ ರೋಮಿಯೋ ಪಡೆ ಅಪರಾಧವನ್ನು ತಡೆಗಟ್ಟುವ ಬದಲು ನೈತಿಕ ಪೊಲೀಸ್ಗಿರಿಗೆ ಮುಂದಾಗಿರುವುದು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದೆ ಎಂದು ಹೇಳಲಾಗುತ್ತಿದೆ. ಬೈಕ್ ಮೇಲೆ ಸುಮ್ಮನೆ ಕುಳಿತುಕೊಂಡ ಅಥವಾ ಪಾನ್ ಶಾಪ್ಗಳ ಮುಂದೆ ನಿಂತ ಯುವಕರನ್ನು ಪೊಲೀಸರು ಸುಖಾ ಸುಮ್ಮನೆ ಪ್ರಶ್ನಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
Recommended Video
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications