ಎಐಎಂಐಎಂ ಮುಖ್ಯಸ್ಥನ ಮೇಲೆ ದಾಳಿ ಪ್ರಕರಣ: ಝಡ್ ಭದ್ರತೆ ತಿರಸ್ಕರಿಸಿದ ಓವೈಸಿ
ಲಕ್ನೋ ಫೆಬ್ರವರಿ 04: ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಗೃಹ ಸಚಿವಾಲಯ ನೀಡಿದ ಝಡ್ ಕೆಟಗರಿ ಭದ್ರತೆಯನ್ನು ತಿರಸ್ಕರಿಸಿದ್ದಾರೆ.
ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 24ರಲ್ಲಿನ ಹಪೂರ್- ಗಾಜಿಯಾಬಾದ್ ಮಾರ್ಗದ ಛಿಜರ್ಸಿ ಟೋಲ್ ಪ್ಲಾಜಾ ಬಳಿ ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿರುವುದಾಗಿ ಓವೈಸಿ ಅವರು ಹೇಳಿಕೊಂಡಿದ್ದಾರೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಇಬ್ಬರನ್ನು ಬಂಧಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಓವೈಸಿ, ಪೊಲೀಸರು ಶೂಟರ್ಗಳಲ್ಲಿ ಇಬ್ಬನನ್ನು ಬಂಧಿಸಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಓವೈಸಿ ಒತ್ತಾಯಿಸಿದರು.
ಘಟನೆ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ Z ಕೆಟಗರಿ ಭದ್ರತೆಯನ್ನು ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಈ ಭದ್ರತೆಯನ್ನು ಓವೈಸಿ ನಿರಾಕರಿಸಿದ್ದಾರೆ.

ಮೀರತ್ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಸಚಿನ್ ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣವಿದೆ. ತಾನು ಕಾನೂನು ಪದವಿ ಪಡೆದಿದ್ದೇನೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದು, ಪೊಲೀಸರು ಅದನ್ನು ಪರಿಶೀಲಿಸುತ್ತಿದ್ದಾರೆ. ತನ್ನ ಫೇಸ್ಬುಕ್ ಪ್ರೊಫೈಲ್ನಲ್ಲಿ, ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆತನ ಹೇಳಿಕೆಯನ್ನು ತನಿಖೆ ಮಾಡುತ್ತಿದ್ದಾರೆ.
ಮತ್ತೋರ್ವ ಆರೋಪಿ ಸಹಾರನ್ಪುರದ ರೈತ ಶುಭಂ ಎಂದು ಗುರುತಿಸಲಾಗಿದೆ. ಈತ ಅಪರಾಧ ದಾಖಲೆ ಹೊಂದಿಲ್ಲ. ಪೋಲೀಸರ ಪ್ರಕಾರ, ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ. ಹೀಗಾಗಿ ಅವರ ಮೇಲೆ ದಾಳಿ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇವರಿಂದ ಇತ್ತೀಚೆಗೆ ಖರೀದಿಸಿದ್ದ ಕಂಟ್ರಿಮೇಡ್ ಪಿಸ್ತೂಲ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೀಗ ಬಂದೂಕು ಖರೀದಿಸಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಟೋಲ್ ಪ್ಲಾಜಾದಿಂದ ಓವೈಸಿ ಅವರು ಟ್ವೀಟ್ ಮಾಡಿದ ಫೋಟೋಗಳಲ್ಲಿ ಅವರ ಬಿಳಿ SUV ಕಾರಿನ ಮೇಲೆ ಬುಲೆಟ್ ದಾಳಿಯಿಂದಾದ ಹಾನಿಯನ್ನು ಕಾಣಬಹುದು. ಮೂರನೇ ಬುಲೆಟ್ ಟೈರ್ಗೆ ತಗುಲಿದೆ ಎನ್ನಲಾಗಿದೆ. ಹೀಗಾಗಿ ಸಂಸದರು ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದರು.
Recommended Video
ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕ ಮೀರತ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 11 ಜಿಲ್ಲೆಗಳಲ್ಲಿ ಒಟ್ಟು 58 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 10 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications