ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ವಾಜಪೇಯಿ ಚಿತಾಭಸ್ಮ ವಿಸರ್ಜನೆ

|
Google Oneindia Kannada News

ಲಕ್ನೋ, ಆಗಸ್ಟ್ 18: ಉತ್ತರ ಪ್ರದೇಶದ ಎಲ್ಲಾ ನದಿಗಳಲ್ಲೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ವಿಸರ್ಜಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ಮೇರು ವ್ಯಕ್ತಿತ್ವದ ಭಾರತರತ್ನ ವಾಜಪೇಯಿ ಅವರಿಗೆ ಇದು ನಾವು ನೀಡುವ ಗೌರವ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ. ಈ ರಾಜ್ಯದಲ್ಲಿ ಹರಿಯುವ ನದಿಗಳಾದ ಗಂಗಾ, ಯಮುನಾ, ತಪತಿ, ಗೋಮತಿ, ಸಿಂಧು, ವರುಣಾ ಸೇರಿದಂತೆ ಇನ್ನಿತರ ಎಲ್ಲಾ ನದಿಗಳಲ್ಲೂ ವಾಜಪೇಯಿ ಅವರ ಚಿತಾಭಸ್ಮವನ್ನು ವಿಸರ್ಜಿಸಲಾಗುತ್ತದೆ.

ವಾಜಪೇಯಿ ಅಂತ್ಯಕ್ರಿಯೆ ಹೊಸ 'ಟ್ರೆಂಡ್ ಸೆಟರ್' ಗೆ ನಾಂದಿ ಹಾಡಲಿವಾಜಪೇಯಿ ಅಂತ್ಯಕ್ರಿಯೆ ಹೊಸ 'ಟ್ರೆಂಡ್ ಸೆಟರ್' ಗೆ ನಾಂದಿ ಹಾಡಲಿ

ಇದಕ್ಕೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಈ ವಿಷಯವನ್ನು ತಿಳಿಸಿದ್ದರು.

Ashes of ex PM Atal Bihari Vajpayee to be immersed across every river in UP

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆಗಸ್ಟ್ 16 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ, ಅನಾರೋಗ್ಯದ ಕಾರಣ ಇಹಲೋಕ ತ್ಯಜಿಸಿದರು. 93 ವರ್ಷ ವಯಸ್ಸಿನ ವಾಜಪೇಯಿ ಅವರ ನಿಧನಕ್ಕೆ ಇಡೀ ವಿಶ್ವವೇ ಸಂತಾಪ ಸೂಚಿಸಿತ್ತು.

ವೈರಲ್ ವಿಡಿಯೋ: ವಾಜಪೇಯಿ ಶ್ರದ್ಧಾಂಜಲಿಗೆ ಒಲ್ಲೆ ಎಂದಿದ್ದಕ್ಕೆ ಬಿತ್ತು ಗೂಸಾ!ವೈರಲ್ ವಿಡಿಯೋ: ವಾಜಪೇಯಿ ಶ್ರದ್ಧಾಂಜಲಿಗೆ ಒಲ್ಲೆ ಎಂದಿದ್ದಕ್ಕೆ ಬಿತ್ತು ಗೂಸಾ!

ಆಗಸ್ಟ್ 17 ರಂದು ದೆಹಲಿಯ ರಾಜ್ ಘಾಟ್ ನ ಸ್ಮೃತಿಸ್ಥಳದಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೂ ವಾಜಪೇಯಿ ಅವರ ಶವಯಾತ್ರೆಗೆ ಕಾಲ್ನಡಿಗೆಯಲ್ಲೇ ಹೆಜ್ಜೆ ಹಾಕಿ ಅತ್ಯುನ್ನತ ನಾಯಕನಿಗೆ ಗೌರವ ಅರ್ಪಿಸಿದ್ದರು. ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ವಾಜಪೇಯಿ ಅವರ ಚಿತೆಗೆ ಅಗ್ನಿಸ್ಪರ್ಶಸ ಮಾಡಿದ್ದರು.

English summary
The ashes of former Prime Minister Atal Bihari Vajpayee will be immersed across every river in Uttar Pradesh, informed the state government on Friday. The rivers include Ganga, Yamuna, Tapti, Gomti, Sindhu, Varuna and many others.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X