ಹಿಂದು ಧರ್ಮಕ್ಕೆ ಮತಾಂತರವಾದ ಈ ವ್ಯಕ್ತಿ ಕುಂಭಮೇಳದ ಕೇಂದ್ರಬಿಂದು!
ಪ್ರಯಾಗರಾಜ್, ಜನವರಿ 18: ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬ ಹಿಂದು ಸಂಸ್ಕೃತಿಗೆ ಮನಸೋತು ಹಿಂದು ಧರ್ಮಕ್ಕೆ ಮತಾಂತರಗೊಂಡು ಕುಂಭ ಮೇಳದಲ್ಲಿ ಪಾಲ್ಗೊಂಡು ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದರು!
ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಜನವರಿ 15 ರಿಂದ ಆರಂಭವಾಗಿರುವ ಕುಂಭ ಮೇಳ ಮಾರ್ಚ್ 5 ರವರೆಗೆ ನಡೆಯಲಿದೆ. ಲಕ್ಷಾಂತರ ಜನರನ್ನು ಕೈಬೀಸಿ ಕರೆಯುತ್ತಿರುವ ಕುಂಭಮೇಳದಲ್ಲಿ ಸಹಸ್ರಾರು ಸಾಧು ಸಂತರು ಭಾಗವಹಿಸಿದ್ದಾರೆ.
ಮೈಗೆಲ್ಲ ವಿಭೂತಿ ಮೆತ್ತಿಕೊಂಡು, ಕಾಷಾಯ ವಸ್ತ್ರ ಧರಿಸಿ, ಜಟೆಯನ್ನು ಮೇಲೆ ಕಟ್ಟಿ ಗಂಗಾ-ಯಮುನಾ-ಸರಸ್ವತಿಯರು ಸೇರುವ ಸಂಗಮ ಸ್ಥಳದಲ್ಲಿ ಸ್ನಾನ ಮಾಡುತ್ತಿದ್ದ ದೃಶ್ಯಕ್ಕೆ ಮನಸೋತ ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬರು ಹಿಂದುತ್ವಕ್ಕೆ ಮತಾಂತರಗೊಂಡು ಶರಭಂಗ್ ಗಿರಿ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
|
ಹಿಂದುತ್ವಕ್ಕೆ ಮನಸೋತು ಮತಾಂತರ
"ನಾನು ಮೊದಲು ನಾಸ್ತಿಕನಾಗಿದ್ದೆ. ಆದರೆ ಭಾರತಕ್ಕೆ ಪ್ರವಾಸಕ್ಕೆಂದು ಬಂದು ಗುಜರಾತ್ ನ ಗಿರನರ್ ಬೆಟ್ಟದ ಗುರು ದತ್ತಾತ್ರೇಯ ಅವರನ್ನು ಭೇಟಿ ಮಾಡಿದ ಮೇಲೆ ನನ್ನ ಮನಸ್ಸು ಪರಿವರ್ತನೆಯಾಯಿತು. ನಂತರ ನಾನು ಹಿಂದು ಧರ್ಮದ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುತ್ತ, ನನ್ನ ಬದುಕಿನ ದಾರಿಯನ್ನು ಬದಲಿಸಿಕೊಳ್ಳುತ್ತ ಬಂದೆ. ನಾನೀಗ ಆಸ್ತಿಕನಾಗಿದ್ದೇನೆ" ಎನ್ನುತ್ತಾರೆ ಶರಭಂಗ್ ಗಿರಿ.
| Array |
ಕುಂಭಮೇಳದತ್ತ ಪ್ರಧಾನಿ ನರೇಂದ್ರ ಮೋದಿ
ಗುಜರಾತಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇಂದು ಕುಂಭಮೇಳಕ್ಕೆ ತೆರಳಲಿದ್ದು, ತಾವು ಪ್ರಯಾಗರಾಜಕ್ಕೆ ಭೇಟಿ ನೀಡುತ್ತಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ. 'ಪ್ರಯಾಗರಾಜದ ಸಹಸ್ರಾರು ಜನರ ಆಧ್ಯಾತ್ಮಿಕ ಹುಡುಕಾಟವಾದ ಕುಂಭಮೇಳದಲ್ಲಿ ನಾನೂ ಭಾಗಿಯಾಗುತ್ತಿದ್ದೇನೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
|
ಇಸ್ರೋ ಕಣ್ಣಲ್ಲಿ ಕುಂಭಮೇಳ
ಕುಂಭಮೇಳ ಉಪಗ್ರಹದ ಕಣ್ಣಲ್ಲಿ ಹೇಗೆ ಕಾಣುತ್ತದೆ ಎಂಬುದನ್ನು ಇಸ್ರೋ ತನ್ನ ಅಧಿಕೃತ ಟ್ವೀಟ್ ಖಾತೆಯಲ್ಲಿ ಟ್ವೀಟಿಸಿದೆ. ಈ ಎರಡು ಚಿತ್ರಗಳು ಕುಂಭಮೇಳದ ಅಗಾಧತೆಗೆ ಸಾಕ್ಷಿಯಾಗಿವೆ.
|
ಕುಂಭಮೇಳದಲ್ಲಿ ಭಾಗವಹಿಸಿದ ಪ್ರಪ್ರಥಮ ರಾಷ್ಟ್ರಪತಿ!
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಕುಂಭಮೇಳದಲ್ಲಿ ಭಾಗವಹಿಸಿದ್ದರು. ಈ ಮೂಲಕ 66 ವರ್ಷಗಳ ನಂತರ ಮೊದಲ ಬಾರಿಗೆ ಕುಂಭಮೇಳದಲ್ಲಿ ಭಾಗವಹಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. 1953 ರಲ್ಲಿ ಆಗಿನ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಅವರು ಭಾಗವಹಿಸಿದ ನಂತರ ಕುಂಭಮೇಳದಲ್ಲಿ ಯಾವುದೇ ರಾಷ್ಟ್ರಪತಿಯೂ ಭಾಗವಹಿಸಿರಲಿಲ್ಲ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications