ರಾಮಮಂದಿರ ಟ್ರಸ್ಟ್ ಇನ್ನಷ್ಟು ಭೂ ಹಗರಣ ಬಯಲಿಗೆ
ಲಕ್ನೋ, ಜೂನ್ 20: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತುಕೊಂಡಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿರುದ್ಧ ಗಂಭೀರ ಭೂಹಗರಣದ ಆರೋಪ ಕೇಳಿ ಬಂದಿದೆ.
ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಈ ಟ್ರಸ್ಟ್ನ ಮೂಲಕ ಮಾಡಲಾಗುತ್ತಿದೆ. ಇದರಲ್ಲಿ 15 ಮಂದಿ ಸದಸ್ಯರಿದ್ದು ಇದರಲ್ಲಿ 12 ಮಂದಿ ಸದಸ್ಯರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
''ಆಸ್ತಿ ಖರೀದಿಯಲ್ಲಿ ಸುಮಾರು 16. 5ಕೋಟಿ ರು ಅವ್ಯವಹಾರ ನಡೆದಿದೆ,'' ಎಂದು ಉತ್ತರ ಪ್ರದೇಶದ ಮಾಜಿ ಸಚಿವ ಪವನ್ ಪಾಂಡೆ ಆರೋಪಿಸಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಕಾರ್ಯದರ್ಶಿ ವಿಹೆಚ್ಪಿ ನಾಯಕ ಚಂಪತ್ ರಾಯ್ ಆರೋಪ ಅಲ್ಲಗೆಳೆದಿದ್ದರು.

ಆದರೆ ಈಗ ಇನ್ನೂ ಎರಡು ಭೂ ಖರೀದಿ ಅವ್ಯವಹಾರ ನಡೆದಿದೆ ಎಂದು ಇಂಡಿಯಾ ಟುಡೇ ದಾಖಲೆ ಸಮೇತ ವರದಿ ಮಾಡಿದೆ. 47 ಲಕ್ಷ ರು ಮೌಲ್ಯದ ಸ್ವತ್ತನ್ನು ರಾಮಜನ್ಮಭೂಮಿ ಟ್ರಸ್ಟ್ ಗೆ 3.5 ಕೋಟಿ ರುಗೆ ಮಾರಾಟ ಮಾಡಲಾಗಿದೆ. ಎರಡು ಪ್ಲಾಟ್ ಗಳಿದ್ದು, 20 ಹಾಗೂ 27 ಲಕ್ಷ ರು ಮೌಲ್ಯದ್ದಾಗಿದೆ. ಇದನ್ನು ಕ್ರಮವಾಗಿ 2.5 ಕೋಟಿ ರು ಹಾಗೂ 1 ಕೋಟಿ ರು ಗೆ ಮಾರಾಟ ಮಾಡಲಾಗಿದೆ.
ವ್ಯವಹಾರ ನಡೆದಿದ್ದು ಹೇಗೆ?:
ಇಂಡಿಯಾ ಟುಡೇಗೆ ಲಭ್ಯವಾದ ಕಾಗದ ಪತ್ರದ ಪ್ರಕಾರ ಫೆಬ್ರವರಿ 20, 2021ರಂದು ಅಯೋಧ್ಯ ಮೇಯರ್ ಋಷಿಕೇಶ್ ಉಪಾಧ್ಯಾಯ್ ಅವರ ಸೋದರಳಿಯ ದೀಪ್ ನಾರಾಯಣನ್ ಎಂಬುವರು 890 ಚದರಡಿ ಭೂಮಿ ವ್ಯವಹಾರ ನಡೆಸಿದ್ದಾರೆ. ಆಚಾರ್ಯ ಮಹಂತ ದೇವೇಂದ್ರ ಪ್ರಸಾದ್ ಎಂಬುವರು ಖಾತಾ ನಂಬರ್ 135ರಲ್ಲಿರುವ ಸಾದರ್ ತೆಹ್ಸಿಲ್ ಹವೇರಿ ಅವಧ್ ಕೋಟ್ ರಾಮಚಂದ್ರದಲ್ಲಿರುವ ಸದರಿ ಭೂಮಿಯನ್ನು 20 ಲಕ್ಷಕ್ಕೆ ಮಾರಿದ್ದಾರೆ. ಆದರೆ, ಈ ಜಾಗದ ಮಾರುಕಟ್ಟೆ ಬೆಲೆ 35. 6 ಲಕ್ಷ ರು ಇದೆ.
ಮೇ 11ರಂದು ಈ ಭೂಮಿಯನ್ನು 2.5 ಕೋಟಿ ರು ಗೆ ಮಾರಿದ್ದಾರೆ. 4,000 ರು ಪ್ರತಿ ಚದರ ಮೀಟರ್ ಮಾರುಕಟ್ಟೆ ದರವಿದ್ದು, ಟ್ರಸ್ಟ್ ಗೆ 28, 090ರು ಪ್ರತಿ ಚದರ ಮೀಟರ್ ನಂತೆ ಮಾರಾಟ ಮಾಡಲಾಗಿದೆ.

ಇನ್ನೊಂದು ಡೀಲ್ ನಂತೆ ದೀಪ್ ನಾರಾಯಣ್ 676.86 ಚದರ ಮೀಟರ್ ಭೂಮಿಯನ್ನು ರಾಮ ಜನ್ಮಭೂಮಿ ಟ್ರಸ್ಟ್ ಗೆ ಫೆಬ್ರವರಿ 20ರಂದು ಮಾರಾಟ ಮಾಡಲಾಗಿದ್ದು, ಖಾತೆ ನಂ. 36ಎಂರ ಜಾಗವನ್ನು 1 ಕೋಟಿ ರು ಗೆ ನೀಡಲಾಗಿದೆ. ಇದರ ಮಾರುಕಟ್ಟೆ ಬೆಲೆ 27.08 ಲಕ್ಷ ರು ಇದ್ದು, 4,000ರು ಚದರ ಮೀಟರ್ ನಂತೆ ಬೆಲೆ ಇದೆ. 14, 774 ರು ಪ್ರತಿ ಚದರ ಮೀಟರ್ ನಂತೆ ಹಣ ತೆತ್ತು ಟ್ರಸ್ಟ್ ಇದನ್ನು ಖರೀದಿಸಿದೆ. ಟ್ರಸ್ಟ್ ವತಿಯಿಂದ ಅನಿಲ್ ಮಿಶ್ರಾ ಅವರು ಸಾಕ್ಷಿಯಾಗಿ ಸಹಿ ಹಾಕಿದ್ದಾರೆ.
ಸಮಾಜವಾದಿ ಪಕ್ಷ ನಾಯಕ ಪವನ್ ಪಾಂಡೆ, ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರು ಈ ಭೂ ಅವ್ಯವಹಾರವನ್ನು ಸಿಬಿಐಗೆ ವಹಿಸಿ ಸೂಕ್ತ ತನಿಖೆ ನಡೆಸಬೇಕು, ತಕ್ಷಣವೇ ಜಾರಿ ನಿರ್ದೇಶನಾಲಯವು ಬ್ಯಾಂಕ್ ಖಾತೆ ಜಪ್ತಿ ಮಾಡಬೇಕು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications