ಅಯೋಧ್ಯೆಯ ರೈಲ್ವೆ ನಿಲ್ದಾಣಕ್ಕೂ ದೇವಸ್ಥಾನದ ರೂಪ!
ಲಕ್ನೋ, ಆಗಸ್ಟ್.03: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇನ್ನೆರೆಡು ದಿನಗಳಲ್ಲೇ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಆಗಸ್ಟ್.05ರಂದು ಮಂದಿರ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಪೂಜೆ ಸಲ್ಲಿಸಿದ್ದು, ಇದರ ಮಧ್ಯ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
Recommended Video
ಅಯೋಧ್ಯೆಯಲ್ಲಿರುವ ರೈಲ್ವೆ ನಿಲ್ದಾಣವನ್ನು ದೇವಸ್ಥಾನದ ರೂಪದಲ್ಲಿ ಪುನರ್ ಅಭಿವೃದ್ಧಿಗೊಳಿಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಅದಕ್ಕಾಗಿ ರೈಲ್ವೆ ಇಲಾಖೆಯು 80 ರಿಂದ 104 ಕೋಟಿ ರೂಪಾಯಿ ಬಜೆಟ್ ನ್ನು ಹೆಚ್ಚಿಸಿದೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರ ದರ್ಶನಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಈ ಹಿನ್ನೆಲೆ ಅಯೋಧ್ಯೆಯ ರೈಲ್ವೆ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಪುನರ್ ಅಭಿವೃದ್ಧಿಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಟ್ವೀಟ್ ಮಾಡಿದ್ದರು.

ರೈಲ್ವೆ ನಿಲ್ದಾಣಕ್ಕೆ ದೇವಸ್ಥಾನದ ರೂಪ:
ಅಯೋಧ್ಯೆಯ ರೈಲ್ವೆ ನಿಲ್ದಾಣವನ್ನು ಕಳೆದ ಕೆಲವು ವರ್ಷಗಳ ಹಿಂದೆಯಷ್ಟೇ ಪುನರ್ ಅಭಿವೃದ್ಧಿಗೊಳಿಸಲಾಗಿತ್ತು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿನ ವಾಸ್ತುಶಿಲ್ಪ ಮತ್ತು ಶೈಲಿಯು ದೇವಸ್ಥಾನದ ರೂಪವನ್ನೇ ಹೋಲುವಂತೆ ಗೋಚರಿಸುತ್ತಿತ್ತು. ಇದರ ಬೆನ್ನಲ್ಲೇ ಹೊಸ ವಾಸ್ತುಶಿಲ್ಪಗಳ ಜೊತೆಗೆ ರೈಲ್ವೆ ನಿಲ್ದಾಣವನ್ನು ಇದೀಗ ಮತ್ತೊಮ್ಮೆ ಪುನರ್ ಅಭಿವೃದ್ಧಿಗೊಳಿಸುವುದಕ್ಕೆ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.
ಎರಡು ಹಂತಗಳಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ:
ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ ಪುನರ್ ಅಭಿವೃದ್ಧಿಯನ್ನು ಎರಡು ಹಂತಗಳನ್ನು ಮಾಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಪ್ರದೇಶದ ಮೇಲೆ ನಿಗಾ ವಹಿಸಲಾಗುತ್ತದೆ. ಎರಡನೇ ಹಂತದಲ್ಲಿ ಶೌಚಾಲಯ, ವಸತಿ ನಿಯಮ, ಟಿಕೆಟ್ ನೀಡುವ ಸ್ಥಳ ಸೇರಿದಂತೆ ಪ್ರಯಾಣಿಕರು ಹೆಚ್ಚಾಗಿ ಬಳಸುವ ಮೂಲಸೌಕರ್ಯಗಳ ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications