ಅಯೋಧ್ಯೆ ತೀರ್ಪು: ಮರು ಪರಿಶೀಲನೆ ಅರ್ಜಿ ಸಲ್ಲಿಸಲು ಮುಸ್ಲಿಂ ಮಂಡಳಿ ತೀರ್ಮಾನ
ಲಕ್ನೋ, ನವೆಂಬರ್ 17: ಅಯೋಧ್ಯೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನವೆಂಬರ್ 9 ರಂದು ನೀಡಿದ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತೀರ್ಮಾನಿಸಿದೆ. ಈ ಬಗ್ಗೆ ಚರ್ಚಿಸಲು ಲಕ್ನೋದಲ್ಲಿ ಇಂದು ಸಭೆ ಕರೆಯಲಾಗಿತ್ತು.
ಬಾಬರಿ ಮಸೀದಿ ಕ್ರಿಯಾ ಸಮಿತಿಯ ಕನ್ವೀನರ್, ಸುನ್ನಿ ಸೆಂಟ್ರಲ್ ವಕ್ಫ ಮಂಡಳಿಯ ವಕೀಲ ಜಫರ್ಯಾಬ್ ಜಿಲಾನಿ, ಮುಸ್ಲಿಂ ಸಮುದಾಯದವರು ಮತ್ತು ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಪಟ್ಟವರು ಸಭೆಯಲ್ಲಿ ಭಾಗವಹಿಸಿದ್ದರು.
ಅಯೋಧ್ಯೆ ತೀರ್ಪು: ಮೇಲ್ಮನವಿ ಸಲ್ಲಿಸದಿರಲು 2 ಕಾರಣ ನೀಡಿದ ಮುಸ್ಲಿಂ ಮುಖಂಡ
ಈ ಬಗ್ಗೆ ನವದೆಹಲಿಯಲ್ಲಿ ಸುದ್ಧಿಗೋಷ್ಠಿ ಕರೆದು ಮಾತನಾಡಿರುವ ವಕಿಲ ಜಿಲಾನಿ "ಅಯೋಧ್ಯೆಯ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪು ನಮಗೆ ತೃಪ್ತಿ ತಂದಿಲ್ಲ. ಆದರೂ ಕೋರ್ಟ್ ನ ತೀರ್ಪನ್ನು ಗೌರವಿಸುತ್ತೇವೆ.
ಅಯೋಧ್ಯೆ ಪ್ರಕರಣದ ತೀರ್ಪು ಬಂದಾಗ ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಲಾಗಿತ್ತು. ಆದರೆ ಈ ಬಗ್ಗೆ ಮುಸ್ಲಿಂ ಮಂಡಳಿ ಹಾಗೂ ಸಮುದಾಯದ ಹಲವರಿಗೆ ತೀರ್ಪು ಸಂತೃಪ್ತಿ ಇಲ್ಲದ ಕಾರಣ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ" ಎಂದು ಹೇಳಿದರು.
ಅಯೋಧ್ಯಾ ತೀರ್ಪು: ಗಮನಿಸಬೇಕಾದ ಕುತೂಹಲಕಾರಿ 10 ಸಂಗತಿಗಳು
ಅಯೋಧ್ಯೆ ತೀರ್ಪನ್ನು ಮೊದಲು ಸ್ವಾಗತಿಸಿದ್ದ ಮೂಲ ಅರ್ಜಿದಾರ, ಅಯೋಧ್ಯೆ ನಿವಾಸಿ ಇಕ್ಬಾಲ್ ಅನ್ಸಾರಿ ನಂತರ ತಕರಾರು ಎತ್ತಿದ್ದಾರೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಮಸೀದಿ ನಿರ್ಮಿಸಲು 5 ಎಕರೆ ಜಾಗ ನೀಡಬೇಕೆಂದು ಆದೇಶಿಸಿತ್ತು, ಆದರೆ ಮುಸ್ಲಿಂ ಮಂಡಳಿ ಅದನ್ನು ಪಡೆಯದಿರಲು ನಿರ್ಧರಿಸಿದೆ.