ನವದೆಹಲಿ, ಸೆಪ್ಟೆಂಬರ್ 30: ದೇಶದ ಕಾನೂನು ಇತಿಹಾಸದಲ್ಲಿ ಬಹು ನಿರೀಕ್ಷಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ವಿಶೇಷ ನ್ಯಾಯಾಲಯ ಇಂದು ಪ್ರಕಟಿಸಲಿದೆ. ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಡಾ.ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, 28 ವರ್ಷಗಳ ಕೇಸ್ಗೆ ಇಂದು ಮುಕ್ತಾಯ ಸಿಗಲಿದೆ.
1992ರ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳು ತೀರ್ಪಿನ ದಿನ ಖುದ್ದು ಹಾಜರು ಇರುವಂತೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ಯಾದವ್ ಸೆಪ್ಟೆಂಬರ್ 16ರಂದೇ ನಿರ್ದೇಶನ ನೀಡಿದ್ದರು. ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್ ಮತ್ತು ಸಾಧ್ವಿ ರಿತಾಂಬರಾ ಕೂಡ ಆರೋಪಿಗಳ ಪಟ್ಟಿಯಲ್ಲಿದ್ದಾರೆ.
ರಾಮ ಮಂದಿರ ನಿರ್ಮಾಣ ಟ್ರಸ್ಟ್ನ ಉಸ್ತುವಾರಿ ನೋಡಿಕೊಳ್ಳುತ್ತಿರುವ ಚಂಪತ್ ರಾಯ್ ಕೂಡ ಆರೋಪ ಎದುರಿಸುತ್ತಿದ್ದಾರೆ. ಆಡ್ವಾಣಿ, ಜೋಶಿ, ಉಮಾ ಭಾರತಿ ಕೋರ್ಟ್ಗೆ ಗೈರಾಗುವ ಸಾಧ್ಯತೆ ಇದೆ.
Sep 30, 2020, 3:02 pm IST
ಬಾಬ್ರಿ ಮಸೀದಿ ತೀರ್ಪನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಖಂಡಿಸಿದೆ. ಪ್ರಕರಣದ ತೀರ್ಪಿನ ಕುರಿತು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.
Sep 30, 2020, 2:55 pm IST
ಬಾಬ್ರಿ ಮಸೀದಿ ಧ್ವಂಸದ ಹಿಂದೆ ಯಾವುದೇ ಪಿತೂರಿ ಇರಲಿಲ್ಲ ಎಂಬುದು ನಿರೀಕ್ಷಿತ ತೀರ್ಪು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಅಟಲ್ ಜೀ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ಅವರಿಗೆ ಶುಭಾಷಯ ಕೋರಿದ್ದಾರೆ.
Sep 30, 2020, 2:52 pm IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷಎಯಾಗಬೇಕಾಗಿದ್ದು ನ್ಯಾಯ. ಆದರೆ ಅವರಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಮಾನವ ಸಂಪನ್ಮೂಲ ಸಚಿವಾಲಯವು ಬಹುಮಾನವನ್ನು ನೀಡಿದೆ. ಇದಕ್ಕಾಗಿಯೇ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಅಸಾದುದ್ದೀನ್ ಓವೈಸಿ ದೂಷಿಸಿದ್ದಾರೆ.
Sep 30, 2020, 2:06 pm IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಸಾಧುಗಳನ್ನು, ವಿಹೆಚ್ ಪಿ ನಾಯಕರು ಮತ್ತು ಬಿಜೆಪಿ ವಿರುದ್ಧ ಉದ್ದೇಶಪೂರ್ವಕವಾಗಿ ದೂರುಗಳನ್ನು ದಾಖಲಿಸಿರುವುದು ತೀರ್ಪಿನಿಂದ ಸಾಬೀತಾಗಿದೆ. ರಾಜಕಾರಣಕ್ಕಾಗಿ ಕಾಂಗ್ರೆಸ್ ನಡೆಸಿದ ಪಿತೂರಿಗೆ ಕ್ಷಮಾಪಣೆ ಕೇಳಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
Sep 30, 2020, 1:25 pm IST
ಇಂದು ಕೋರ್ಟ್ ನೀಡಿದ ಐತಿಹಾಸಿಕ ತೀರ್ಪು ಅತ್ಯಂತ ಮಹತ್ವಪೂರ್ಣವಾಗಿದ್ದು, ನಮ್ಮಲ್ಲರಿಗೂ ಸಂತಸವನ್ನು ಉಂಟು ಮಾಡಿದೆ: ಬಿಜೆಪಿ ಭೀಷ್ಮ ಎಲ್.ಕೆ. ಅಡ್ವಾಣಿ.
Sep 30, 2020, 1:24 pm IST
ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಐತಿಹಾಸಿಕ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಎಂದ ಸಿಎಂ ಯಡಿಯೂರಪ್ಪ.
Sep 30, 2020, 1:23 pm IST
ಬಹಳ ಜನರು ತೀರ್ಪಿನ ಬಗ್ಗೆ ಕಾಯುತ್ತಿದ್ದರು. ಎಲ್ ಕೆ ಅಡ್ವಾಣಿಯವರ ಐತಿಹಾಸಿಕ ಭಾಷಣ ಮರೆಯುವುದಕ್ಕೆ ಸಾಧ್ಯವಿಲ್ಲ. ಅವರ ಹೋರಾಟದಿಂದ ಐತಿಹಾಸಿಕ ತೀರ್ಪು ಬಂದಿದೆ: ಸಿಎಂ ಬಿ ಎಸ್ ಯಡಿಯೂರಪ್ಪ.
Sep 30, 2020, 1:19 pm IST
"ಇದು ನ್ಯಾಯಾಲಯದ ಐತಿಹಾಸಿಕ ತೀರ್ಪು ಆಗಿದ್ದು, ಅಯೋಧ್ಯೆಯಲ್ಲಿ ಡಿಸೆಂಬರ್ 6ರಂದು ಘಟನೆ ಹಿಂದೆ ಯಾವುದೇ ಪಿತೂರಿ ನಡೆದಿರಲಿಲ್ಲ ಎಂದು ಸಾಬೀತಾಗಿದೆ. ನಮ್ಮ ಕಾರ್ಯಕ್ರಮ ಮತ್ತು ರ್ಯಾಲಿಗಳು ಯಾವುದೇ ಪಿತೂರಿಯ ಭಾಗವಾಗಿರಲಿಲ್ಲ ಎಂದು ಕೋರ್ಟ್ ಹೇಳಿದೆ. ಕೋರ್ಟಿನ ತೀರ್ಪಿನಿಂದ ಸಂತೋಷವಾಗಿದ್ದು, ನಾವೀಗ ರಾಮ್ ಮಂದಿರ ನಿರ್ಮಾಣದ ಬಗ್ಗೆ ಉತ್ಸುಕರಾಗಬೇಕು ಎಂದು ಮುರಳಿ ಮನೋಹರ್ ಜೋಶಿ ಹೇಳಿದ್ದಾರೆ.
It's a historic decision by the court. This proves that no conspiracy was hatched for December 6 incident in Ayodhya. Our program and rallies were not part of any conspiracy. We are happy, everyone should now be excited about Ram Mandir's construction: Murli Manohar Joshi, BJP https://t.co/dwpyHkDM6Xpic.twitter.com/2Uf5WrINZp
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋ ವಿಶೇಷ ನ್ಯಾಯಾಲಯ ನೀಡಿದ ತೀರ್ಪನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದ್ದಾರೆ.
लखनऊ की विशेष अदालत द्वारा बाबरी मस्जिद विध्वंस केस में श्री लालकृष्ण आडवाणी, श्री कल्याण सिंह, डा. मुरली मनोहर जोशी, उमाजी समेत ३२ लोगों के किसी भी षड्यंत्र में शामिल न होने के निर्णय का मैं स्वागत करता हूँ। इस निर्णय से यह साबित हुआ है कि देर से ही सही मगर न्याय की जीत हुई है।
ಬಾಬ್ರಿ ಮಸೀದಿ ಪ್ರಕರಣದಲ್ಲಿ 32 ಆರೋಪಿಗಳು ನಿರ್ದೋಷಿ ಎಂಬ ತೀರ್ಪಿನ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ ಲಾಲ್ ಕೃಷ್ಮ ಅಡ್ವಾಣಿ ನಿವಾಸಕ್ಕೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಭೇಟಿ ನೀಡಿದ್ದಾರೆ.
Delhi: Law & Justice Minister Ravi Shankar Prasad arrives at the residence of senior BJP leader Lal Krishna Advani who, along with 31 other accused, was acquitted in #BabriMasjid demolition case by Special CBI Court in Lucknow today. pic.twitter.com/oNHImAWP7i
ಬಾಬ್ರಿ ಮಸೀದಿ ಒಡೆಯಲು ಮುಂದಾದವರನ್ನು ತಡೆಯುವುದಕ್ಕೆ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಯತ್ನಿಸಿದ್ದರು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.
Sep 30, 2020, 12:28 pm IST
ಎಲ್.ಕೆ.ಆಡ್ವಾಣಿ, ಡಾ.ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲಾ 32 ಆರೋಪಿಗಳು ನಿರ್ದೋಷಿ
Sep 30, 2020, 12:28 pm IST
28 ವರ್ಷಗಳ ನಂತರ ಬಿಜೆಪಿಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ನಿರಾಳರಾಗಿದ್ದಾರೆ. ಮಸೀದಿ ಧ್ವಂಸಗೊಳಿಸಲು ಸಂಚು ರೂಪಿಸಿರಲಿಲ್ಲ. ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಕೃತ್ಯವಲ್ಲ ಎಂದು ನ್ಯಾ. ಎಸ್. ಕೆ ಯಾದವ್ ತೀರ್ಪು ನೀಡಿದ್ದಾರೆ.
Sep 30, 2020, 12:28 pm IST
28 ವರ್ಷಗಳ ನಂತರ ಬಿಜೆಪಿಯ ಭೀಷ್ಮ ಅಡ್ವಾಣಿಗೆ ನಿರಾಳ
ಮಸೀದಿ ಧ್ವಂಸಗೊಳಿಸಲು ಸಂಚು ರೂಪಿಸಿರಲಿಲ್ಲ: ನ್ಯಾ. ಎಸ್. ಕೆ ಯಾದವ್. ಬಾಬ್ರಿ ಮಸೀದಿ ಧ್ವಂಸ -ಪೂರ್ವ ನಿಯೋಜಿತ ಕೃತ್ಯವಲ್ಲ ಎಂದ ಕೋರ್ಟ್.
Sep 30, 2020, 12:13 pm IST
ಸಿಬಿಐ ಕೋರ್ಟ್ ನಲ್ಲಿ ತೀರ್ಪು ಓದುತ್ತಿರುವ ನ್ಯಾಯಾಧೀಶ ಎಸ್ ಕೆ ಯಾದವ್. ವಿಡಿಯೋ ಕಾನ್ಫರೆನ್ಸ್ ಪ್ರಮುಖ ಆರೋಪಿಗಳು ಹಾಜರು.
Lal Krishna Advani, Murli Manohar Joshi, Kalyan Singh, Uma Bharti, Satish Pradhan and Mahant Nritya Gopal Das attend proceedings via video conferencing, as court is set to announce verdict in Babri Masjid demolition case. https://t.co/UKKsVTdD6y
ಬೇಲ್ ಬಾಂಡ್ ಸಿದ್ಧಪಡಿಸುತ್ತಿರುವ ಆರೋಪಿಗಳ ಪರ ವಕೀಲರು. ಮೂರ ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದಲ್ಲಿ ತಕ್ಷಣವೇ ಬೇಲ್ ಬಾಂಡ್ ಸಲ್ಲಿಕೆ. ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿ ಶಿಕ್ಷೆಯಾದಲ್ಲಿ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ.
Sep 30, 2020, 11:49 am IST
ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್, ಸತೀಶ್ ಪ್ರಧಾನ್ ಸೇರಿದಂತೆ 32 ಆರೋಪಿಗಳ ಭವಿಷ್ಯ ತೀರ್ಮಾನ.
Sep 30, 2020, 11:48 am IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಓದುತ್ತಿರುವ ನ್ಯಾಯಾಧೀಶ ಎಸ್ ಕೆ ಯಾದವ್.
Sep 30, 2020, 11:47 am IST
26 ಮಂದಿ ಆರೋಪಿಗಳು ಮತ್ತು ಆರೋಪಿ ಪರ ವಕೀಲರಿಗೆ ಮಾತ್ರ ಕೋರ್ಟ್ ಹಾಲ್ ಗೆ ಪ್ರವೇಶಿಸಲು ಅನುಮತಿ.
Sep 30, 2020, 11:46 am IST
ಸಿಬಿಐ ವಿಶೇಷ ಕೋರ್ಟ್ ಹಾಲ್ ನಲ್ಲಿ ಹಾಜರಿರುವ ಆರೋಪಿಗಳ ತಲೆ ಎಣಿಕೆ ನಡೆಸುತ್ತಿರುವ ಸಿಬ್ಬಂದಿ.
Sep 30, 2020, 11:43 am IST
ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ಯಾದವ್ ಅವರಿಗೆ ಪ್ಯಾರಾ ಮಿಲಿಟರಿ ಫೋರ್ಸ್ ನಿಂದ ಬಿಗಿ ಭದ್ರತೆ.
Sep 30, 2020, 11:37 am IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 2000 ಪುಟಗಳ ತೀರ್ಪು ಅಂತಿಮಗೊಳಿಸಿರುವ ನ್ಯಾಯಾಧೀಶ ಎಸ್.ಕೆ. ಯಾದವ್.
Sep 30, 2020, 11:30 am IST
ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಎಲ್ ಕೆ ಅಡ್ವಾಣಿ, ಉಮಾ ಭಾರತಿ ಮತ್ತು ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳ ಹಾಜರಾತಿ ಪರಿಶೀಲಿಸಿದ ನ್ಯಾಯಾಧೀಶರು.
Sep 30, 2020, 11:26 am IST
ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಕಲಾಪ ಆರಂಭ.
Sep 30, 2020, 11:25 am IST
ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಉಮಾಭಾರತಿ ಹಾಜರು.
Sep 30, 2020, 11:24 am IST
ವಿನಯ್ ಕಟಿಯಾರ್, ಸಾಧ್ವಿ ರಿತಂಬರಾ, ಲಲ್ಲೂ ಸಿಂಗ್, ಧರ್ಮದಾಸ್, ಚಂಪತ್ ರಾಯ್, ಪವನ್ ಪಾಂಡೆ, ಸಾಕ್ಷಿ ಮಹಾರಾಜ್, ರಾಮ್ ವಿಲಾಸ್ ವೇದಾಂತಿ ಸೇರಿದಂತೆ 26 ಆರೋಪಿಗಳು ಕೋರ್ಟ್ ಗೆ ಹಾಜರು.
Sep 30, 2020, 11:20 am IST
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳ ಪೈಕಿ 6 ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಉಳಿದಂತೆ 26 ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.
Sep 30, 2020, 11:13 am IST
ಲಕ್ನೋದ ಸಿಬಿಐ ಕೋರ್ಟ್ ಹಾಲ್ ಗೆ ಆಗಮಿಸಿದ ನ್ಯಾಯಾಧೀಶ ಎಸ್.ಕೆ. ಯಾದವ್.
Sep 30, 2020, 11:10 am IST
ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಹಾಗೂ ರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಆರು ಆರೋಪಿಗಳಿಗೆ ವಿನಾಯಿತಿ ನೀಡಿದ ಕೋರ್ಟ್.
Sep 30, 2020, 11:07 am IST
ಆರು ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
READ MORE
8:44 AM, 30 Sep
28 ವರ್ಷದಷ್ಟು ಹಳೆಯ ಪ್ರಕರಣವಾದ ಬಾಬ್ರಿ ಮಸೀದಿ ಧ್ವಂಸದ ವಾದ-ಪ್ರತಿವಾದ 2020 ಸೆಪ್ಟೆಂಬರ್ 1ರಂದು ಮುಕ್ತಾಯಗೊಂಡಿತು.
8:45 AM, 30 Sep
ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಇದುವರೆಗೆ ಹಾಜರುಪಡಿಸಿದೆ. ಇವೆಲ್ಲವೂ 1992ರ ಡಿಸೆಂಬರ್ 6ರಂದು ಕರಸೇವಕರು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು ಎಂಬ ಬಗೆಗಿನ ಸಾಕ್ಷ್ಯಾಧಾರಗಳಾಗಿವೆ.
8:47 AM, 30 Sep
ತೀರ್ಪು ಪ್ರಕಟಣೆಗೆ ಸುಪ್ರೀಂ ಕೋರ್ಟ್ ಈ ಮೊದಲು ಆಗಸ್ಟ್ 31ರ ಗಡುವು ನಿಗದಿ ಪಡಿಸಿತ್ತು. ನಂತರ ವಿಶೇಷ ನ್ಯಾಯಾಲಯದ ಮನವಿ ಪರಿಗಣಿಸಿ ಗಡುವಿನಲ್ಲಿ ಒಂದು ತಿಂಗಳ ವಿಸ್ತರಣೆ ಮಾಡಿತ್ತು. ಅಲ್ಲಿಂದ ಪ್ರತಿನಿತ್ಯ ವಿಚಾರಣೆ ನಡೆಸಿದ್ದ ಕೋರ್ಟ್, ಅಂತಿಮ ತೀರ್ಪು ಪ್ರಕಟಿಸಲು ಸಜ್ಜುಗೊಂಡಿದೆ.
8:47 AM, 30 Sep
ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ, ಡಾ.ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಇಂದು ಕೋರ್ಟ್ಗೆ ಗೈರಾಗುವ ಸಾಧ್ಯತೆ ಇದೆ.
8:59 AM, 30 Sep
ಬಿಜೆಪಿ ಮುಖ್ಯಸ್ಥರಾದ ಕಲ್ಯಾಣ್ ಸಿಂಗ್ ಮತ್ತು ಉಮಾ ಭಾರತಿಯವರ ಹೇಳಿಕೆಗಳನ್ನು ನ್ಯಾಯಾಲಯ ದಾಖಲಿಸಿದೆ, ಇಬ್ಬರೂ ವೈಯಕ್ತಿಕವಾಗಿ ಹಾಜರಾಗಿದ್ದರು. ಆಗಸ್ಟ್ 5 ರಂದು ಅಯೋಧ್ಯೆಯ ರಾಮ ದೇವಾಲಯದ ಗುದ್ದಲಿ ಪೂಜೆ ನಡೆಯುವುದಕ್ಕೂ ಕೆಲವೇ ದಿನಗಳ ಮೊದಲು ಅಡ್ವಾಣಿಯವರ ಹೇಳಿಕೆಯನ್ನು ದಾಖಲಿಸಲಾಗಿದೆ.
9:02 AM, 30 Sep
ಕಳೆದ ವರ್ಷ, ಉನ್ನತ ನ್ಯಾಯಾಲಯದ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಹಿಂದೂ ಮತ್ತು ಮುಸ್ಲಿಮರು ಹಕ್ಕು ಸಾಧಿಸಿದ 2.77 ಎಕರೆ ಭೂಮಿಯನ್ನು ದೇವಾಲಯ ನಿರ್ಮಾಣಕ್ಕಾಗಿ ಟ್ರಸ್ಟ್ಗೆ ಹಸ್ತಾಂತರಿಸಲಾಗುವುದು ಎಂದು ತೀರ್ಪು ನೀಡಿತ್ತು.
9:04 AM, 30 Sep
ಮಸೀದಿ ನಿರ್ಮಿಸಲು ಅಯೋಧ್ಯೆಯ ಮತ್ತೊಂದು ಸ್ಥಳದಲ್ಲಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡಲು ನ್ಯಾಯಾಲಯ ಆದೇಶಿಸಿತ್ತು.
9:06 AM, 30 Sep
ಬೆಳಿಗ್ಗೆ 10 ರೊಳಗೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬೀಳುವ ಸಾಧ್ಯತೆ ಇದೆ
9:16 AM, 30 Sep
ಸಮಯದ ಚೌಕಟ್ಟು ಇನ್ನು ಮುಂದೆ ಉಲ್ಲಂಘನೆಯಾಗದಂತೆ ಕಾನೂನು ಪ್ರಕಾರ ವಿಚಾರಣೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ಅವರನ್ನು ಮೇ ತಿಂಗಳಲ್ಲಿ ಕೇಳಿಕೊಂಡಿತ್ತು.
9:18 AM, 30 Sep
ಲಾಕ್ಡೌನ್ ಸಮಯದಲ್ಲಿ ವಿಚಾರಣಾ ಪ್ರಕ್ರಿಯೆಯಲ್ಲಿ ದಾಖಲಾಗುವ ಸಾಕ್ಷ್ಯಗಳ ರೆಕಾರ್ಡಿಂಗ್ ಮತ್ತು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಲು ವೀಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯಗಳನ್ನು ಪಡೆಯಲು ಉನ್ನತ ನ್ಯಾಯಾಲಯ ವಿಶೇಷ ನ್ಯಾಯಾಧೀಶರಿಗೆ ಸೂಚಿಸಿತ್ತು.
9:20 AM, 30 Sep
ರಾಜಕೀಯವಾಗಿ ಸೂಕ್ಷ್ಮ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ವಿಶೇಷ ನ್ಯಾಯಾಧೀಶರು ತನಗೆ ನೀಡಲಾದ ಸಮಯವನ್ನು ವಿಸ್ತರಿಸುವಂತೆ ಕೋರಿ ಪತ್ರ ಬರೆದ ನಂತರ ಉನ್ನತ ನ್ಯಾಯಾಲಯದ ಆದೇಶವನ್ನು ಅಂಗೀಕರಿಸಲಾಯಿತು.
9:28 AM, 30 Sep
ಎಲ್.ಕೆ. ಅಡ್ವಾಣಿ, ಜೋಶಿ ಮತ್ತು ಉಮಾ ಭಾರತಿ ಅವರಲ್ಲದೆ, 2017 ರ ಏಪ್ರಿಲ್ 19 ರಂದು ಉನ್ನತ ನ್ಯಾಯಾಲಯವು ಈ ಪ್ರಕರಣದಲ್ಲಿ ಪಿತೂರಿ ಆರೋಪವನ್ನು ಹೊರಿಸಿದೆ. ಇದರಲ್ಲಿ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್, ಬಿಜೆಪಿ ಸಂಸದ ವಿನಯ್ ಕಟಿಯಾರ್ ಮತ್ತು ಸಾಧ್ವಿ ರಿಥಂಬರ ಸೇರಿದ್ದಾರೆ.
9:44 AM, 30 Sep
ಏಪ್ರಿಲ್ 19, 2017 ರಂದು ಉನ್ನತ ನ್ಯಾಯಾಲಯವು ಉನ್ನತ ಮಟ್ಟದ ಪ್ರಕರಣದಲ್ಲಿ ದಿನನಿತ್ಯದ ವಿಚಾರಣೆಗೆ ಆದೇಶಿಸಿತ್ತು ಮತ್ತು ಅದನ್ನು ಎರಡು ವರ್ಷಗಳಲ್ಲಿ ತೀರ್ಮಾನಿಸಲು ವಿಶೇಷ ನ್ಯಾಯಾಧೀಶರಿಗೆ ನಿರ್ದೇಶನ ನೀಡಿತ್ತು.
9:45 AM, 30 Sep
ವಿಚಾರಣೆಯಲ್ಲಿ 25 ವರ್ಷಗಳ ವಿಳಂಬಕ್ಕಾಗಿ ನ್ಯಾಯಾಲಯವು ಸಿಬಿಐ ಮೇಲೆ ತೀವ್ರ ತರಾಟೆ ತೆಗೆದುಕೊಂಡಿತು.
9:46 AM, 30 Sep
ಸುಪ್ರೀಂ ಕೋರ್ಟ್ನ 2017 ರ ತೀರ್ಪಿನ ಮೊದಲು, 1992 ರ ಡಿಸೆಂಬರ್ 6 ರಂದು ವಿವಾದಿತ ಮಸೀದಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ಲಕ್ನೋ ಮತ್ತು ರೈಬರೆಲಿಯಲ್ಲಿ ನಡೆಯುತ್ತಿದ್ದವು.
9:48 AM, 30 Sep
ಉತ್ತರಪ್ರದೇಶದಾದ್ಯಂತ ಇಂದು ಹೆಚ್ಚಿನ ಕಟ್ಟೆಚ್ಚರಿಕೆ ನೀಡಲಾಗಿದೆ. ಅಲ್ಲಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು 2,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು, ಅವರಲ್ಲಿ ಅರ್ಧದಷ್ಟು ಸಿವಿಲ್ ಉಡುಪುಗಳಲ್ಲಿ ನಿಯೋಜಿಸಲಾಗಿದೆ ಎಂದು ಐಎಎನ್ಎಸ್ ವರದಿ ಮಾಡಿದೆ.
ಲಕ್ನೋ: ವಿಶೇಷ ಸಿಬಿಐ ನ್ಯಾಯಾಲಯದ ಸುತ್ತ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
Lucknow: Security tighetened around Special CBI court. The court will pronounce its verdict today, in Babri Masjid demolition case. pic.twitter.com/ArCv47NDsB
ಮಧ್ಯಾಹ್ನ 12ಗಂಟೆಗೆ ಬಹು ನಿರೀಕ್ಷಿತ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟವಾಗಲಿದ್ದು, ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯದ ಜಡ್ಜ್ ಎಸ್. ಕೆ ಯಾದವ್ ಅವರಿಂದ ಅಂತಿಮ ತೀರ್ಪು ಹೊರಬೀಳಲಿದೆ.
10:12 AM, 30 Sep
ಎಲ್.ಕೆ ಅಡ್ವಾಣಿ, ಎಂಎಂ ಜೋಶಿ, ಉಮಾ ಭಾರತಿ ಸೇರಿದಂತೆ 32 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ
11:01 AM, 30 Sep
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಅಂತಿಮ ಸ್ವರೂಪ ಬರೆಯುತ್ತಿರುವ ನ್ಯಾಯಾಧೀಶರು
11:02 AM, 30 Sep
ಈಗಾಗಲೇ ಕೋರ್ಟ್ ಛೇಂಬರ್ ನಲ್ಲಿರುವ ನ್ಯಾಯಾಧೀಶ ಎಸ್.ಕೆ.ಯಾದವ್. ಯಾವುದೇ ಕ್ಷಣದಲ್ಲಾದರೂ ತೀರ್ಪು ಹೊರ ಬೀಳುವ ಸಾಧ್ಯತೆ.
11:03 AM, 30 Sep
ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯದ ಹಾಲ್ ನಲ್ಲಿ ಹಾಜರಾಗಿರುವ 26 ಆರೋಪಿಗಳು.
11:05 AM, 30 Sep
ಶಿಕ್ಷೆಯಾದಲ್ಲಿ ರಾಮನಿಗಾಗಿ ಸೇವೆ ಮಾಡಿದ್ದಕ್ಕೂ ಸಾರ್ಥಕವಾಯಿತು ಎಂದು ಭಾವಿಸುತ್ತೇನೆ. ರಾಮನ ಸೇವೆ ಸಲ್ಲಿಸಲು ಹುಟ್ಟಿದ್ದಾಗಿ ಭಾವಿಸುತ್ತೇವೆ ಎಂದು ಕೋರ್ಟ್ ಹಾಲ್ ಗೆ ಹಾಜರಾಗುವ ಮುನ್ನ ಆರೋಪಿ ಪವನ್ ಪಾಂಡೆ ಹೇಳಿಕೆ ನೀಡಿದ್ದಾರೆ.
11:07 AM, 30 Sep
ಆರು ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.
11:10 AM, 30 Sep
ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಹಾಗೂ ರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಆರು ಆರೋಪಿಗಳಿಗೆ ವಿನಾಯಿತಿ ನೀಡಿದ ಕೋರ್ಟ್.
11:13 AM, 30 Sep
ಲಕ್ನೋದ ಸಿಬಿಐ ಕೋರ್ಟ್ ಹಾಲ್ ಗೆ ಆಗಮಿಸಿದ ನ್ಯಾಯಾಧೀಶ ಎಸ್.ಕೆ. ಯಾದವ್.
11:20 AM, 30 Sep
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳ ಪೈಕಿ 6 ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಉಳಿದಂತೆ 26 ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದಾರೆ.
11:24 AM, 30 Sep
ವಿನಯ್ ಕಟಿಯಾರ್, ಸಾಧ್ವಿ ರಿತಂಬರಾ, ಲಲ್ಲೂ ಸಿಂಗ್, ಧರ್ಮದಾಸ್, ಚಂಪತ್ ರಾಯ್, ಪವನ್ ಪಾಂಡೆ, ಸಾಕ್ಷಿ ಮಹಾರಾಜ್, ರಾಮ್ ವಿಲಾಸ್ ವೇದಾಂತಿ ಸೇರಿದಂತೆ 26 ಆರೋಪಿಗಳು ಕೋರ್ಟ್ ಗೆ ಹಾಜರು.
11:25 AM, 30 Sep
ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಉಮಾಭಾರತಿ ಹಾಜರು.
Babri Masjid Demolition Verdict LIVE Updates in Kannada: A special court will deliver the much-awaited judgment today in the 1992 Babri Masjid demolition case.