ಬಾಬ್ರಿ ಮಸೀದಿ ಧ್ವಂಸ ಕೇಸ್: ಕೋರ್ಟ್ ಕಟಕಟೆಯಲ್ಲಿ ನಿಂತ ಉಮಾ ಭಾರತಿ
ನವದೆಹಲಿ, ಜುಲೈ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 31, 2020ರೊಳಗೆ ಆದೇಶ ಹೊರಡಿಸುವಂತೆ ಲಕ್ನೋದ ಸಿಬಿಐ ಕೋರ್ಟಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಅದರಂತೆ, ವಿಚಾರಣೆ ಆರಂಭಗೊಂಡಿದ್ದು, ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅವರು ಗುರುವಾರ(ಜುಲೈ 3)ದಂದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿದ್ದರು.
Recommended Video
ಬಾಬ್ರಿ ಮಸೀದಿ ಧ್ವಂಸ ನಡೆದು 27 ವರ್ಷಗಳು ಕಳೆದಿದೆ. ಉತ್ತರ ಪ್ರದೇಶದ ಅಯೋಧ್ಯಾ ನಗರದಲ್ಲಿ ಹಿಂದೂ ಪರ ಸಂಘಟನೆಗಳು ಅಂದು ನಡೆಸಿದ ಕೃತ್ಯ, ಕರಸೇವಕರ ಪಾಲಿಗೆ ಶೌರ್ಯ ದಿವಸವಾಗಿದ್ದರೆ, ಮುಸ್ಲಿಂ ಸಂಘಟನೆಗಳಿಗೆ ಕಪ್ಪು ದಿನವಾಗಿದೆ. 61 ವರ್ಷ ವಯಸ್ಸಿನ ಉಮಾ ಭಾರತಿ ಅವರು ಈ ಪ್ರಕರಣದಲ್ಲಿ 19ನೇ ಆರೋಪಿಯಾಗಿದ್ದಾರೆ.
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಸೇರಿದಂತೆ ಪ್ರಮುಖವಾಗಿ 13 ಮಂದಿ ಆರೋಪಿಗಳಿದ್ದಾರೆ. ಎಲ್ಲಾ 32 ಆರೋಪಿಗಳ ಹೇಳಿಕೆಯನ್ನು ಸಿಆರ್ ಪಿಸಿ ಸೆಕ್ಷನ್ 313 ಅಡಿಯಲ್ಲಿ ಕೋರ್ಟ್ ದಾಖಲಿಸುತ್ತಿದೆ. ವಿಡಿಯೋ ಕಾನ್ಫರೆನ್ಸ್ ವಿಚಾರಣೆ ಬಳಸಲು ವಕೀಲರು ಒಪ್ಪಿಕೊಂಡಿದ್ದಾರೆ.

ವಿನಯ್ ಕಟಿಯಾರ್ ಮನೆಯಲ್ಲಿ ನಿರ್ಧಾರ
ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಗೌಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು.ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು 1990ರಲ್ಲಿ ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್ ಶೀಟ್ ನಲ್ಲಿ ಹೇಳಿದೆ.

16ನೇ ಶತಮಾನದ ಬಾಬ್ರಿ ಮಸೀದಿ
1992ರಲ್ಲಿ ಅಯೋಧ್ಯೆಯಲ್ಲಿದ್ದ 16ನೇ ಶತಮಾನದ ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಶಿ ಇತರ ಹನ್ನೆರಡು ಮಂದಿ ವಿರುದ್ಧದ ಸಂಚು ರೂಪಿಸಿದ ಆರೋಪವನ್ನು ರಾಯ್ ಬರೇಲಿ ಕೋರ್ಟ್ ಕೈಬಿಟ್ಟು, ಖುಲಾಸೆ ಮಾಡಿತ್ತು.
2010ರಲ್ಲಿ ಅಲಹಾಬಾದ್ ಹೈ ಕೋರ್ಟ್ ಕೆಳಹಂತದ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿತ್ತು. ಇದೀಗ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

ಆರೋಪ ಪಟ್ಟಿ ರದ್ದು ಮಾಡದಂತೆ ಸಿಬಿಐ ಮನವಿ
ಎಲ್ ಕೆ ಅಡ್ವಾಣಿ ಸೇರಿದಂತೆ 13 ಜನ ಆರೋಪಿಗಳ ಮೇಲಿನ ಆರೋಪ ಪಟ್ಟಿ ರದ್ದು ಮಾಡದಂತೆ ಸಿಬಿಐ ಕೋರಿದ್ದ ಅರ್ಜಿಗೆ ಪುರಸ್ಕಾರ ಸಿಕ್ಕಿತ್ತು. ಕಲ್ಯಾಣ್ ಸಿಂಗ್ ಹೊರತುಪಡಿಸಿ ಉಳಿದವರ ಮೇಲೆ ವಿಚಾರಣೆ ನಡೆಸಲು ಆದೇಶಿಸಲಾಗಿತ್ತು. ಕಲ್ಯಾಣ್ ಸಿಂಗ್ ನಂತರ ಜಾಮೀನು ಪಡೆದುಕೊಂಡಿದ್ದರು.

32 ಜನರ ವಿರುದ್ಧ ವಿಚಾರಣೆ
ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ, ಸಂಸದರಾದ ಬ್ರಿಜ್ ಭೂಷಣ್ ಸಿಂಗ್, ಸಾಕ್ಷಿ ಮಹಾರಾಜ್, ಭೂಷಣ ಸಿಂಗ್, ಆರ್ ಎನ್ ಶ್ರೀವಾಸ್ತವ, ಲಲ್ಲು ಸಿಂಗ್ ಸೇರಿದಂತೆ 32 ಜನರ ವಿರುದ್ಧ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಬಳಸಿ ಮುಕ್ತಾಯಗೊಳಿಸಬಹುದು ಎಂದು ಜಸ್ಟೀಸ್ ಆರ್ ಎಫ್ ನಾರಿಮನ್ ಹಾಗೂ ನ್ಯಾ ಸೂರ್ಯಕಾಂತ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications