'ಬಿಗ್ ಬಾಸ್ ಬ್ಯಾನ್ ಮಾಡಿ, ಸಲ್ಮಾನ್ ಬಂಧಿಸಿ', ಕೇಂದ್ರಕ್ಕೆ ಬಿಜೆಪಿ ಶಾಸಕನ ಪತ್ರ
ಲಕ್ನೋ, ಅಕ್ಟೋಬರ್ 10: ವಿವಾದಾತ್ಮಕ ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿ ಆವೃತ್ತಿ ವಿರುದ್ಧ ಮತ್ತೊಂದು ಪತ್ರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಕೈ ಸೇರಿದೆ. ಕಾರ್ಮಿಕ ಒಕ್ಕೂಟದ ನಂತರ ಉತ್ತರಪ್ರದೇಶದ ಜನಪ್ರತಿನಿಧಿಯೊಬ್ಬರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಉತ್ತರಪ್ರದೇಶದ ಗಾಜಿಯಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್ ಅವರು, ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅಸಭ್ಯ, ಅಶ್ಲೀಲ ದೃಶ್ಯಗಳಿದ್ದು, ಸಮಾಜದ ಸ್ವಾಸ್ಥ್ಯಕ್ಕೆ ಮಾರಕವಾಗಿದೆ ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
"ಬಿಗ್ ಬಾಸ್ ಶೋ ನಲ್ಲಿ ಬೇರೆ ಬೇರೆ ಜನಾಂಗಕ್ಕೆ ಸೇರಿದ ಗಂಡು-ಹೆಣ್ಣುಗಳು ಒಂದೇ ಹಾಸಿಗೆಯನ್ನು ಹಂಚಿಕೊಳ್ಳುತ್ತಾರೆ, ಶೋನಿಂದ ಜನರಿಗೆ ಕೆಟ್ಟ ಸಂದೇಶ ರವಾನೆಯಾಗಲಿದ್ದು, ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಭದ್ರತಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಸಲ್ಮಾನ್ ಖಾನ್, ಕಲರ್ಸ್ ವಾಹಿನಿ ಮುಖ್ಯಸ್ಥರನ್ನು ಬಂಧಿಸುವಂತೆ ಕೋರಿದ್ದಾರೆ"

ಉತ್ತರಪ್ರದೇಶದ ಗಾಜಿಯಾಬಾದ್ ನಗರದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಸಲ್ಮಾನ್ ಖಾನ್ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲವ್ ಜಿಹಾದ್ ಗೆ ಉತ್ತೇಜನ ನೀಡುವಂಥ ಕಾರ್ಯಕ್ರಮ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.
ಕಾರ್ಮಿಕರ ಒಕ್ಕೂಟ ಅಷ್ಟೇ ಅಲ್ಲ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಬಿಗ್ ಬಾಸ್ 13ರ ಎಪಿಸೋಡ್ ಗಳ ಬಗ್ಗೆ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಬೆಡ್ ಫ್ರೆಂಡ್ ಫಾರೇವರ್ ಎಪಿಸೋಡ್, ಕಿಸ್ ಬಗ್ಗೆ ಸಲ್ಮಾನ್ ಖಾನ್ ವೀಕೇಂಡ್ ಕಾ ವಾರ್ ನಲ್ಲಿ ನಡೆಸಿಕೊಟ್ಟ ಕಾರ್ಯಕ್ರಮದಿಂದ ಈ ಶೋನ ವಿರೋಧಿಗಳು ಹೆಚ್ಚಾಗಿದ್ದಾರೆ. ಟ್ವಿಟ್ಟರ್ ನಲ್ಲಿ 'BoycottBiggBoss13', 'JehadFelataBiggBoss' and 'UnsubscribeColorsTV'. ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡಲಾಗುತ್ತಿದೆ. ಟೀಕೆ ಟಿಪ್ಪಣಿ, ಆಕ್ರೋಶದ ಪ್ರತಿಕ್ರಿಯೆಗಳು ಬರುತ್ತಿವೆ. (ಪಿಟಿಐ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications