'ಬಿಗ್ ಬಾಸ್ ಬ್ಯಾನ್ ಮಾಡಿ, ಸಲ್ಮಾನ್ ಬಂಧಿಸಿ', ಕೇಂದ್ರಕ್ಕೆ ಬಿಜೆಪಿ ಶಾಸಕನ ಪತ್ರ
ಲಕ್ನೋ, ಅಕ್ಟೋಬರ್ 10: ವಿವಾದಾತ್ಮಕ ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿ ಆವೃತ್ತಿ ವಿರುದ್ಧ ಮತ್ತೊಂದು ಪತ್ರ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಕೈ ಸೇರಿದೆ. ಕಾರ್ಮಿಕ ಒಕ್ಕೂಟದ ನಂತರ ಉತ್ತರಪ್ರದೇಶದ ಜನಪ್ರತಿನಿಧಿಯೊಬ್ಬರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಉತ್ತರಪ್ರದೇಶದ ಗಾಜಿಯಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್ ಅವರು, ಸಲ್ಮಾನ್ ಖಾನ್ ನಿರೂಪಣೆಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅಸಭ್ಯ, ಅಶ್ಲೀಲ ದೃಶ್ಯಗಳಿದ್ದು, ಸಮಾಜದ ಸ್ವಾಸ್ಥ್ಯಕ್ಕೆ ಮಾರಕವಾಗಿದೆ ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
"ಬಿಗ್ ಬಾಸ್ ಶೋ ನಲ್ಲಿ ಬೇರೆ ಬೇರೆ ಜನಾಂಗಕ್ಕೆ ಸೇರಿದ ಗಂಡು-ಹೆಣ್ಣುಗಳು ಒಂದೇ ಹಾಸಿಗೆಯನ್ನು ಹಂಚಿಕೊಳ್ಳುತ್ತಾರೆ, ಶೋನಿಂದ ಜನರಿಗೆ ಕೆಟ್ಟ ಸಂದೇಶ ರವಾನೆಯಾಗಲಿದ್ದು, ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಭದ್ರತಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಸಲ್ಮಾನ್ ಖಾನ್, ಕಲರ್ಸ್ ವಾಹಿನಿ ಮುಖ್ಯಸ್ಥರನ್ನು ಬಂಧಿಸುವಂತೆ ಕೋರಿದ್ದಾರೆ"

ಉತ್ತರಪ್ರದೇಶದ ಗಾಜಿಯಾಬಾದ್ ನಗರದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಸಲ್ಮಾನ್ ಖಾನ್ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲವ್ ಜಿಹಾದ್ ಗೆ ಉತ್ತೇಜನ ನೀಡುವಂಥ ಕಾರ್ಯಕ್ರಮ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.
ಕಾರ್ಮಿಕರ ಒಕ್ಕೂಟ ಅಷ್ಟೇ ಅಲ್ಲ ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಬಿಗ್ ಬಾಸ್ 13ರ ಎಪಿಸೋಡ್ ಗಳ ಬಗ್ಗೆ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಬೆಡ್ ಫ್ರೆಂಡ್ ಫಾರೇವರ್ ಎಪಿಸೋಡ್, ಕಿಸ್ ಬಗ್ಗೆ ಸಲ್ಮಾನ್ ಖಾನ್ ವೀಕೇಂಡ್ ಕಾ ವಾರ್ ನಲ್ಲಿ ನಡೆಸಿಕೊಟ್ಟ ಕಾರ್ಯಕ್ರಮದಿಂದ ಈ ಶೋನ ವಿರೋಧಿಗಳು ಹೆಚ್ಚಾಗಿದ್ದಾರೆ. ಟ್ವಿಟ್ಟರ್ ನಲ್ಲಿ 'BoycottBiggBoss13', 'JehadFelataBiggBoss' and 'UnsubscribeColorsTV'. ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ರೆಂಡ್ ಮಾಡಲಾಗುತ್ತಿದೆ. ಟೀಕೆ ಟಿಪ್ಪಣಿ, ಆಕ್ರೋಶದ ಪ್ರತಿಕ್ರಿಯೆಗಳು ಬರುತ್ತಿವೆ. (ಪಿಟಿಐ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications