ಅತ್ಯಾಚಾರ ಆರೋಪಿ ಶಾಸಕ ಕೊನೆಗೂ ಬಿಜೆಪಿಯಿಂದ ಉಚ್ಚಾಟನೆ
ಲಕ್ನೋ, ಆಗಸ್ಟ್ 1: ಉತ್ತರ ಪ್ರದೇಶದ ಉನ್ನಾವೋದಲ್ಲಿ ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಜೈಲಿನಲ್ಲಿದ್ದುಕೊಂಡೇ ಆಕೆಯ ಹತ್ಯೆಗೆ ಸಂಚು ರೂಪಿಸಿದ ಆರೋಪಕ್ಕೆ ಒಳಗಾಗಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ.
ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಕುಲದೀಪ್ ಸೆಂಗರ್, ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರನ್ನು ಕೊಲ್ಲಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ರಾಯ್ ಬರೇಲಿ ಸಮೀಪ ಟ್ರಕ್ ಒಂದು ಸಂತ್ರಸ್ತೆಯಿದ್ದ ಕಾರ್ಗೆ ಡಿಕ್ಕಿ ಹೊಡೆದಿತ್ತು. ಅದರಲ್ಲಿ ಆಕೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದರೆ, ಸಂತ್ರಸ್ತೆ ಮತ್ತು ಆಕೆಯ ಪರ ವಕೀಲರು ತೀವ್ರ ಗಾಯಗೊಂಡಿದ್ದಾರೆ.
ಇದು ಬಿಜೆಪಿಯ ಪ್ರಭಾವಿ ಶಾಸಕ ಸೆಂಗರ್ ಅವರ ನಿರ್ದೇಶನದಂತೆ ನಡೆದಿರುವ ಕೊಲೆ ಪ್ರಯತ್ನ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಸೆಂಗರ್ ಅವರನ್ನು ಪಕ್ಷದಿಂದ ಹೊರಹಾಕದ ಮತ್ತು ಯಾವುದೇ ಪ್ರತಿಕ್ರಿಯೆ ನೀಡದ ಬಿಜೆಪಿ ವಿರುದ್ಧ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. ಕೊನೆಗೆ ಪಕ್ಷದಿಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಈಗ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಅದರ ಬೆನ್ನಲ್ಲೇ ಕೊನೆಗೂ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡುವ ಪ್ರಕಟಣೆ ಹೊರಡಿಸಲಾಗಿದೆ.

ಇದರ ಜತೆಗೆ ಅತ್ಯಾಚಾರ ಸಂತ್ರಸ್ತೆಯ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಪೈಕಿ ಇಬ್ಬರು ಮಹಿಳಾ ಪೊಲೀಸರು ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆಕೆಯ ರಕ್ಷಣೆಗೆ 9 ಮಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಅಪಘಾತ ನಡೆದ ದಿನ ಕಾರ್ನಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಕಾರ್ನಲ್ಲಿ ಜಾಗವಿಲ್ಲದ ಕಾರಣ ಬರುವುದು ಬೇಡ ಎಂದು ಸ್ವತಃ ಸಂತ್ರಸ್ತೆಯ ಕುಟುಂಬದವರೇ ಸಿಬ್ಬಂದಿಗೆ ಹೇಳಿದ್ದರು ಎಂದು ಹೇಳಲಾಗಿದೆ. ಅಪಘಾತ ನಡೆಸುವ ಉದ್ದೇಶದಿಂದ ಅವರ ಜತೆ ಹೋಗದಂತೆ ಪೊಲೀಸರಿಗೆ ಇಲಾಖೆ ಕಡೆಯಿಂದಲೇ ಸೂಚನೆ ಬಂದಿತ್ತು ಎಂದು ಆರೋಪಿಸಲಾಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications