ಸಮರಾಂಗಣ: ಯುಪಿಎ ಅಧ್ಯಕ್ಷೆ ವಿರುದ್ಧ ಮಾಜಿ ಕಾಂಗ್ರೆಸ್ಸಿಗ ಕಣಕ್ಕೆ
ರಾಯ್ ಬರೇಲಿ(ಉ.ಪ್ರ), ಏಪ್ರಿಲ್ 05: ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿರುವ ರಾಯ್ ಬರೇಲಿ ಕ್ಷೇತ್ರದಲ್ಲಿ ಮಾಜಿ ಕಾಂಗ್ರೆಸ್ ನಾಯಕರನ್ನು ಎದುರಾಳಿಯಾಗಿ ಕಣಕ್ಕಿಳಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಾಯ್ಬರೇಲಿಯ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ ಎಂಎಲ್ ದಿನೇಶ್ ಪ್ರತಾಪ್ ಸಿಂಗ್ ಅವರು ಸೋನಿಯಾ ವಿರುದ್ಧ ಕಣಕ್ಕಿಳಿದಿದ್ದಾರೆ.
2016ರಲ್ಲಿ ವಿಧಾನಪರಿಷತ್ ಗೆ ಎರಡನೇ ಬಾರಿಗೆ ಆಯ್ಕೆಯಾದ ದಿನೇಶ್ ಅವರು 2018ರಲ್ಲಿ ಕಾಂರ್ಗೆಸ್ ತೊರೆದು ಬಿಜೆಪಿ ಸೇರಿದ್ದರು. ವಿಶೇಷವೆಂದರೆ, ದಿನೇಶ್ ಕಿರಿಯ ಸಹೋದರ ರಾಕೇಶ್ ಸಿಂಗ್ ರಾಯ್ಬರೇಲಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರ್ಚಂದಪುರ್ ವಿಧಾನಸಭಾ ಕ್ಷೇತ್ರದ ಶಾಸಕ. 1966, 1996 ಹಾಗೂ 1998 ಹೊರತುಪಡಿಸಿ 1952ರಿಂದ ರಾಯ್ಬರೇಲಿ ಕಾಂಗ್ರೆಸ್ ವಶದಲ್ಲಿದೆ.

2004ರಿಂದ ಈ ಕ್ಷೇತ್ರದಿಂದ ಸೋನಿಯಾ ಆಯ್ಕೆಯಾಗುತ್ತಿದ್ದಾರೆ.ಸೋನಿಯಾ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಯತ್ನಿಸಿತ್ತು. ದೆಹಲಿ ಸಂಸದೆ ಮೀನಾಕ್ಷಿ ಲೇಖಿ, ಉತ್ತರಪ್ರದೇಶದ ಸಚಿವೆ ಅನುಪಮಾ ಜೈಸ್ವಾಲ್, ಉತ್ತರಪ್ರದೇಶದ ಬಿಜೆಪಿ ವಕ್ತಾರ, ನಟ ಮನೋ ಬಾಜಪೇಯಿ ಅವರ ಹೆಸರುಗಳು ಕೂಡಾ ಪರಿಗಣಿಸಲಾಗಿತ್ತು. ಕೊನೆಗೆ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ಅವಕಾಶ ಸಿಕ್ಕಿದೆ.
ಇದೇ ವೇಳೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸ್ಪರ್ಧಿಸಿರ ಆಜಂಗಢದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭೋಜಪುರಿ ನಟ, ಗಾಯಕ ದಿನೇಶ್ ಲಾಲ್ ಯಾದವ್ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ವಿರುದ್ಧ ವಿರುದ್ಧ ಪ್ರೇಮ್ ಸಿಂಗ್ ಶಾಖ್ಯ ಅವರು ಸ್ಪರ್ಧಿಸುತ್ತಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications