ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಬಿಜೆಪಿಗೆ ಆತಂಕವಾಗಿದೆ: ಅಖಿಲೇಶ್
ನವದೆಹಲಿ, ಜನವರಿ 13: "ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿಗೆ ಆತಂಕವನ್ನುಂಟು ಮಾಡಿದೆ" ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿಯನ್ನು ಶನಿವಾರ ಎಸ್ಪಿ-ಬಿಎಸ್ಪಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಘೋಷಿಸಿದ್ದಾರೆ.
ಮಾಯಾ-ಅಖಿಲೇಶ್ ರನ್ನು ಗೌರವಿಸುತ್ತೇನೆ: ರಾಹುಲ್ ಗಾಂಧಿ
ಈ ಬೆಳವಣಿಗೆ ರಾಷ್ಟ್ರ ರಾಜಕಾರಣವನ್ನು ತಲ್ಲಣಗೊಳಿಸಿದ್ದು, ಬಿಜೆಪಿಗೆ ಈಗಾಗಲೇ ಸೋಲಿನ ಭಯ ಆರಂಭವಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.
ಎಸ್ಪಿ-ಬಿಎಸ್ಪಿ ಮೈತ್ರಿ: ಇದೇ ಅಂತಿಮವಲ್ಲ ಎಂದ ಚಿದಂಬರಂ!
2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳನ್ನು ಸಮಾನವಾಗಿ ಹಂಚಿಕೊಂಡಿವೆ.